ಮೈಸೂರು ನಗರ

ಆ.10ಕ್ಕೆ ಜೀತ ವಿಮುಕ್ತರ ರಾಜ್ಯಮಟ್ಟದ ಸಮಾವೇಶ

ಮೈಸೂರು : ನಗರದ ಕಲಾಮಂದಿರದಲ್ಲಿ ಆ.10 ರಂದು ಜೀತ ವಿಮುಕ್ತರ ರಾಜ್ಯಮಟ್ಟದ ಸಮಾವೇಶ ಹಾಗೂ ಒಕ್ಕೂಟದ ಚುನಾವಣೆಯನ್ನು ನಡೆಸಲಾಗುವುದು ಎಂದು ಜೀತ ವಿಮುಕ್ತಿ ಕರ್ನಾಟಕ ಹಾಗೂ ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕರ ಒಕ್ಕೂಟದ ರಾಜ್ಯ ಸಂಘಟನಾ ಸಂಚಾಲಕ ಉಮೇಶ್ ಜೀವಿಕ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಗಾಂಧಿನಗರದ ಉರಿಲಿಂಗಿ ಪೆದ್ದೀಶ್ವರ ಮಠದ ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಸಂಸದ ಸುನಿಲ್ ಬೋಸ್, ಶಾಸಕರಾದ ಅನಿಲ್ ಚಿಕ್ಕಮಾದು, ಕೆ.ಹರೀಶ್‌ಗೌಡ, ದರ್ಶನ್ ಧ್ರುವನಾರಾಯಣ, ವಿಧಾನಸಭಾ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಡಾ.ಡಿ.ತಿಮ್ಮಯ್ಯ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಎಸ್.ಯುಕೇಶ್‌ಕುಮಾರ್, ದಸಂಸ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

‘ಜೀತ ಸಮಸ್ಯೆ ಒಳನೋಟ’ ಕುರಿತು ಜೀವಿಕ ಸಂಸ್ಥಾಪಕ ಡಾ.ಕಿರಣ್ ಕಮಲ್ ಪ್ರಸಾದ್, ರಾಜ್ಯ ಸಂಘಟನಾ ಸಂಚಾಲಕ ಬಿ.ಉಮೇಶ ನೂರಲಕುಪ್ಪೆ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಜಿಲ್ಲಾ ಸಂಚಾಲಕ ಬಸವರಾಜು ಮನವಿ ಸಲ್ಲಿಸಲಿದ್ದಾರೆ. ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ಮಹದೇವು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಒಕ್ಕೂಟದ ರಾಜ್ಯಾಧ್ಯಕ್ಷ ಮಹದೇವ, ಜಿಲ್ಲಾ ಸಂಚಾಲಕ ಜೀವಿಕ ಬಸವರಾಜು, ತಾಲ್ಲೂಕು ಸಂಚಾಲಕ ಚಂದ್ರಶೇಖರ್ ಮೂರ್ತಿ, ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಗಣೇಶ್ ಕೆ.ಎಡತೊರೆ, ಸರಗೂರು ತಾಲ್ಲೂಕು ಅಧ್ಯಕ್ಷ ಬಸವರಾಜು ತೆಲಗುಮಸಹಳ್ಳಿ, ಜಾಗೃತಿ ಸಮಿತಿ ಸದಸ್ಯ ಶಿವಣ್ಣ ಯಲಮತ್ತೂರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

10 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

12 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

15 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

17 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

18 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

19 hours ago