ಮೈಸೂರು ನಗರ

ದಕ್ಷಿಣ ಭಾಗದ ಸಕ್ಕರೆ ಕಾರ್ಖಾನೆಗಳೂ ಹೆಚ್ಚುವರಿ ಬೆಲೆ ನೀಡಬೇಕು : ರಾಜ್ಯ ರೈತ ಸಂಘ ಆಗ್ರಹ

ಮೈಸೂರು : ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳು ಎಫ್.ಆರ್.ಪಿ.ದರಕ್ಕೆ ಹೆಚ್ಚುವರಿ ಸೇರಿಸಿ ರೈತರ ಕಬ್ಬಿಗೆ ನೀಡುವಷ್ಟೇ ಹೆಚ್ಚುವರಿ ದರವನ್ನು ದಕ್ಷಿಣ ಭಾಗದ ಸಕ್ಕರೆ ಕಾರ್ಖಾನೆಗಳೂ ಹೆಚ್ಚುವರಿ ಬೆಲೆಯನ್ನು ನೀಡಬೇಕು ಎಂದು ರಾಜ್ಯ ರೈತ ಸಂಘ ಆಗ್ರಹಿಸಿದೆ.

ನ.೮ರ ರಾಜ್ಯ ಸರ್ಕಾರದ ನಡಾವಳಿಗಳು ದಕ್ಷಿಣ ಭಾಗದ ಕಾರ್ಖಾನೆಗಳಿಗೂ ಅನ್ವಯವಾಗಲಿದೆ. ಹಾಗಾಗಿ ಉತ್ತರ ಕರ್ನಾಟಕ ಭಾಗದ ಕಾರ್ಖಾನೆಗಳ ರೀತಿಯಲ್ಲೇ ಈ ಭಾಗದ ಜಿಲ್ಲೆಗಳ ಕಬ್ಬುಬೆಳೆಗಾರರಿಗೆ ನೀಡಬೇಕು. ಈ ಕುರಿತಂತೆ ಈ ಭಾಗದ ಎಲ್ಲ ಡಿಸಿಗಳು ರೈತರು, ಕಾರ್ಖಾನೆ ಮಾಲೀಕರ ಸಭೆ ನಡೆಸಿ ಕಾರ್ಖಾನೆಗಳು ಹೆಚ್ಚುವರಿ ಬೆಲೆ ಪಾವತಿಸಲು ಸೂಕ್ತ ತೀರ್ಮಾನ ಮಾಡಬೇಕು ಎಂದು ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ರಾಜ್ಯ ಸರ್ಕಾರ ಎಸ್‌ಎಪಿ ನೀತಿಯನ್ನು ಜಾರಿಗೆ ತರಲು ಅಧಿನಿಯಮಕ್ಕೆ ತಿದ್ದುಪಡಿ ತಂದು ಈ ಅಧಿನಿಯಮವನ್ನು ಮತ್ತಷ್ಟು ಬಲಗೊಳಿಸಬೇಕೆಂದು ಅವರು ಆಗ್ರಹಿಸಿದರು.

ಇದನ್ನೂ ಓದಿ:-ಕನ್ನಡಗರು ಅನ್ಯ ಭಾಷೆಯ ಪ್ರಭಾವಕ್ಕೆ ಒಳಗಾಗಬಾರದು : ಪ್ರೊ.ಎನ್.ಎಂ.ತಳವಾರ್‌ ಸಲಹೆ

ಇನ್ನು ಕೇಂದ್ರ ಸರ್ಕಾರ ಎಫ್‌ಆರ್‌ಪಿ ನಿಗದಿಗೆ ೧೦.೨೫ ಇಳುವರಿ ಮಾನದಂಡ ಮಾಡಿರುವುದು ಸರಿಯಲ್ಲ. ಇದನ್ನು ಕೂಡಲೇ ೯.೫ಕ್ಕೆ ಇಳಿಸಬೇಕು. ಎಥೆನಾಲ್ ಉತ್ಪಾದನೆಗೆ ಈಗ ನೀಡಿರುವ ಅವಕಾಶ ಕಡಿಮೆ ಇದ್ದು, ಅದನ್ನು ಹೆಚ್ಚು ಮಾಡಬೇಕು. ಎಥೆನಾಲ್ ಮಾರಾಟಕ್ಕೆ ಮಿತಿ ಹೇರಿರುವುದರಿಂದಾಗಿ ಕಾರ್ಖಾನೆಗಳಿಗೆ ತೊಂದರೆ ಆಗಲಿದೆ. ಸಕ್ಕರೆ ರಫ್ತನ್ನು ರೈತರು ಮತ್ತು ಕಾರ್ಖಾನೆ ಹಿತದೃಷ್ಟಿಯಿಂದ ಹೆಚ್ಚಿಸಬೇಕೆಂದರು.
ಸಕ್ಕರೆ ವಿಷಯ ಕುರಿತಂತೆ ಕೇಂದ್ರದ ನೀತಿಯಲ್ಲಿ ಬದಲಾವಣೆ ಆಗಲೇಬೇಕೆಂದು ಆಗ್ರಹಿಸಿ ಸದ್ಯದಲ್ಲೇ ಕೇಂದ್ರ ಆಹಾರ ಮತ್ತು ನಾಗರಿಕ ಸೇವೆ ಸಚಿವ ಪ್ರಹ್ಲಾದ್ ಜೋಷಿ ಅವರ ಧಾರವಾಡದ ಮನೆಗೆ ಮುತ್ತಿಗೆ ಹಾಕಲು ಸಂಘ ಚಿಂತನೆ ನಡೆಸಿದ್ದು, ಸದ್ಯದಲ್ಲೇ ಈ ತೀರ್ಮಾನವನ್ನು ಪ್ರಕಟಿಸಲಾಗುವುದೆಂದರು.

ಇನ್ನು, ಸರಗೂರು ತಾಲ್ಲೂಕಿನಲ್ಲಿ ಒಂದೇ ತಿಂಗಳಲ್ಲಿ ಮೂವರು ಹುಲಿಗೆ ಬಲಿಯಾಗಿದ್ದಾರೆ. ಈ ಸಂಬಂಧ ಸರ್ಕಾರ ಅಽಕಾರಿಗಳ ಸಭೆ ನಡೆಸಿದ್ದನ್ನು ಬಿಟ್ಟರೆ ಗಂಭೀರ ಕ್ರಮ ಕೈಗೊಂಡಿಲ್ಲ. ಸರ್ಕಾರ ಕಾಡಂಚಿನ ಪ್ರದೇಶದ ವಾಸಿಗಳ ರಕ್ಷಣೆಗಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಬೇಕು. ಹುಲಿ ಮತ್ತು ಆನೆ ಹಾವಳಿಯನ್ನು ತಪ್ಪಿಸಬೇಕು. ಇಲ್ಲದಿದ್ದಲ್ಲಿ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಸಂಘದ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಜಿಲ್ಲಾಧ್ಯಕ್ಷ ಹೊಸೂರು ಕುಮಾರ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ಮರಂಕಯ್ಯ ಸುದ್ದಿಗೋಷ್ಠಿಯಲ್ಲಿ ಇದ್ದರು.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

6 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

6 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

7 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

8 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

9 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

9 hours ago