ಮೈಸೂರು ನಗರ

ʼಸಬರ್ಬನ್‌ ಬಸ್‌ ನಿಲ್ದಾಣʼ ಸ್ಥಳಾಂತರಕ್ಕೆ ತೀವ್ರ ವಿರೋಧ

ಮೈಸೂರು: ನಗರದ ಹೃದಯ ಭಾಗದಲ್ಲಿರುವ ಸಬರ್ಬನ್‌ ಬಸ್‌ ನಿಲ್ದಾಣವನ್ನು ಬನ್ನಿಮಂಟಪಕ್ಕೆ ಸ್ಥಳಾಂತರ ಮಾಡುವುದಕ್ಕೆ ನಗರದ ಜನತೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮೈಸೂರು ಕೆಎಸ್‌ಆರ್‌ಟಿಸಿ ಸಬರ್ನ್‌ ಬಸ್‌ ನಿಲ್ದಾಣ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ ರವಿಶಾಸ್ತ್ರಿ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಸಬರ್ಬನ್‌ ಬಸ್‌ ನಿಲ್ದಾಣ, ಮೈಸೂರು ನಗರಕ್ಕೆ ಒಂದು ರೀತಿಯ ಕಳಸಪ್ರಾಯದಂತೆ ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡಬಾರದು. ಒಂದು ವೇಳೆ ಸ್ಥಳಾಂತರ ಮಾಡಿದರೆ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತದೆ. ಸಿಟಿ ಸೆಂಟರ್‌ನಲ್ಲಿರುವುದರಿಂದ ಎಲ್ಲದಕ್ಕೂ ಅನುಕೂಲವಾಗಿದೆ.

ಈಗಾಗಲೇ ನರ್ಮ್‌ ಯೋಜನೆಯಡಿ ಸಾತಗಳ್ಳಿ, ನಾಯ್ಡು ನಗರ, ಇಲವಾಲ, ಕುವೆಂಪು ನಗರ ಬಸ್‌ ಡಿಪೋ ಬಳಿ ನಿರ್ಮಾಣ ಮಾಡಿದ ಬಸ್‌ ನಿಲ್ದಾಣ ಎಲ್ಲವೂ ಕೂಡ ನಿಷ್ಕ್ರೀಯಗೊಂಡಿದ್ದು, ನೂರಾರು ಕೋಟಿ ವೆಚ್ಚ ಮಾಡಿ ನಿರ್ಮಿಸಿದ ನಿಲ್ದಾಣಗಳು ನಿರುಪಯುಕ್ತವಾಗಿವೆ. ಈಗ ಈ ನಿಲ್ದಾಣವನ್ನು ಬನ್ನಿಮಂಟಪಕ್ಕೆ ಸ್ಥಳಾಂತರ ಮಾಡಿದರೆ ಇದರ ಬಳಕೆಯು ಕಡಿಮೆಯಾಗಬಹುದು.

ದಸರಾ ಸಂದರ್ಭದಲ್ಲಿ ಮಾತ್ರ ಸ್ವಲ್ಪ ತೊಂದರೆಯಾಗುತ್ತದೆ. ಉಳಿದ ಸಂದರ್ಭದಲ್ಲಿ ಏನೂ ಸಮಸ್ಯೆ ಅಗುವುದಿಲ್ಲ. ಸ್ಥಳಾಂತರ ಮಾಡುವ ಬದಲು ಪಕ್ಕದಲ್ಲೇ ಇರುವ ಪೀಪಲ್ಸ್‌ ಪಾರ್ಕ್‌ ಮತ್ತು‌ ಸರ್ಕಾರಿ ಗೆಸ್ಟ್ ಹೌಸ್‌ ಜಾಗವನ್ನು ಪಡೆದು ವಿಸ್ತರಿಸಬಹುದು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರಿಗೆ ಸಚಿವರಿಗೂ ಮನವಿ ಮಾಡಿದ್ದೇವೆ. ಮನವಿಗೆ ಸಕರಾತ್ಮಕವಾಗಿ ಸ್ಪಂದಿಸುವ ಭರವಸೆ ಇದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ರವಿಶಾಸ್ತ್ರಿ, ಉಪಾಧ್ಯಕ್ಷ ನಿಂಗರಾಜು, ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ಮೈಸೂರು ಸಂಘ ಸಂಸ್ಥೆಗಳ ಒಕ್ಕೂಟ ಅದ್ಯಕ್ಷ ಬಿಎಸ್‌ ಪ್ರಶಾಂತ್‌ ಸೇರಿದಂತೆ ಹಲವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

1 hour ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

2 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

2 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

5 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

6 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

6 hours ago