ಮೈಸೂರು ನಗರ

ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ: ಕೆ.ಎಂ.ಗಾಯಿತ್ರಿ

ಮಾನವನ ಜೀವ ಅಮೂಲ್ಯವಾಗಿದ್ದು: ಜಿ.ಪಂ ಸಿಇಒ

ಮೈಸೂರು: ಮಾನವ ಜೀವನ ಎಂಬುದು ಅಮೂಲ್ಯವಾಗಿದ್ದು, ಜೀವನದಲ್ಲಿ ಯಾವುದೇ ಸಮಸ್ಯೆ ಎದುರಾದರೂ ಅತ್ಮವಿಶ್ವಾಸದಿಂದ ಎದುರಿಸಬೇಕು. ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ.ಗಾಯತ್ರಿ  ತಿಳಿಸಿದರು.

ಇಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಯುವರಾಜ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಫಾಟಿಸಿ ಮಾತನಾಡಿದ ಅವರು, ಜೀವನದಲ್ಲಿ ಎದುರಾಗುವ ಕಷ್ಟಗಳು ಕ್ಷಣಿಕವಾಗಿದ್ದು, ಯಾವುದೇ ಒಂದು ಕಷ್ಟ ದುಃಖಗಳು ಬಂದಾಗ ಅದನ್ನೇ ಯೋಚಿಸುತ್ತಾ ಕೂರಬಾರದು ಪರಿಹಾರವೂ ಸಹ ನಮ್ಮಲ್ಲೇ ಇರುತ್ತದೆ. ಅದಕ್ಕೆ ಪರಿಹಾರಗಳನ್ನು ಹುಡುಕಿ ಬದುಕನ್ನು ಕಟ್ಟಿಕೊಳ್ಳುವುದೇ ಆತ್ಮವಿಶ್ವಾಸ ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾದೀಶರಾದ ದಿನೇಶ್.ಬಿ.ಜಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಒತ್ತಡ ಎಂಬುದು ಎಲ್ಲಾ ಕ್ಷೇತ್ರದಲ್ಲಿಯೂ ಆವರಿಸಿಕೊಂಡಿದೆ. ಚಿಕ್ಕ ಮಕ್ಕಳಿಂದ ಯುವಜನತೆಯವರೆಗೂ ಒತ್ತಡ ಎಂಬುದು ಸಾಮಾನ್ಯ ವಿಷಯವಾಗಿದೆ. ಅಲ್ಲದೆ ಯುವ ಜನತೆಯು ಪ್ರೀತಿ ಪ್ರೇಮ ಡ್ರಗ್ಸ್ ವಿದ್ಯಾಭ್ಯಾಸದ ಒತ್ತಡ, ಕುಡಿತದ ಚಟ, ನಿರುದ್ಯೋಗ ದಂತಹ ಸಮಸ್ಯೆಗಳಿಂದ ಆತ್ಮಹತ್ಯೆಗೆ ಮುಂದಾಗುತ್ತಿದ್ದಾರೆ ಇದು ವಿಷಾದಕರ ಸಂಗತಿ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗ ಡಾ ಪಿ ಸಿ ಕುಮಾರಸ್ವಾಮಿ ಮಾತನಾಡಿ, ಅಂಕಿ ಅಂಶಗಳ ಪ್ರಕಾರ ರಾಷ್ಟ್ರ ಮಟ್ಟದಲ್ಲಿ ಸುಮಾರು 1.7 ಲಕ್ಷ ಜನರು ಪ್ರತಿ ವರ್ಷ ಆತ್ಮಹತ್ಯೆಗೆ ಒಳಗಾಗುತ್ತಿದ್ದಾರೆ. ಅದರಲ್ಲಿಯೂ ಪುರುಷರು ಹೆಚ್ಚು ಆತ್ಮಹತ್ಯೆಗೀಡಾಗುತ್ತಿದ್ದಾರೆ. 15 ರಿಂದ 25 ವರ್ಷ ವಯೋಮಾನದವರು ಅತಿ ಹೆಚ್ಚು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಅಂಕಿ ಅಂಶಗಳಿಂದ ತಿಳಿದುಬಂದಿದೆ ಎಂದು ಹೇಳಿದರು.

ಜೆ.ಎಸ್.ಎಸ್ ಆಸ್ಪತ್ರೆಯ ಮನೋರೋಗ ವಿಭಾಗದ ಪ್ರಾಧ್ಯಾಪಕ ಡಾ ಟಿ.ಎಸ್ ಸತ್ಯನಾರಾಯಣ ರಾವ್ ವಿದ್ಯಾರ್ಥಿಗಳೊಡನೆ ಸಂವಾದ ನಡೆಸಿ ತಮ್ಮ ಅನುಭವಗಳನ್ನು ಹಂಚಿಕೊoಡರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಬೃಂದಾ, ಯುವರಾಜ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಸೋಮಶೇಖರಪ್ಪ, ಪ್ರೊ.ಎಂಕೆ ಮಹೇಶ್  ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

4 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

4 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

4 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

4 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

7 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

7 hours ago