ಮೈಸೂರು ನಗರ

ಪ್ರಯತ್ನ ಬಿಡದೆ ಶ್ರಮ ಪಟ್ಟರೆ ಯಶಸ್ಸು ಸಾಧ್ಯ; ನವೀನ್‌ ಕುಮಾರ್‌

ಮೈಸೂರು : ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಯತ್ನ ಬಿಡದೆ ಶ್ರಮ ಪಟ್ಟರೆ ಯಶಸ್ಸು ಸಿಕ್ಕೇ ಸಿಗುತ್ತದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಎಸ್.ಕೆ. ನವೀನ್‌ಕುಮಾರ್ ಹೇಳಿದರು.

ಇಂದು ನಗರದ ಜ್ಞಾನಬುತ್ತಿ ಸಂಸ್ಥೆವತಿಯಿಂದ ಆಯೋಜಿಸಿದ್ದ ಪಿಸಿ-ಪಿ.ಎಸ್.ಐ ಪರೀಕ್ಷಾ ಉಚಿತ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅಧ್ಯಯನ ಪುಸ್ತಕ ಬಿಡುಗಡೆ ಮಾಡಿ ಶಿಬಿರಾರ್ಥಿಗಳಿಗೆ ಶುಭ ಹಾರೈಕೆ ಮಾಡಿ ಮಾತನಾಡಿದರು.

ನಿಮ್ಮಲ್ಲಿ ಬಹುತೇಕ ದಲಿತ, ಹಿಂದುಳಿದ, ಗ್ರಾಮೀಣ ಮತ್ತು ನಗರದ ಬಡ-ಮಧ್ಯಮ ವರ್ಗದ ಹಿನ್ನೆಲೆಯಿಂದ ಬಂದವರಾಗಿದ್ದೀರಿ. ಹಾಗಾಗಿ ನಿಮ್ಮ ಕಣ್ಣುಗಳಲ್ಲಿ “ಬೆಂಕಿ ಮತ್ತು ಹಸಿವು” ನನಗೆ ಕಾಣಿಸುತ್ತಿದೆ. ನಾನು ಮಂಡ್ಯ ಜಿಲ್ಲೆಯ ಹಳ್ಳಿಯಲ್ಲಿ ಓದುತ್ತಿದ್ದಾಗ ಈಗ ನಿಮಗಿರುವ ಯಾವುದೇ ಸೌಕರ್ಯಗಳು ನನ್ನ ತಲೆಮಾರಿನವರಿಗೆ ಇರಲಿಲ್ಲ. ಒಂದು ಹೊತ್ತಿನ ಊಟಕ್ಕೂ ಕಷ್ಟ ಪಟ್ಟಿದ್ದೇವೆ ಎಂದರೆ, ಈಗ ನಿಮಗಿದು ಆಶ್ಚರ್ಯ ಎನಿಸಬಹದು. ಆದರೆ ಅದು ಸತ್ಯ. ಸೋಲಿಗೆ ಅಂಜದಿರಿ. ಬಿದ್ದವನು ಇಂದಲ್ಲ ನಾಳೆ ಎದ್ದೇ ಏಳುತ್ತಾನೆ. ಭಯಬಿಟ್ಟಾಗಲೇ ನಿಜವಾದ ಬದುಕು ಆರಂಭವಾಗುವುದು. ಆತ್ಮವಿಶ್ವಾಸ ನಿಮ್ಮನ್ನು ಎಷ್ಟು ಎತ್ತಕ್ಕೆ ಬೇಕಾದರೂ ತೆಗೆದುಕೊಂಡು ಹೋಗುವ ಶಕ್ತಿ ಅದಕ್ಕಿದೆ ಎಂದರು.

ದಾನಗಳಲ್ಲೇ ಅನ್ನ ಮತ್ತು ಅಕ್ಷರ ದಾನ ಬಹುದೊಡ್ಡದು. ನಾಡಿನ ಹೆಸರಾಂತ ಸಿದ್ದಗಂಗಾ ಮಠ ಹೇಗೆ ನಿಸ್ವಾರ್ಥವಾಗಿ ಅನ್ನ ಮತ್ತು ಅಕ್ಷರ ದಾಸೋಹವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆಯೋ ಅದೇ ಹಾದಿಯಲ್ಲಿ ಮೈಸೂರಿನ ಜ್ಞಾನಬುತ್ತಿ ಸಂಸ್ಥೆ ನಡೆಯುತ್ತಿರುವುದು ನನಗೆ ಬಹಳ ಸಂತೋಷ ತಂದಿದೆ. ಜ್ಞಾನಬುತ್ತಿಯಿಂದ ನಿಮ್ಮ ಬದುಕಿನ ಬಾಳ ಬುತ್ತಿ ತುಂಬಲಿ. ನಿಮ್ಮಿಂದ ನಾಳಿನ ಸಮಾಜ ಬಹುನಿರೀಕ್ಷೆಯನ್ನು ಇಟ್ಟುಕೊಂಡಿದೆ. ಅದನ್ನು ಹುಸಿಗೊಳಿಸಬೇಡಿ. ಹಗಲು ರಾತ್ರಿ ಕಷ್ಟಪಡಲು ಸಿದ್ಧರಾದರೆ ರೆಡ್‌ಕಾರ್ಪೆಟ್‌ಸ್ವಾಗತ ನಿಮಗಾಗಿ ಕಾದಿರುತ್ತದೆ. ವಿದ್ಯೆಯೊಂದಿಗೆ ವಿನಯ ಮರೆಯಬೇಡಿ. ಮೊಬೈಲ್‌ಬಿಡಿ, ಪುಸ್ತಕ ಹಿಡಿದು ಸಾಧನೆಯತ್ತ ದಾಪುಗಾಲು ಹಾಕಿ ಎಂದರು. ಸಾಧ್ಯವಾದರೆ ಸಹಾಯ ಮಾಡಿ ಆದರೆ ತೊಂದರೆ ಮಾತ್ರ ಕೊಡಬೇಡಿ ಎಂದರು. ದೇಶ ಕಾಯುವ ಸೈನಿಕರಷ್ಟೇ ದೇಶದೊಳಗಿನ ಪೊಲೀಸರ ಸೇವೆ ಸರಿಸಮಾನವಾದುದು ಎಂದರು.

ಲಕ್ಷ್ಮಿಪುರಂ ಪೊಲೀಸ್‌ಠಾಣೆಯ ಇನ್‌ಸ್ಪೆಕ್ಟರ್‌ಆದ ರವಿಶಂಕರ್‌ಮಾತನಾಡಿ, ನಿಮಗೇನು ಬೇಕು ಎಂದು ಕೇಳಿಕೊಳ್ಳಿ, ಅದರಲ್ಲಿ ನಂಬಿಕೆಯಿಡಿ ಮತ್ತು ಸಾಧಿಸಿದ ನಂತರ ಅದಕ್ಕೆ ಕೃತಜ್ಞತೆ ಸಲ್ಲಿಸಿ. ಇದೇ ಯಶಸ್ಸಿನ ಗುಟ್ಟು ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಹಿರಿಯ ಸಹಕಾರಿಗಳಾದ ವೈ.ಎನ್.‌ಶಂಕರೇಗೌಡ ಅವರು ಮಾತನಾಡಿ ಆಸಕ್ತಿ ಮತ್ತು ಕಠಿಣ ಪರಿಶ್ರಮ ಎರಡೂ ಸೇರಿದರೆ ಮಾತ್ರ ಗೆಲುವು ನಿಮ್ಮದಾಗುತ್ತದೆ ಎಂದರು. ಸಮಾಜದಲ್ಲಿ ಆರಕ್ಷಕ ವೃತ್ತಿಗೆ ತನ್ನದೇ ಆದ ಮಹತ್ವ ಮತ್ತು ಜವಾಬ್ದಾರಿಯಿದೆ. ಖಾಕಿ ಧರಿಸುವ ಅವಕಾಶ ನಿಮಗೆ ಲಭಿಸಲಿ ಎಂದು ಶುಭ ಹಾರೈಸಿದರು.

ಸಮಾರಂಭದಲ್ಲಿ ಜೈನಹಳ್ಳಿ ಸತ್ಯನಾರಾಯಣಗೌಡ, ಕಾರ್ಯದರ್ಶಿ ಹೆಚ್.‌ಬಾಲಕೃಷ್ಣ, ಪ್ರೊ. ಕೃ.ಪ. ಗಣೇಶ, ಡಾ. ಎಸ್.‌ಬಿ.ಎಂ. ಪ್ರಸನ್ನ, , ಪ್ರೊ. ಹೊನ್ನಯ್ಯ, ಪ್ರೊ. ಜಯಪ್ರಕಾಶ್‌, ಪ್ರೊ. ಈ. ಶಿವಪ್ರಸಾದ್‌, ಕೆ.ವೈ. ನಾಗೇಂದ್ರ, ಡಾ. ಕೃಷ್ಣಕುಮಾರ್‌, ಯು.ಎಂ. ಶರದರಾವ್‌, ರಾಜೀವ್‌ಶರ್ಮಾ, ಸಿ.ಕೆ. ಕಿರಣ್‌ಕೌಶಿಕ್‌ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

6 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

6 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

6 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

7 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

7 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

7 hours ago