ಮೈಸೂರು ನಗರ

ದಕ್ಷಿಣ ಭಾಗದ ಸಕ್ಕರೆ ಕಾರ್ಖಾನೆಗಳೂ ಹೆಚ್ಚುವರಿ ಬೆಲೆ ನೀಡಬೇಕು : ರಾಜ್ಯ ರೈತ ಸಂಘ ಆಗ್ರಹ

ಮೈಸೂರು : ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳು ಎಫ್.ಆರ್.ಪಿ.ದರಕ್ಕೆ ಹೆಚ್ಚುವರಿ ಸೇರಿಸಿ ರೈತರ ಕಬ್ಬಿಗೆ ನೀಡುವಷ್ಟೇ ಹೆಚ್ಚುವರಿ ದರವನ್ನು ದಕ್ಷಿಣ ಭಾಗದ ಸಕ್ಕರೆ ಕಾರ್ಖಾನೆಗಳೂ ಹೆಚ್ಚುವರಿ ಬೆಲೆಯನ್ನು ನೀಡಬೇಕು ಎಂದು ರಾಜ್ಯ ರೈತ ಸಂಘ ಆಗ್ರಹಿಸಿದೆ.

ನ.೮ರ ರಾಜ್ಯ ಸರ್ಕಾರದ ನಡಾವಳಿಗಳು ದಕ್ಷಿಣ ಭಾಗದ ಕಾರ್ಖಾನೆಗಳಿಗೂ ಅನ್ವಯವಾಗಲಿದೆ. ಹಾಗಾಗಿ ಉತ್ತರ ಕರ್ನಾಟಕ ಭಾಗದ ಕಾರ್ಖಾನೆಗಳ ರೀತಿಯಲ್ಲೇ ಈ ಭಾಗದ ಜಿಲ್ಲೆಗಳ ಕಬ್ಬುಬೆಳೆಗಾರರಿಗೆ ನೀಡಬೇಕು. ಈ ಕುರಿತಂತೆ ಈ ಭಾಗದ ಎಲ್ಲ ಡಿಸಿಗಳು ರೈತರು, ಕಾರ್ಖಾನೆ ಮಾಲೀಕರ ಸಭೆ ನಡೆಸಿ ಕಾರ್ಖಾನೆಗಳು ಹೆಚ್ಚುವರಿ ಬೆಲೆ ಪಾವತಿಸಲು ಸೂಕ್ತ ತೀರ್ಮಾನ ಮಾಡಬೇಕು ಎಂದು ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ರಾಜ್ಯ ಸರ್ಕಾರ ಎಸ್‌ಎಪಿ ನೀತಿಯನ್ನು ಜಾರಿಗೆ ತರಲು ಅಧಿನಿಯಮಕ್ಕೆ ತಿದ್ದುಪಡಿ ತಂದು ಈ ಅಧಿನಿಯಮವನ್ನು ಮತ್ತಷ್ಟು ಬಲಗೊಳಿಸಬೇಕೆಂದು ಅವರು ಆಗ್ರಹಿಸಿದರು.

ಇದನ್ನೂ ಓದಿ:-ಕನ್ನಡಗರು ಅನ್ಯ ಭಾಷೆಯ ಪ್ರಭಾವಕ್ಕೆ ಒಳಗಾಗಬಾರದು : ಪ್ರೊ.ಎನ್.ಎಂ.ತಳವಾರ್‌ ಸಲಹೆ

ಇನ್ನು ಕೇಂದ್ರ ಸರ್ಕಾರ ಎಫ್‌ಆರ್‌ಪಿ ನಿಗದಿಗೆ ೧೦.೨೫ ಇಳುವರಿ ಮಾನದಂಡ ಮಾಡಿರುವುದು ಸರಿಯಲ್ಲ. ಇದನ್ನು ಕೂಡಲೇ ೯.೫ಕ್ಕೆ ಇಳಿಸಬೇಕು. ಎಥೆನಾಲ್ ಉತ್ಪಾದನೆಗೆ ಈಗ ನೀಡಿರುವ ಅವಕಾಶ ಕಡಿಮೆ ಇದ್ದು, ಅದನ್ನು ಹೆಚ್ಚು ಮಾಡಬೇಕು. ಎಥೆನಾಲ್ ಮಾರಾಟಕ್ಕೆ ಮಿತಿ ಹೇರಿರುವುದರಿಂದಾಗಿ ಕಾರ್ಖಾನೆಗಳಿಗೆ ತೊಂದರೆ ಆಗಲಿದೆ. ಸಕ್ಕರೆ ರಫ್ತನ್ನು ರೈತರು ಮತ್ತು ಕಾರ್ಖಾನೆ ಹಿತದೃಷ್ಟಿಯಿಂದ ಹೆಚ್ಚಿಸಬೇಕೆಂದರು.
ಸಕ್ಕರೆ ವಿಷಯ ಕುರಿತಂತೆ ಕೇಂದ್ರದ ನೀತಿಯಲ್ಲಿ ಬದಲಾವಣೆ ಆಗಲೇಬೇಕೆಂದು ಆಗ್ರಹಿಸಿ ಸದ್ಯದಲ್ಲೇ ಕೇಂದ್ರ ಆಹಾರ ಮತ್ತು ನಾಗರಿಕ ಸೇವೆ ಸಚಿವ ಪ್ರಹ್ಲಾದ್ ಜೋಷಿ ಅವರ ಧಾರವಾಡದ ಮನೆಗೆ ಮುತ್ತಿಗೆ ಹಾಕಲು ಸಂಘ ಚಿಂತನೆ ನಡೆಸಿದ್ದು, ಸದ್ಯದಲ್ಲೇ ಈ ತೀರ್ಮಾನವನ್ನು ಪ್ರಕಟಿಸಲಾಗುವುದೆಂದರು.

ಇನ್ನು, ಸರಗೂರು ತಾಲ್ಲೂಕಿನಲ್ಲಿ ಒಂದೇ ತಿಂಗಳಲ್ಲಿ ಮೂವರು ಹುಲಿಗೆ ಬಲಿಯಾಗಿದ್ದಾರೆ. ಈ ಸಂಬಂಧ ಸರ್ಕಾರ ಅಽಕಾರಿಗಳ ಸಭೆ ನಡೆಸಿದ್ದನ್ನು ಬಿಟ್ಟರೆ ಗಂಭೀರ ಕ್ರಮ ಕೈಗೊಂಡಿಲ್ಲ. ಸರ್ಕಾರ ಕಾಡಂಚಿನ ಪ್ರದೇಶದ ವಾಸಿಗಳ ರಕ್ಷಣೆಗಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಬೇಕು. ಹುಲಿ ಮತ್ತು ಆನೆ ಹಾವಳಿಯನ್ನು ತಪ್ಪಿಸಬೇಕು. ಇಲ್ಲದಿದ್ದಲ್ಲಿ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಸಂಘದ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಜಿಲ್ಲಾಧ್ಯಕ್ಷ ಹೊಸೂರು ಕುಮಾರ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ಮರಂಕಯ್ಯ ಸುದ್ದಿಗೋಷ್ಠಿಯಲ್ಲಿ ಇದ್ದರು.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

11 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

11 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

12 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

12 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

13 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

14 hours ago