ಮೈಸೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿ ಹಾವಳಿ ಹೆಚ್ಚಳವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಹುಲಿ, ಆನೆಗಳು ಕಾಡಿನಿಂದ ಹೊರಬರದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಹುಲಿ, ಆನೆಗಳ ಸಂಖ್ಯೆ ಹೆಚ್ಚಾಗಿದೆ. ಪ್ರಾಣಿಗಳು ಕಾಡಿನಿಂದ ಹೊರಬರದಂತೆ ಕಾವಲು ಕಾಯುವ ಕೆಲಸ ಮಾಡಲಾಗುವುದು.
ಇದನ್ನು ಓದಿ: ಹೆಚ್ಚಿದ ಮಾನವ-ಹುಲಿ ಸಂಘರ್ಷ : ಅರಣ್ಯಾಧಿಕಾರಿಗಳಿಗೆ ಸಿಎಂ ಕೊಟ್ಟ ಸಲಹೆ ಏನು..?
ನಿನ್ನೆ ನಡೆದ ಸಭೆಯಲ್ಲಿ ಅಧಿಕಾರಿಗಳ ಉತ್ತರದಿಂದ ನಾನು ಸಮಾಧಾನಗೊಂಡಿಲ್ಲ. ಕಾಡಿನಲ್ಲಿ ಹೆಚ್ಚಾಗಿ ಬೆಳೆದಿರುವ ಲಂಟಾನ ಗಿಡಗಳನ್ನು ಕ್ಲೀನ್ ಮಾಡಬೇಕು. ಕೆರೆಗಳಲ್ಲಿ ಆನೆಗಳಿಗೆ ಹುಲಿಗಳಿಗೆ ನೀರು ಸಿಗಬೇಕು. ಕಾಡಿನಲ್ಲಿ ಹೆಚ್ಚಾಗಿ ಮೇವು ಸಿಗಬೇಕು ಅದಕ್ಕಾಗಿ ಕಟ್ಟುನಿಟ್ಟಾಗಿ ಕೆಲಸ ಆಗಬೇಕು ಎಂದು ಹೇಳಿದ್ದೇನೆ ಎಂದು ಹೇಳಿದರು.
ಹುಲಿ ದಾಳಿಗೆ ವೈಜ್ಞಾನಿಕ ಕಾರಣ ಹುಡುಕಲು ರಾಜ್ಯಮಟ್ಟದ ಸಭೆ ಮಾಡುತ್ತೇನೆ. ಮುಂದಿನ ವಾರ ಅರಣ್ಯ ಸಚಿವರು, ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ. ರೈಲ್ವೆ ಬ್ಯಾರಿಕೇಡ್ ಎಲ್ಲಾ ಕಡೆ ಮಾಡಿಲ್ಲ. ಬಿಜೆಪಿ ಸರ್ಕಾರ ಅದನ್ನು ನಿಲ್ಲಿಸಿಬಿಟ್ಟಿದ್ದರು. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಸೇರಿದಂತೆ ಎಲ್ಲರ ಜೊತೆ ಮೀಟಿಂಗ್ ಮಾಡುತ್ತೇನೆ. ಕಾಡಿನಲ್ಲಿ ರೈಲ್ವೆ ಬ್ಯಾರಿಕೇಡ್ ಹಾಕಲಾಗುವುದು ಎಂದು ಹೇಳಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…