State police have failed in detecting criminal cases: BJP spokesperson M.G. Mahesh
ಮೈಸೂರು: ರಾಜ್ಯದ ಹಲವಾರು ಕಡೆ ನಡೆಯುತ್ತಿದ್ದ ಗಂಭೀರ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ರಾಜ್ಯದ ಪೊಲೀಸರು ವಿಫಲರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಆರೋಪ ಮಾಡಿದ್ದಾರೆ.
ಮೈಸೂರಿನಲ್ಲಿ ಎಂಡಿಎಂಎ ಮಾದಕ ಪದಾರ್ಥ ತಯಾರಿಕಾ ಘಟಕ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಗೃಹ ಇಲಾಖೆ ಏನು ಮಾಡ್ತಿದೆ?, ಗೃಹ ಸಚಿವರು ಏನು ಮಾಡ್ತಿದ್ದಾರೆ? ಎಂದು ಪ್ರಶ್ನೆ ಮಾಡಿದರು. ಮೈಸೂರಿನಲ್ಲಿ ಎಂಡಿಎಂಎ ತಯಾರಿಸುತ್ತಿದ್ದ ಘಟಕವನ್ನು ಮಹಾರಾಷ್ಟ್ರದ ಪೊಲೀಸರು ಬಂದು ಪತ್ತೆ ಹಚ್ಚಿದ್ದಾರೆ. ಹಾಗಾದರೆ ಮೈಸೂರಿನ ಪೊಲೀಸರು ಏನು ಮಾಡ್ತಿದ್ರು. ಇವರೇನು ಕತ್ತೆ ಕಾಯ್ತಿದ್ರಾ? ಇಲ್ಲಿನ ಅಕ್ರಮ ಬಯಲಿಗೆಳೆಯಲು ಮಹಾರಾಷ್ಟ್ರದ ಪೊಲೀಸರು ಬರಬೇಕಾಯ್ತು. ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನು ಎನ್ಐಎ ತಂಡ ಪತ್ತೆ ಮಾಡಿದೆ. ರಾಜ್ಯದ ಹಲವಾರು ಕಡೆ ನಡೆಯುತ್ತಿದ್ದ ಗಂಭೀರ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ರಾಜ್ಯದ ಪೊಲೀಸರು ವಿಫಲರಾಗಿದ್ದಾರೆ ಎಂದು ರಾಜ್ಯದ ಪೊಲೀಸರ ವಿರುದ್ಧ ಕಿಡಿಕಾರಿದರು.
ಇನ್ನು ಮೈಸೂರಿನ ಎನ್.ಆರ್.ಕ್ಷೇತ್ರದಲ್ಲಿ ಮಾದಕ ಪದಾರ್ಥಗಳ ಅಕ್ರಮ ಮಾರಾಟದ ಬಗ್ಗೆ ಸ್ಥಳೀಯ ಶಾಸಕ ತನ್ವೀರ್ ಸೇಠ್ ಕಳವಳ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ತನ್ವೀರ್ ಸೇಠ್ ಸತತವಾಗಿ ಎನ್.ಆರ್.ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದಾರೆ. ಆ ಕ್ಷೇತ್ರದಲ್ಲಿ ನಡೆಯುತ್ತಿರುವ ಅಪರಾಧ ಕೃತ್ಯಗಳಿಗೆ ತನ್ವೀರ್ ಸೇಠ್ ನೈತಿಕವಾಗಿ ಹೊಣೆ ಹೊರಬೇಕು. ಕೇವಲ ಕಳವಳ ವ್ಯಕ್ತಪಡಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ತನ್ವೀರ್ ಸೇಠ್ ವಿರುದ್ಧ ವಾಗ್ದಾಳಿ ನಡೆಸಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…