ಮೈಸೂರು ನಗರ

ನಿರಂತರ ಓದಿನಿಂದ ಯಶಸ್ಸು ಸಾಧ್ಯ: ಕಲ್ಯಾಣ್‌ ಕುಮಾರ್

ಮೈಸೂರು: ಪ್ರಸ್ತುತ ಬ್ಯಾಂಕಿಂಗ್ ಕ್ಷೇತ್ರದ ಉದ್ಯೋಗವು ಭ್ರಷ್ಟಾಚಾರ ಮುಕ್ತ ಮತ್ತು ಪಾರದರ್ಶಕ ಆಯ್ಕೆಗೆ ದೇಶದಲ್ಲೇ ಹೆಸರಾಗಿದೆ. ನಿರಂತರ ಓದಿದರೆ ವಿದ್ಯಾರ್ಥಿಗಳಿಗೆ ಯಶಸ್ಸು ಸಿದ್ಧವಾಗಲಿದೆ. ಹೀಗಾಗಿ,  ಯುವ ಜನತೆ ಬ್ಯಾಂಕಿಂಗ್‌ ಕ್ಷೇತ್ರಗಳತ್ತ ಗಮನಹರಿಸಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕು  ಎಂದು ಭಾರತೀಯ ಸ್ಟೇಟ್ ಬ್ಯಾಂಕ್ ನ ಮುಖ್ಯ ವ್ಯವಸ್ಥಾಪಕ ಕಲ್ಯಾಣ್‌ ಕುಮಾರ್‌ ಸಲಹೆ ನೀಡಿದರು.

ಶುಕ್ರವಾರ ನಗರದ ಲಕ್ಷ್ಮಿಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಧರರ ಕಾಲೇಜಿನ ಆವರಣದಲ್ಲಿರುವ ಜ್ಞಾನಬುತ್ತಿ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ಎಸ್ಎಸ್ ಸಿ\ಬ್ಯಾಂಕಿಂಗ್ ಪರೀಕ್ಷೆಗಳ ಉಚಿತ ತರಬೇತಿ ಶಿಬಿರವನ್ನು ಗಿಡಕ್ಕೆ ನೀರು ಎರೆಯುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ಸರ್ಕಾರಿ ಉದ್ಯೋಗಗಳ ಆಯ್ಕೆ ಪ್ರಕ್ರಿಯೆಯು ಹಲವಾರು ವಿವಾದಗಳಿಗೆ ಒಳಗಾಗಿ ನಾಲ್ಕೈದು ವರ್ಷಗಳು ಹಿಡಿಯುತ್ತಿವೆ. ಆದರೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೇವಲ ಆರು ತಿಂಗಳೊಳಗಾಗಿ ಅರ್ಜಿಯಿಂದ ಆಯ್ಕೆ ಪ್ರಕ್ರಿಯೆ ಮುಗಿದಿರುತ್ತದೆ. ಬ್ಯಾಂಕಿಂಗ್ ಹುದ್ದೆಗಳು ಅತ್ಯುತ್ತಮ ಸಂಬಳ ಮತ್ತು ಇತರೆ ಆರ‍್ಷಕ ಭತ್ಯೆಗಳಿರುವುದರಿಂದ ಗೌರವಯುತ ಜೀವನ ನಡೆಸಲು ಸಾಧ್ಯವಿದೆ ಎಂದು ಹೇಳಿದರು.

ಸಾಮಾನ್ಯವಾಗಿ ಇಂದು ಬಹುತೇಕ ಬ್ಯಾಂಕ್ ಗಳಲ್ಲಿ ಉತ್ತರ ಭಾರತದವರೇ ಹೆಚ್ಚಿನ ಸಂಖ್ಯೆಯಲ್ಲಿ ಇರುವುದನ್ನು ನಾವೆಲ್ಲಾ ನೋಡುತ್ತಿದ್ದೇವೆ. ನಮ್ಮ ಕನ್ನಡಿಗರಲ್ಲಿ ಈ ಕುರಿತು ತಿಳುವಳಿಕೆ ಇಲ್ಲ, ಜೊತೆಗೆ ಬ್ಯಾಂಕ್ ಪರೀಕ್ಷೆಗಳು ಕಷ್ಟ ಎನ್ನುವ ತಪ್ಪು ಮನೋಭಾವ ಇದಕ್ಕೆ ಕಾರಣ ಎಂದರು.

ಇತ್ತೀಚೆಗೆ ಕರ್ನಾಟಕ ಸರ್ಕಾರ ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲೂ ಬರೆಯಲು ಕೇಂದ್ರಕ್ಕೆ ಒತ್ತಡ ಹಾಕುತ್ತಿರುವುದು ಸ್ವಾಗತಾರ್ಹ. ವಿದ್ಯಾರ್ಥಿ ಜೀವನದಲ್ಲಿ ಹದಿನೈದು ವರ್ಷ ಓದಿದವರು ಕೇವಲ ಆರು ತಿಂಗಳು ಛಲಬಿಡದೆ, ಇಷ್ಟಪಟ್ಟು, ನಿರಂತರ ಅಧ್ಯಯನ ಮಾಡಿದರೆ ನಿಮ್ಮ ಜೀವನ ಕಟ್ಟಿಕೊಳ್ಳುವುದಲ್ಲದೆ ನಿಮ್ಮ ಮನೆಮಂದಿ ಮತ್ತು ನೆಂಟರ ಬದುಕನ್ನು ಕಟ್ಟಿಕೊಳ್ಳಲು ನೆರವಾಗಬಹುದು ಎಂದರು.

ಪೋಷಕರು ಮಕ್ಕಳಿಗೆ ಕಷ್ಟಗಳನ್ನು ತೋರಿಸಿ ಮತ್ತು ಹೇಳಿ ಬೆಳೆಸಿದರೆ ಮಾತ್ರ ಅವರ ಅಭಿವೃದ್ಧಿ ಸಾಧ್ಯ. ಆದರೆ ಇಂದಿನ ಪೋಷಕರು ಇದನ್ನು ಮಾಡುತ್ತಿಲ್ಲ ಹೀಗಾಗಿ ಯುವ ಸಮುದಾಯ ದಾರಿತಪ್ಪುತ್ತಿದೆ ಎಂದು ವಿಷಾದಿಸಿದರು. ಹುದ್ದೆಗಳು ಕಡಿಮೆ ಇದೆ ಅರ್ಜಿಗಳು ಹೆಚ್ಚಿವೆ ಎಂದು ಗಾಬರಿ ಪಡಬೇಡಿ. ಕೇವಲ ಒಂದು ಹುದ್ದೆಯಿದ್ದರೂ ಪ್ರಯತ್ನಪಡಬೇಕೆಂಬ ಛಲ ನಿಮ್ಮದಾಗಲಿ ಎಂದರು. ಕೂಡು, ಕಳೆ, ಗುಣಿಸು ಮತ್ತು ಭಾಗಿಸು ಇಷ್ಟೇ ಬ್ಯಾಂಕಿಂಗ್ ಪರೀಕ್ಷೆಗಳ ವಸ್ತುವಿಷಯ ಎಂದರು.

 

ಜ್ಞಾನಬುತ್ತಿ ಸಂಸ್ಥೆಯ ಸೇವೆ ಸ್ಮರಿಸಿದ ನಿವೃತ್ತಾ ಬ್ಯಾಂಕ್‌ ಅಧಿಕಾರಿ

ನಿರಂತರ ಸತತ ಪ್ರಯತ್ನ ಮಾಡುವ ಮೂಲಕ ಯಾವುದೇ ಪರೀಕ್ಷೆಗಳನ್ನು ಅತ್ಯಂತ ಧರ್ಯವಾಗಿ ಎದುರಿಸಿ ಸಫಲರಾಗಬಹುದು  ಎಂದು ಹೇಳಿದ ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿ ಎಸ್. ರಾಧಾಕೃಷ್ಣ ಅವರು  ಜ್ಞಾನಬುತ್ತಿ ಸಂಸ್ಥೆಯೊಡನೆ 30 ವರ್ಷಗಳ ತಮ್ಮ ಬ್ಯಾಂಕಿಂಗ್ ಪರೀಕ್ಷೆಗಳ ತರಬೇತಿ ಒಡನಾಟವನ್ನು ಸ್ಮರಿಸಿಕೊಂಡರು.

ಹಿಂದೆ ಮಾಹಿತಿ ಕೊರತೆ ಇತ್ತು. ಆದರೆ, ಈಗ ಎಲ್ಲಾ ಸೌಲಭ್ಯಗಳು ಇರುವುದರಿಂದ ಶ್ರಮಪಟ್ಟು ಅಧ್ಯಯನ ಮಾಡಿ ಎಂದು ಕರೆಕೊಟ್ಟರು.

ಹಿರಿಯ ಸಹಕಾರಿ ವೈ.ಎನ್. ಶಂಕರೇಗೌಡ, ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣ ಗೌಡ, ಕಾರ್ಯದರ್ಶಿ ಹೆಚ್.ಬಾಲಕೃಷ್ಣ, ಪ್ರೊ. ಕೃ.ಪ. ಗಣೇಶ, ಕೆ.ವೈ.ನಾಗೇಂದ್ರ, ಸಂಪನ್ಮೂಲ ವ್ಯಕ್ತಿಗಳಾದ ಡಾ. ಹೊನ್ನಯ್ಯ, ರೋಹನ್ ರವಿಕುಮಾರ್, ಸಿ.ಕೆ. ಕಿರಣ್ ಕೌಶಿಕ್ ಸೇರಿದಂತೆ ಶಿಬಿರಾರ್ಥಿಗಳು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿತ್ರದುರ್ಗ ಬಸ್‌ ದುರಂತ | ಶಾಲಾ ಮಕ್ಕಳಿದ್ದ ಮತ್ತೊಂದು ಬಸ್ಸಿಗೂ ಬೆಂಕಿ : ಕೂದಲೆಳೆ ಅಂತರದಲ್ಲಿ ಪವಾಡಸದೃಶ ಪಾರು!

ಬೆಂಗಳೂರು : ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ…

10 mins ago

ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…

1 hour ago

ನಾಳೆ ದೆಹಲಿಗೆ ತೆರಳಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್‌.27ರಂದು ದೆಹಲಿಯ ಇಂದಿರಾ…

2 hours ago

ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಹುಲಿ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…

2 hours ago

ರಾಜ್ಯದಲ್ಲಿ ಬೆಳಗಿನ ವೇಳೆ ದಟ್ಟ ಮಂಜು: ಹವಾಮಾನ ತಜ್ಞರು ಹೇಳಿದ್ದಿಷ್ಟು.!

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…

3 hours ago

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣ: ಸಿಎಂ ಪಿಣರಾಯಿ ವಿಜಯನ್‌ ಹೇಳಿದ್ದಿಷ್ಟು.!

ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್‌…

3 hours ago