ಮೈಸೂರು ನಗರ

ವಿದ್ಯಾರ್ಥಿಗಳು ಕಲೆ ಮತ್ತು ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಿ : ರಂಗೇಗೌಡ ಸಲಹೆ

ಮೈಸೂರು : ಕಲೆ ಎಲ್ಲರಿಗೂ ಒಲಿದು ಬರೋದಿಲ್ಲ ಕೆಲವರಿಗೆ ಮಾತ್ರ ಒಲಿದು ಬರುತ್ತದೆ. ಕಲೆ ಮತ್ತು ಸಂಸ್ಕೃತಿ ಮೈಗೂಡಿಸಿಕೊಂಡರೆ ತಮ್ಮ ಬದುಕನ್ನು ಸುಂದರವಾಗಿ ಕಟ್ಟಿಕೊಳ್ಳಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ.ರಂಗೇಗೌಡ ಹೇಳಿದರು.

ಇಂದು(ಫೆ.21) ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತ ಇಲಾಖೆ, ಮೈಸೂರು ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ವಿದ್ಯಾರ್ಥಿಗಳ ನಿಲಯಗಳ ವಿದ್ಯಾರ್ಥಿಗಳಿಗೆ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ಕಲಾ ತರಬೇತಿ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂಗೀತ ನಾಟಕ, ಕ್ರೀಡೆ, ಇವುಗಳಿಗೆ ಯಾವುದೇ ಜಾತಿ ಬೇದ ಇಲ್ಲ. ಧರ್ಮತೀತವಾಗಿ ಎಲ್ಲವನ್ನು ಮೀರಿ ಬೆಳೆದು ಬಂದಿರುವಂತಹದ್ದು. ಈ ಕಲೆಯನ್ನು ಓದುವ ಜೊತೆಯಲ್ಲಿ ಮೈಗೂಡಿಸಿಕೊಳ್ಳಿ. ಬಾಲ್ಯದಿಂದ ಪ್ರೌಢ ವ್ಯವಸ್ಥೆಗೆ ಬರುವ ಮಕ್ಕಳು ಮನಸ್ಸನ್ನು ಬೇರೆ ಕಡೆ ಚಂಚಲಗೊಳಿಸದೆ ಓದಿನ ಕಡೆ ಕೇಂದ್ರೀಕರಿಸಬೇಕು ಯಾವುದೇ ಆಕರ್ಷಣೆಗೆ ಒಳಗಾಗಬೇಡಿ. ಒಳ್ಳೆಯ ಸಂಸ್ಕಾರ, ಸಂಸ್ಕೃತಿಯನ್ನು ಪ್ರತಿಯೊಂದು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ತರಬೇತುದಾರ ದೇವನಂದ ವರಪ್ರಸಾದ್ ಮಾತನಾಡಿ, ಜಾನಪದ ಕಲೆಯು ಒಬ್ಬರಿಂದ ಒಬ್ಬರು ಕೇಳಿ ಹಾಡುವುದರ ಮೂಲಕ ಬೆಳೆದು ಬಂದಿದೆ. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕಲೆಯ ಬಗ್ಗೆ ತರಬೇತಿ ನೀಡಲು ಇಲಾಖೆಗಳು ಉತ್ತಮ ಕಾರ್ಯಕ್ರಮ ಆಯೋಜಿಸಿದ್ದು ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.

ಹಾಸ್ಟಲ್ ವಿದ್ಯಾರ್ಥಿಗಳಿಗೆ ಸರಿಯಾದ ತರಬೇತಿ ಸಿಕ್ಕರೆ ಮಕ್ಕಳು ಮುಂದೆ ಬೆಳೆಯುತ್ತಾರೆ. ಕಲಾ ತರಬೇತಿಯಂತಹ ಕಾರ್ಯಕ್ರಮಗಳನ್ನು ಸದುಪಯೋಗ ಮಾಡಿಕೊಂಡರೆ ಜೀವನದಲ್ಲಿ ಮುಂದೆ ಬರಲು ಸಹಾಯಕ ಆಗಲಿದೆ ಕಲೆಗಳನ್ನು ಕಲಿತಾಗ ತನ್ನಲ್ಲಿನ ಚೈತನ್ಯ ಹೊರ ಬರುತ್ತದೆ ಎಂದು ಹೇಳಿದರು.

ತರಬೇತಿ ಪಡೆದ ವಿದ್ಯಾರ್ಥಿನಿ ಸಾಕ್ಷಿ ಮಾತನಾಡಿ, ಕಲೆ ಬಗ್ಗೆ ಹೆಚ್ಚಿನ ಮತ್ತು ಸಂಸ್ಕೃತಿ ಬಗ್ಗೆ ನಮಗೆ ಯಾವುದೇ ಜ್ಞಾನ ಇರಲಿಲ್ಲ ನೃತ್ಯ, ಸಂಗೀತ,ವೀರಗಾಸೆ ಬಗ್ಗೆ ತರಬೇತಿ ನೀಡಿದ್ದರೆ. ಸಮಾಜದಲ್ಲಿ ಶಿಸ್ತಿನಿಂದ ಹೇಗಿರಬೇಕು, ಹೇಗೆ ವರ್ತಿಸಬೇಕು ಎಂದು ತಿಳಿಸಿಕೊಟ್ಟಿದ್ದಾರೆ. ಧೈರ್ಯ ತುಂಬಿ ವೇದಿಕೆಯ ಮೇಲೆ ಪ್ರದರ್ಶನ ನೀಡುವಂತೆ ತರಬೇತಿ ನೀಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ. ಡಿ ಸುದರ್ಶನ್,ನಿಲಯ ಪಾಲಕರಾದ ಮೋಹನ ಕುಮಾರಿ ಕೆ. ಎಸ್ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

54 mins ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

56 mins ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

58 mins ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 hour ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 hour ago