ಮೈಸೂರು ನಗರ

ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ: ಕೆ.ಎಂ.ಗಾಯಿತ್ರಿ

ಮಾನವನ ಜೀವ ಅಮೂಲ್ಯವಾಗಿದ್ದು: ಜಿ.ಪಂ ಸಿಇಒ

ಮೈಸೂರು: ಮಾನವ ಜೀವನ ಎಂಬುದು ಅಮೂಲ್ಯವಾಗಿದ್ದು, ಜೀವನದಲ್ಲಿ ಯಾವುದೇ ಸಮಸ್ಯೆ ಎದುರಾದರೂ ಅತ್ಮವಿಶ್ವಾಸದಿಂದ ಎದುರಿಸಬೇಕು. ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ.ಗಾಯತ್ರಿ  ತಿಳಿಸಿದರು.

ಇಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಯುವರಾಜ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಫಾಟಿಸಿ ಮಾತನಾಡಿದ ಅವರು, ಜೀವನದಲ್ಲಿ ಎದುರಾಗುವ ಕಷ್ಟಗಳು ಕ್ಷಣಿಕವಾಗಿದ್ದು, ಯಾವುದೇ ಒಂದು ಕಷ್ಟ ದುಃಖಗಳು ಬಂದಾಗ ಅದನ್ನೇ ಯೋಚಿಸುತ್ತಾ ಕೂರಬಾರದು ಪರಿಹಾರವೂ ಸಹ ನಮ್ಮಲ್ಲೇ ಇರುತ್ತದೆ. ಅದಕ್ಕೆ ಪರಿಹಾರಗಳನ್ನು ಹುಡುಕಿ ಬದುಕನ್ನು ಕಟ್ಟಿಕೊಳ್ಳುವುದೇ ಆತ್ಮವಿಶ್ವಾಸ ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾದೀಶರಾದ ದಿನೇಶ್.ಬಿ.ಜಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಒತ್ತಡ ಎಂಬುದು ಎಲ್ಲಾ ಕ್ಷೇತ್ರದಲ್ಲಿಯೂ ಆವರಿಸಿಕೊಂಡಿದೆ. ಚಿಕ್ಕ ಮಕ್ಕಳಿಂದ ಯುವಜನತೆಯವರೆಗೂ ಒತ್ತಡ ಎಂಬುದು ಸಾಮಾನ್ಯ ವಿಷಯವಾಗಿದೆ. ಅಲ್ಲದೆ ಯುವ ಜನತೆಯು ಪ್ರೀತಿ ಪ್ರೇಮ ಡ್ರಗ್ಸ್ ವಿದ್ಯಾಭ್ಯಾಸದ ಒತ್ತಡ, ಕುಡಿತದ ಚಟ, ನಿರುದ್ಯೋಗ ದಂತಹ ಸಮಸ್ಯೆಗಳಿಂದ ಆತ್ಮಹತ್ಯೆಗೆ ಮುಂದಾಗುತ್ತಿದ್ದಾರೆ ಇದು ವಿಷಾದಕರ ಸಂಗತಿ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗ ಡಾ ಪಿ ಸಿ ಕುಮಾರಸ್ವಾಮಿ ಮಾತನಾಡಿ, ಅಂಕಿ ಅಂಶಗಳ ಪ್ರಕಾರ ರಾಷ್ಟ್ರ ಮಟ್ಟದಲ್ಲಿ ಸುಮಾರು 1.7 ಲಕ್ಷ ಜನರು ಪ್ರತಿ ವರ್ಷ ಆತ್ಮಹತ್ಯೆಗೆ ಒಳಗಾಗುತ್ತಿದ್ದಾರೆ. ಅದರಲ್ಲಿಯೂ ಪುರುಷರು ಹೆಚ್ಚು ಆತ್ಮಹತ್ಯೆಗೀಡಾಗುತ್ತಿದ್ದಾರೆ. 15 ರಿಂದ 25 ವರ್ಷ ವಯೋಮಾನದವರು ಅತಿ ಹೆಚ್ಚು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಅಂಕಿ ಅಂಶಗಳಿಂದ ತಿಳಿದುಬಂದಿದೆ ಎಂದು ಹೇಳಿದರು.

ಜೆ.ಎಸ್.ಎಸ್ ಆಸ್ಪತ್ರೆಯ ಮನೋರೋಗ ವಿಭಾಗದ ಪ್ರಾಧ್ಯಾಪಕ ಡಾ ಟಿ.ಎಸ್ ಸತ್ಯನಾರಾಯಣ ರಾವ್ ವಿದ್ಯಾರ್ಥಿಗಳೊಡನೆ ಸಂವಾದ ನಡೆಸಿ ತಮ್ಮ ಅನುಭವಗಳನ್ನು ಹಂಚಿಕೊoಡರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಬೃಂದಾ, ಯುವರಾಜ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಸೋಮಶೇಖರಪ್ಪ, ಪ್ರೊ.ಎಂಕೆ ಮಹೇಶ್  ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಳೆ ಶ್ರೀ ಅಯ್ಯಪ್ಪ ಕ್ಷೇತ್ರದ ಮುಖಮಂಟಪ ಲೋಕಾರ್ಪಣೆ

ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…

2 hours ago

‘ದೇಸಿ ಬೀಜಗಳನ್ನು ಉಳಿಸಿದರೆ ವಿಷಮುಕ್ತ ಆಹಾರ ನೀಡಲು ಸಾಧ್ಯ’

ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…

2 hours ago

ಕ್ರಿಸ್‌ಮಸ್ ಹಬ್ಬಕ್ಕೆ ಅರಮನೆ ನಗರಿ ಸಜ್ಜು

ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…

3 hours ago

ಡಿಎಚ್‌ಒ ವರ್ಗಾವಣೆಯಲ್ಲಿ ಎಡವಟ್ಟು

ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…

3 hours ago

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

14 hours ago