ಮೈಸೂರು ನಗರ

ವಿದ್ಯಾರ್ಥಿನಿಯರ ಸಾವು ಪ್ರಕರಣ : ಮೃತ ಕುಟುಂಬಕ್ಕೆ ಪರಿಹಾರದ ಚೆಕ್‌ ವಿತರಣೆ

ಮೈಸೂರು : ನಗರದ ಮೂರು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಕೆಲ ತಿಂಗಳ ಹಿಂದೆ ಮಂಗಳೂರಿನ ರೆಸಾರ್ಟ್ ಒಂದರ ಈಜು ಕೊಳದಲ್ಲಿ ಸಾವನ್ನಪ್ಪಿದ್ದರು. ಅವರ ಕುಟುಂಬಕ್ಕೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ತಲಾ 2 ಲಕ್ಷ ರೂ.ನಂತೆ 6 ಲಕ್ಷ ರೂ. ಪರಿಹಾರದ ಮಂಜೂರಾತಿ ಪತ್ರ ವಿತರಿಸಿದ್ದಾರೆ.

ನಗರದ ವಿಜಯನಗರದ ಎಸ್.ನವೀನ್ ಕುಮಾರ್ ಪುತ್ರಿ ಎನ್.ಕೀರ್ತನಾ(21),ಮಲ್ಲೇಶ್ ಪುತ್ರಿ ಕುರುಬಾರಳ್ಳಿಯ ನಿಶಿತಾ(21), ರಾಮಾನುಜ ರಸ್ತೆಯ ಎಸ್.ಎಂ.ಎನ್ ಶ್ರೀನಿವಾಸ್ ಪುತ್ರಿ ಪಾರ್ವತಿ(20) ನೀರಿನಲ್ಲಿ ಮುಳುಗಿ ಮೃತರಾಗಿದ್ದರು. ಈ ಸಂಬಂಧ ಮಂಗಳೂರಿನ ಉಲ್ಲಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ಮೂರು ವಿದ್ಯಾರ್ಥಿಗಳು ಅತ್ಯಂತ ಕಡುಬಡತನದ ಕುಟುಂಬದವರಾಗಿದ್ದರು, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕೂಲಿ ಮಾಡಿ ಪೋಷಕರು ಇಂಜಿನಿಯರಿಂಗ್ ಶಿಕ್ಷಣ ಕೊಡಿಸಿದ್ದರು. ಪರೀಕ್ಷೆ ಮುಗಿಸಿ ಮಂಗಳೂರಿಗೆ ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿಗಳು ರೆಸಾರ್ಟ್ ಒಂದರ ಈಜು ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಸರ್ಕಾರದ ವತಿಯಿಂದ ಮೂರು ಹೆಣ್ಣು ಮಕ್ಕಳ ಕುಟುಂಬಗಳಿಗೆ ತಲಾ 2 ಲಕ್ಷದಂತೆ ಒಟ್ಟು 6ಲಕ್ಷ ಹಣ ಪರಿಹಾರ ಘೋಷಿಸಲಾಗಿತ್ತು. ಅದರ ಮಂಜೂರು ಹಣದ ಪತ್ರವನ್ನು ಮಾಜಿ ಶಾಸಕ ಎಂ.ಕೆ ಸೋಮಶೇಖರ್ ಅವರು ಗೃಹ ಕಚೇರಿ ಜನನಿಯಲ್ಲಿ ವಿತರಣೆ ಮಾಡಿದ್ದಾರೆ. ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು ರೆಸಾರ್ಟ್ ವಿರುದ್ಧ ಪೋಷಕರು ಮೊಕದ್ದಮೆ ಹೂಡಿದ್ದು, ನಾನು ಸಹ ವಕೀಲರ ಜೊತೆ ಮಾತನಾಡಿದ್ದೇನೆ. ಘಟನೆ ರೆಸಾರ್ಟ್ ಅವರ ಅಜಾಗೂರಕತೆಯಿಂದಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದ್ದು ನ್ಯಾಯ ಸಿಗುವ ವಿಶ್ವಾಸವಿದೆ ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಹೊಂಡದಲ್ಲಿ ಈಜು ಹೊಡೆಯಲು ಹೋಗಿ ಬಿದ್ದು ಮಕ್ಕಳು ಸಾವನ್ನಪ್ಪುತಿದ್ದಾರೆ. ಕಾಲುವೆಗಳಲ್ಲಿ, ಕೆರೆಗಳು, ಕಾಮಗಾರಿ ನೆಡೆಯುವ ಕಟ್ಟಡಗಳ ಸಂಪ್‌ಗಳಲ್ಲಿ ಬಿದ್ದು ಸಾವನ್ನಪ್ಪುವಂತಹ ದುರ್ಘಟನೆಗಳು ನಡೆಯುತ್ತಿವೆ. ಪೋಷಕರು ಮಕ್ಕಳ ಬಗ್ಗೆ ಹೆಚ್ಚು ನಿಗಾವಹಿಸಬೇಕು ಇಂತಹ ಘಟನೆಗಳು ಆಗದಂತೆ ಜಾಗೃತವಹಿಸಬೇಕು ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಸೋಮಶೇಖರ್, ಆಶ್ರಯ ಸಮಿತಿ ಸದಸ್ಯರಾದ ಗುಣಶೇಖರ್, ಸೋಮು ಕುರುಬಾರಳ್ಳಿ, ಹರೀಶ್ ಗಂಧನಹಳ್ಳಿ, ನಾಗಮಹದೇವ, ಅವಿನಾಶ್‌ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

6 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

6 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

7 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

8 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

8 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

12 hours ago