ಮೈಸೂರು: ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬಸ್ಗಳ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ.
ಬಸ್ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ತೀವ್ರ ಪರದಾಟ ನಡೆಸುತ್ತಿದ್ದಾರೆ. ಶಾಲಾ-ಕಾಲೇಜುಗಳಿಗೆ ಹೋಗಲು ವಿದ್ಯಾರ್ಥಿಗಳು ಬೆಳ್ಳಂಬೆಳಿಗ್ಗೆಯೇ ಪರದಾಟ ನಡೆಸಿದ್ದು, ಎಷ್ಟೋ ಮಕ್ಕಳು ಇಂದು ಶಾಲೆಗೆ ಹೋಗದೇ ಮನೆಯಲ್ಲಿ ಉಳಿದಿದ್ದಾರೆ.
ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿಂದು ಖಾಸಗಿ ಬಸ್ಗಳು ರಸ್ತೆಗಿಳಿದಿದೆ. ಖಾಸಗಿ ಬಸ್ಸುಗಳಲ್ಲಿ ಜನರು ಪ್ರಯಾಣ ಬೆಳೆಸುತ್ತಿದ್ದು, ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಇನ್ನು ಸಾರಿಗೆ ನೌಕರರು ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಯಾವುದೇ ಕಾರಣಕ್ಕೂ ಮುಷ್ಕರ ಹಿಂಪಡೆಯಲ್ಲ ಎಂದು ಬಿಗಿ ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಇನ್ನಾದರೂ ಈ ಬಗ್ಗೆ ಕ್ರಮ ಕೈಗೊಂಡು ಸಾರಿಗೆ ನೌಕರರ ಸಮಸ್ಯೆ ಬಗೆಹರಿಸುತ್ತಾ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…