ಮೈಸೂರು ನಗರ

ವೈಜ್ಞಾನಿಕ‌ ಚಿಂತನೆಯಿಂದ ಮಾತ್ರ ಯಶಸ್ಸು ಸಾಧ್ಯ

ಅನಾವರಣ ವಸ್ತು ಪ್ರದರ್ಶನ ಉದ್ಘಾಟಿಸಿ ಪತ್ರಕರ್ತ ಕೆ.ದೀಪಕ್ ಕರೆ
ಮೈಸೂರು : ವಿದ್ಯಾರ್ಥಿಗಳು ವೈಜ್ಞಾನಿಕವಾಗಿ ಚಿಂತಿಸುವುದನ್ನು ಮೈಗೂಡಿಸಿಕೊಂಡಾಗ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೆ.ದೀಪಕ್ ಅಭಿಪ್ರಾಯಪಟ್ಟರು.

ನಗರದ ಹೂಟಗಳ್ಳಿ ಹೌಸಿಂಗ್ ಕಾಲೋನಿಯಲ್ಲಿರುವ ರೋಟರಿ ಮಿಡ್ ಟೌನ್ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ‘ ಅನಾವರಣ ‘ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಭೂಮಿ, ಪರಿಸರ, ಮನುಷ್ಯನ ಹುಟ್ಟು, ಜೀವನದಿಂದ ಆರಂಭಗೊಂಡು ಸಾವಿನವರೆಗೂ ವಿಜ್ಞಾನವೇ ಮೂಲ ಸೆಲೆ. ಆದ್ದರಿಂದ ವಿದ್ಯಾರ್ಥಿಗಳು ಮೌಢ್ಯ ಕಂದಾಚಾರ, ಮೂಡ ನಂಬಿಕೆಯ ಆಚಾರ – ವಿಚಾರಗಳನ್ನು ನಂಬುವುದನ್ನು ಬಿಟ್ಟು ವಿಜ್ಞಾನದ ಕಡೆಗೆ ನಿಮ್ಮ ಆಸಕ್ತಿ ಮತ್ತು ಚಿಂತನೆಯನ್ನು ಬೆಳೆಸಿಕೊಳ್ಳಬೇಕು ಎಂದರು.

ವಿದ್ಯಾರ್ಥಿಗಳು ಶ್ರಮವಹಿಸಿ ಓದಿ ಪರೀಕ್ಷೆ ಬರೆಯದೆ ಪಾಸಾಗಲು ದೇವರ ಮೊರೆ ಹೋದರೆ ಪ್ರಯೋಜನವಿಲ್ಲ. ಪುಸ್ತಕ ನಮಗೆ ಪಾಠ ಕಲಿಸುವಾಗ ನಾವು ನಿದ್ದೆಗೆ ಜಾರಿದರೆ, ಮುಂದೆ ಜೀವನ ನಮಗೆ ಪಾಠ ಕಲಿಸುವಾಗ ನಾವು ನಿದ್ದೆಗೆಡಬೇಕಾಗುತ್ತದೆ. ಆದ್ದರಿಂದ ಬಾಹ್ಯ ಆಕರ್ಷಣೆಗಳಿಗೆ ಮನಸ್ಸು ಕೊಡದೆ ಓದಿನ ಕಡೆಗೆ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ನಮಗೆ ಜನುಮ ಕೊಟ್ಟು, ಅನ್ನ ಕೊಟ್ಟು, ವಿದ್ಯೆ ಕೊಟ್ಟು ಉತ್ತಮ ಮನುಷ್ಯರನ್ನಾಗಿ ಮಾಡಲು ನಮ್ಮ ಜೀವನವನ್ನು ಮುಡುಪಾಗಿಡುವ ತಂದೆ- ತಾಯಿ ನಮ್ಮ ನಿಜವಾಗಿ ಹಿರೋ- ಹಿರೋಯಿನ್ ಎಂಬ ಭಾವನೆ ಮಕ್ಕಳಿಗೆ ಬರಬೇಕು. ಅಗ ಮಾತ್ರ ನಿಮ್ಮ ಗುರಿ ಮತ್ತು ಸಾಧನೆಗೆ ಸ್ಪಷ್ಟ ರೂಪ ಬರಲಿದೆ ಎಂದು ತಿಳಿಸಿದರು.

ಒಂದು ದಿನದ ವಸ್ತು ಪ್ರದರ್ಶನದಲ್ಲಿ ಮಕ್ಕಳು ವಿಜ್ಞಾನ, ಗಣಿತ, ಕನ್ನಡ, ಹಿಂದಿ, ಕ್ರೀಡೆ, ಇಂಗ್ಲಿಷ್, ಎನ್ಸಿಸಿ ವಿಷಯಗಳ ಕುರಿತು ಮಾದರಿಗಳನ್ನು ಅನಾವರಣಗೊಳಿಸಿದರು. ಪೋಷಕರು, ವಿವಿಧ ಶಾಲೆಯ ಮಕ್ಕಳು ವಸ್ತು ಪ್ರದರ್ಶನ ವೀಕ್ಷಿಸಿದರು.
ಉದ್ಘಾಟನಾ ಸಮಾರಂಭದಲ್ಲಿ ಶಾಲಾ ಪ್ರಾಂಶುಪಾಲರಾದ ಆತ್ಮಾನಂದ, ಕರಾಟೆ ಪಟು ಸಿದ್ದರಾಜು, ಪವಿತ್ರನ್, ಶಿಕ್ಷಕ ವೃಂದ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

6 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

8 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

16 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

16 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

16 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

16 hours ago