ಮೈಸೂರು ನಗರ

ವಿದ್ಯಾರ್ಥಿಗಳು ಕಲೆ ಮತ್ತು ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಿ : ರಂಗೇಗೌಡ ಸಲಹೆ

ಮೈಸೂರು : ಕಲೆ ಎಲ್ಲರಿಗೂ ಒಲಿದು ಬರೋದಿಲ್ಲ ಕೆಲವರಿಗೆ ಮಾತ್ರ ಒಲಿದು ಬರುತ್ತದೆ. ಕಲೆ ಮತ್ತು ಸಂಸ್ಕೃತಿ ಮೈಗೂಡಿಸಿಕೊಂಡರೆ ತಮ್ಮ ಬದುಕನ್ನು ಸುಂದರವಾಗಿ ಕಟ್ಟಿಕೊಳ್ಳಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ.ರಂಗೇಗೌಡ ಹೇಳಿದರು.

ಇಂದು(ಫೆ.21) ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತ ಇಲಾಖೆ, ಮೈಸೂರು ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ವಿದ್ಯಾರ್ಥಿಗಳ ನಿಲಯಗಳ ವಿದ್ಯಾರ್ಥಿಗಳಿಗೆ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ಕಲಾ ತರಬೇತಿ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂಗೀತ ನಾಟಕ, ಕ್ರೀಡೆ, ಇವುಗಳಿಗೆ ಯಾವುದೇ ಜಾತಿ ಬೇದ ಇಲ್ಲ. ಧರ್ಮತೀತವಾಗಿ ಎಲ್ಲವನ್ನು ಮೀರಿ ಬೆಳೆದು ಬಂದಿರುವಂತಹದ್ದು. ಈ ಕಲೆಯನ್ನು ಓದುವ ಜೊತೆಯಲ್ಲಿ ಮೈಗೂಡಿಸಿಕೊಳ್ಳಿ. ಬಾಲ್ಯದಿಂದ ಪ್ರೌಢ ವ್ಯವಸ್ಥೆಗೆ ಬರುವ ಮಕ್ಕಳು ಮನಸ್ಸನ್ನು ಬೇರೆ ಕಡೆ ಚಂಚಲಗೊಳಿಸದೆ ಓದಿನ ಕಡೆ ಕೇಂದ್ರೀಕರಿಸಬೇಕು ಯಾವುದೇ ಆಕರ್ಷಣೆಗೆ ಒಳಗಾಗಬೇಡಿ. ಒಳ್ಳೆಯ ಸಂಸ್ಕಾರ, ಸಂಸ್ಕೃತಿಯನ್ನು ಪ್ರತಿಯೊಂದು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ತರಬೇತುದಾರ ದೇವನಂದ ವರಪ್ರಸಾದ್ ಮಾತನಾಡಿ, ಜಾನಪದ ಕಲೆಯು ಒಬ್ಬರಿಂದ ಒಬ್ಬರು ಕೇಳಿ ಹಾಡುವುದರ ಮೂಲಕ ಬೆಳೆದು ಬಂದಿದೆ. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕಲೆಯ ಬಗ್ಗೆ ತರಬೇತಿ ನೀಡಲು ಇಲಾಖೆಗಳು ಉತ್ತಮ ಕಾರ್ಯಕ್ರಮ ಆಯೋಜಿಸಿದ್ದು ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.

ಹಾಸ್ಟಲ್ ವಿದ್ಯಾರ್ಥಿಗಳಿಗೆ ಸರಿಯಾದ ತರಬೇತಿ ಸಿಕ್ಕರೆ ಮಕ್ಕಳು ಮುಂದೆ ಬೆಳೆಯುತ್ತಾರೆ. ಕಲಾ ತರಬೇತಿಯಂತಹ ಕಾರ್ಯಕ್ರಮಗಳನ್ನು ಸದುಪಯೋಗ ಮಾಡಿಕೊಂಡರೆ ಜೀವನದಲ್ಲಿ ಮುಂದೆ ಬರಲು ಸಹಾಯಕ ಆಗಲಿದೆ ಕಲೆಗಳನ್ನು ಕಲಿತಾಗ ತನ್ನಲ್ಲಿನ ಚೈತನ್ಯ ಹೊರ ಬರುತ್ತದೆ ಎಂದು ಹೇಳಿದರು.

ತರಬೇತಿ ಪಡೆದ ವಿದ್ಯಾರ್ಥಿನಿ ಸಾಕ್ಷಿ ಮಾತನಾಡಿ, ಕಲೆ ಬಗ್ಗೆ ಹೆಚ್ಚಿನ ಮತ್ತು ಸಂಸ್ಕೃತಿ ಬಗ್ಗೆ ನಮಗೆ ಯಾವುದೇ ಜ್ಞಾನ ಇರಲಿಲ್ಲ ನೃತ್ಯ, ಸಂಗೀತ,ವೀರಗಾಸೆ ಬಗ್ಗೆ ತರಬೇತಿ ನೀಡಿದ್ದರೆ. ಸಮಾಜದಲ್ಲಿ ಶಿಸ್ತಿನಿಂದ ಹೇಗಿರಬೇಕು, ಹೇಗೆ ವರ್ತಿಸಬೇಕು ಎಂದು ತಿಳಿಸಿಕೊಟ್ಟಿದ್ದಾರೆ. ಧೈರ್ಯ ತುಂಬಿ ವೇದಿಕೆಯ ಮೇಲೆ ಪ್ರದರ್ಶನ ನೀಡುವಂತೆ ತರಬೇತಿ ನೀಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ. ಡಿ ಸುದರ್ಶನ್,ನಿಲಯ ಪಾಲಕರಾದ ಮೋಹನ ಕುಮಾರಿ ಕೆ. ಎಸ್ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

10 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

10 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

10 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

11 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

11 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

11 hours ago