State police have failed in detecting criminal cases: BJP spokesperson M.G. Mahesh
ಮೈಸೂರು: ರಾಜ್ಯದ ಹಲವಾರು ಕಡೆ ನಡೆಯುತ್ತಿದ್ದ ಗಂಭೀರ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ರಾಜ್ಯದ ಪೊಲೀಸರು ವಿಫಲರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಆರೋಪ ಮಾಡಿದ್ದಾರೆ.
ಮೈಸೂರಿನಲ್ಲಿ ಎಂಡಿಎಂಎ ಮಾದಕ ಪದಾರ್ಥ ತಯಾರಿಕಾ ಘಟಕ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಗೃಹ ಇಲಾಖೆ ಏನು ಮಾಡ್ತಿದೆ?, ಗೃಹ ಸಚಿವರು ಏನು ಮಾಡ್ತಿದ್ದಾರೆ? ಎಂದು ಪ್ರಶ್ನೆ ಮಾಡಿದರು. ಮೈಸೂರಿನಲ್ಲಿ ಎಂಡಿಎಂಎ ತಯಾರಿಸುತ್ತಿದ್ದ ಘಟಕವನ್ನು ಮಹಾರಾಷ್ಟ್ರದ ಪೊಲೀಸರು ಬಂದು ಪತ್ತೆ ಹಚ್ಚಿದ್ದಾರೆ. ಹಾಗಾದರೆ ಮೈಸೂರಿನ ಪೊಲೀಸರು ಏನು ಮಾಡ್ತಿದ್ರು. ಇವರೇನು ಕತ್ತೆ ಕಾಯ್ತಿದ್ರಾ? ಇಲ್ಲಿನ ಅಕ್ರಮ ಬಯಲಿಗೆಳೆಯಲು ಮಹಾರಾಷ್ಟ್ರದ ಪೊಲೀಸರು ಬರಬೇಕಾಯ್ತು. ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನು ಎನ್ಐಎ ತಂಡ ಪತ್ತೆ ಮಾಡಿದೆ. ರಾಜ್ಯದ ಹಲವಾರು ಕಡೆ ನಡೆಯುತ್ತಿದ್ದ ಗಂಭೀರ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ರಾಜ್ಯದ ಪೊಲೀಸರು ವಿಫಲರಾಗಿದ್ದಾರೆ ಎಂದು ರಾಜ್ಯದ ಪೊಲೀಸರ ವಿರುದ್ಧ ಕಿಡಿಕಾರಿದರು.
ಇನ್ನು ಮೈಸೂರಿನ ಎನ್.ಆರ್.ಕ್ಷೇತ್ರದಲ್ಲಿ ಮಾದಕ ಪದಾರ್ಥಗಳ ಅಕ್ರಮ ಮಾರಾಟದ ಬಗ್ಗೆ ಸ್ಥಳೀಯ ಶಾಸಕ ತನ್ವೀರ್ ಸೇಠ್ ಕಳವಳ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ತನ್ವೀರ್ ಸೇಠ್ ಸತತವಾಗಿ ಎನ್.ಆರ್.ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದಾರೆ. ಆ ಕ್ಷೇತ್ರದಲ್ಲಿ ನಡೆಯುತ್ತಿರುವ ಅಪರಾಧ ಕೃತ್ಯಗಳಿಗೆ ತನ್ವೀರ್ ಸೇಠ್ ನೈತಿಕವಾಗಿ ಹೊಣೆ ಹೊರಬೇಕು. ಕೇವಲ ಕಳವಳ ವ್ಯಕ್ತಪಡಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ತನ್ವೀರ್ ಸೇಠ್ ವಿರುದ್ಧ ವಾಗ್ದಾಳಿ ನಡೆಸಿದರು.
ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…
ಮೈಸೂರು : ಸೋಮವಾರ ಪಬ್ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…