State police have failed in detecting criminal cases: BJP spokesperson M.G. Mahesh
ಮೈಸೂರು: ರಾಜ್ಯದ ಹಲವಾರು ಕಡೆ ನಡೆಯುತ್ತಿದ್ದ ಗಂಭೀರ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ರಾಜ್ಯದ ಪೊಲೀಸರು ವಿಫಲರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಆರೋಪ ಮಾಡಿದ್ದಾರೆ.
ಮೈಸೂರಿನಲ್ಲಿ ಎಂಡಿಎಂಎ ಮಾದಕ ಪದಾರ್ಥ ತಯಾರಿಕಾ ಘಟಕ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಗೃಹ ಇಲಾಖೆ ಏನು ಮಾಡ್ತಿದೆ?, ಗೃಹ ಸಚಿವರು ಏನು ಮಾಡ್ತಿದ್ದಾರೆ? ಎಂದು ಪ್ರಶ್ನೆ ಮಾಡಿದರು. ಮೈಸೂರಿನಲ್ಲಿ ಎಂಡಿಎಂಎ ತಯಾರಿಸುತ್ತಿದ್ದ ಘಟಕವನ್ನು ಮಹಾರಾಷ್ಟ್ರದ ಪೊಲೀಸರು ಬಂದು ಪತ್ತೆ ಹಚ್ಚಿದ್ದಾರೆ. ಹಾಗಾದರೆ ಮೈಸೂರಿನ ಪೊಲೀಸರು ಏನು ಮಾಡ್ತಿದ್ರು. ಇವರೇನು ಕತ್ತೆ ಕಾಯ್ತಿದ್ರಾ? ಇಲ್ಲಿನ ಅಕ್ರಮ ಬಯಲಿಗೆಳೆಯಲು ಮಹಾರಾಷ್ಟ್ರದ ಪೊಲೀಸರು ಬರಬೇಕಾಯ್ತು. ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನು ಎನ್ಐಎ ತಂಡ ಪತ್ತೆ ಮಾಡಿದೆ. ರಾಜ್ಯದ ಹಲವಾರು ಕಡೆ ನಡೆಯುತ್ತಿದ್ದ ಗಂಭೀರ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ರಾಜ್ಯದ ಪೊಲೀಸರು ವಿಫಲರಾಗಿದ್ದಾರೆ ಎಂದು ರಾಜ್ಯದ ಪೊಲೀಸರ ವಿರುದ್ಧ ಕಿಡಿಕಾರಿದರು.
ಇನ್ನು ಮೈಸೂರಿನ ಎನ್.ಆರ್.ಕ್ಷೇತ್ರದಲ್ಲಿ ಮಾದಕ ಪದಾರ್ಥಗಳ ಅಕ್ರಮ ಮಾರಾಟದ ಬಗ್ಗೆ ಸ್ಥಳೀಯ ಶಾಸಕ ತನ್ವೀರ್ ಸೇಠ್ ಕಳವಳ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ತನ್ವೀರ್ ಸೇಠ್ ಸತತವಾಗಿ ಎನ್.ಆರ್.ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದಾರೆ. ಆ ಕ್ಷೇತ್ರದಲ್ಲಿ ನಡೆಯುತ್ತಿರುವ ಅಪರಾಧ ಕೃತ್ಯಗಳಿಗೆ ತನ್ವೀರ್ ಸೇಠ್ ನೈತಿಕವಾಗಿ ಹೊಣೆ ಹೊರಬೇಕು. ಕೇವಲ ಕಳವಳ ವ್ಯಕ್ತಪಡಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ತನ್ವೀರ್ ಸೇಠ್ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…