ಮೈಸೂರು: ಈಗಾಗಲೇ ಪಕ್ಷದಲ್ಲಿ ತಾಲ್ಲೂಕು, ಜಿಲ್ಲಾ ಹಾಗೂ ಬೂತ್ ಅಧ್ಯಕ್ಷರ ಆಯ್ಕೆಯಾಗಿದೆ. ವಾರದೊಳಗೆ ರಾಜ್ಯಾಧ್ಯಕ್ಷರ ಆಯ್ಕೆಯಾಗಲಿದೆ. ತದನಂತರ ಪಕ್ಷದೊಳಗಿನ ಎಲ್ಲ ಗೊಂದಲಗಳಿಗೆ ತೆರೆ ಬೀಳಲಿದೆ ಎಂದು ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ತಿಳಿಸಿದ್ದಾರೆ.
ಈ ಬಗ್ಗೆ ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2025-26ನೇ ಸಾಲಿನ ಕೇಂದ್ರ ಬಜೆಟನ್ನು ಸ್ವಾಗತಿಸಿದರು. 15ನೇ ಹಣಕಾಸು ಆಯೋಗ ನೀಡಿರುವ ಅನುದಾನದಲ್ಲಿ ಮಧ್ಯಮ ವರ್ಗದ ಜನರಿಗೆ ತುಂಬಾ ಅನುಕೂಲವಿದೆ. ಬಜೆಟ್ ಟೀಕಿಸುವ ಭರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಜನರಿಗೆ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಇನ್ನು ಕಾಂಗ್ರೆಸ್ ರಾಜ್ಯ ವಕ್ತಾರ ಎಂ.ಲಕ್ಷ್ಮಣ್ ಬಿಜೆಪಿ ಸಂಸದರಿಗೆ ಅನುದಾನ ಕೇಳುವ ಧೈರ್ಯ ಇಲ್ಲ ಎಂದು ಹೇಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದಾಗ ಕರ್ನಾಟಕ ಸಂಸದರು ತಂದು ಯಾವ ಅಭಿವೃದ್ಧಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ರಾಜ್ಯಕ್ಕೂ ಮಲತಾಯಿ ಧೋರಣೆ ಮಾಡಿಲ್ಲ ಎಂದರು.
ಮೈಸೂರಿನ ರೈಲ್ವೆ ಉನ್ನತೀಕರಣ, ವಿಮಾನ ನಿಲ್ದಾಣ, ಮೈಸೂರು ಬೆಂಗಳೂರು ಹೆದ್ದಾರಿ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಬರಬೇಕಾಯಿತು ಎಂದು ಹೇಳಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…