ಮೈಸೂರು ನಗರ

ʼಸಬರ್ಬನ್‌ ಬಸ್‌ ನಿಲ್ದಾಣʼ ಸ್ಥಳಾಂತರಕ್ಕೆ ತೀವ್ರ ವಿರೋಧ

ಮೈಸೂರು: ನಗರದ ಹೃದಯ ಭಾಗದಲ್ಲಿರುವ ಸಬರ್ಬನ್‌ ಬಸ್‌ ನಿಲ್ದಾಣವನ್ನು ಬನ್ನಿಮಂಟಪಕ್ಕೆ ಸ್ಥಳಾಂತರ ಮಾಡುವುದಕ್ಕೆ ನಗರದ ಜನತೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮೈಸೂರು ಕೆಎಸ್‌ಆರ್‌ಟಿಸಿ ಸಬರ್ನ್‌ ಬಸ್‌ ನಿಲ್ದಾಣ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ ರವಿಶಾಸ್ತ್ರಿ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಸಬರ್ಬನ್‌ ಬಸ್‌ ನಿಲ್ದಾಣ, ಮೈಸೂರು ನಗರಕ್ಕೆ ಒಂದು ರೀತಿಯ ಕಳಸಪ್ರಾಯದಂತೆ ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡಬಾರದು. ಒಂದು ವೇಳೆ ಸ್ಥಳಾಂತರ ಮಾಡಿದರೆ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತದೆ. ಸಿಟಿ ಸೆಂಟರ್‌ನಲ್ಲಿರುವುದರಿಂದ ಎಲ್ಲದಕ್ಕೂ ಅನುಕೂಲವಾಗಿದೆ.

ಈಗಾಗಲೇ ನರ್ಮ್‌ ಯೋಜನೆಯಡಿ ಸಾತಗಳ್ಳಿ, ನಾಯ್ಡು ನಗರ, ಇಲವಾಲ, ಕುವೆಂಪು ನಗರ ಬಸ್‌ ಡಿಪೋ ಬಳಿ ನಿರ್ಮಾಣ ಮಾಡಿದ ಬಸ್‌ ನಿಲ್ದಾಣ ಎಲ್ಲವೂ ಕೂಡ ನಿಷ್ಕ್ರೀಯಗೊಂಡಿದ್ದು, ನೂರಾರು ಕೋಟಿ ವೆಚ್ಚ ಮಾಡಿ ನಿರ್ಮಿಸಿದ ನಿಲ್ದಾಣಗಳು ನಿರುಪಯುಕ್ತವಾಗಿವೆ. ಈಗ ಈ ನಿಲ್ದಾಣವನ್ನು ಬನ್ನಿಮಂಟಪಕ್ಕೆ ಸ್ಥಳಾಂತರ ಮಾಡಿದರೆ ಇದರ ಬಳಕೆಯು ಕಡಿಮೆಯಾಗಬಹುದು.

ದಸರಾ ಸಂದರ್ಭದಲ್ಲಿ ಮಾತ್ರ ಸ್ವಲ್ಪ ತೊಂದರೆಯಾಗುತ್ತದೆ. ಉಳಿದ ಸಂದರ್ಭದಲ್ಲಿ ಏನೂ ಸಮಸ್ಯೆ ಅಗುವುದಿಲ್ಲ. ಸ್ಥಳಾಂತರ ಮಾಡುವ ಬದಲು ಪಕ್ಕದಲ್ಲೇ ಇರುವ ಪೀಪಲ್ಸ್‌ ಪಾರ್ಕ್‌ ಮತ್ತು‌ ಸರ್ಕಾರಿ ಗೆಸ್ಟ್ ಹೌಸ್‌ ಜಾಗವನ್ನು ಪಡೆದು ವಿಸ್ತರಿಸಬಹುದು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರಿಗೆ ಸಚಿವರಿಗೂ ಮನವಿ ಮಾಡಿದ್ದೇವೆ. ಮನವಿಗೆ ಸಕರಾತ್ಮಕವಾಗಿ ಸ್ಪಂದಿಸುವ ಭರವಸೆ ಇದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ರವಿಶಾಸ್ತ್ರಿ, ಉಪಾಧ್ಯಕ್ಷ ನಿಂಗರಾಜು, ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ಮೈಸೂರು ಸಂಘ ಸಂಸ್ಥೆಗಳ ಒಕ್ಕೂಟ ಅದ್ಯಕ್ಷ ಬಿಎಸ್‌ ಪ್ರಶಾಂತ್‌ ಸೇರಿದಂತೆ ಹಲವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

2 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

3 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

7 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

7 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

7 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

7 hours ago