ಮೈಸೂರು ನಗರ

ದಕ್ಷಿಣ ಭಾಗದ ಸಕ್ಕರೆ ಕಾರ್ಖಾನೆಗಳೂ ಹೆಚ್ಚುವರಿ ಬೆಲೆ ನೀಡಬೇಕು : ರಾಜ್ಯ ರೈತ ಸಂಘ ಆಗ್ರಹ

ಮೈಸೂರು : ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳು ಎಫ್.ಆರ್.ಪಿ.ದರಕ್ಕೆ ಹೆಚ್ಚುವರಿ ಸೇರಿಸಿ ರೈತರ ಕಬ್ಬಿಗೆ ನೀಡುವಷ್ಟೇ ಹೆಚ್ಚುವರಿ ದರವನ್ನು ದಕ್ಷಿಣ ಭಾಗದ ಸಕ್ಕರೆ ಕಾರ್ಖಾನೆಗಳೂ ಹೆಚ್ಚುವರಿ ಬೆಲೆಯನ್ನು ನೀಡಬೇಕು ಎಂದು ರಾಜ್ಯ ರೈತ ಸಂಘ ಆಗ್ರಹಿಸಿದೆ.

ನ.೮ರ ರಾಜ್ಯ ಸರ್ಕಾರದ ನಡಾವಳಿಗಳು ದಕ್ಷಿಣ ಭಾಗದ ಕಾರ್ಖಾನೆಗಳಿಗೂ ಅನ್ವಯವಾಗಲಿದೆ. ಹಾಗಾಗಿ ಉತ್ತರ ಕರ್ನಾಟಕ ಭಾಗದ ಕಾರ್ಖಾನೆಗಳ ರೀತಿಯಲ್ಲೇ ಈ ಭಾಗದ ಜಿಲ್ಲೆಗಳ ಕಬ್ಬುಬೆಳೆಗಾರರಿಗೆ ನೀಡಬೇಕು. ಈ ಕುರಿತಂತೆ ಈ ಭಾಗದ ಎಲ್ಲ ಡಿಸಿಗಳು ರೈತರು, ಕಾರ್ಖಾನೆ ಮಾಲೀಕರ ಸಭೆ ನಡೆಸಿ ಕಾರ್ಖಾನೆಗಳು ಹೆಚ್ಚುವರಿ ಬೆಲೆ ಪಾವತಿಸಲು ಸೂಕ್ತ ತೀರ್ಮಾನ ಮಾಡಬೇಕು ಎಂದು ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ರಾಜ್ಯ ಸರ್ಕಾರ ಎಸ್‌ಎಪಿ ನೀತಿಯನ್ನು ಜಾರಿಗೆ ತರಲು ಅಧಿನಿಯಮಕ್ಕೆ ತಿದ್ದುಪಡಿ ತಂದು ಈ ಅಧಿನಿಯಮವನ್ನು ಮತ್ತಷ್ಟು ಬಲಗೊಳಿಸಬೇಕೆಂದು ಅವರು ಆಗ್ರಹಿಸಿದರು.

ಇದನ್ನೂ ಓದಿ:-ಕನ್ನಡಗರು ಅನ್ಯ ಭಾಷೆಯ ಪ್ರಭಾವಕ್ಕೆ ಒಳಗಾಗಬಾರದು : ಪ್ರೊ.ಎನ್.ಎಂ.ತಳವಾರ್‌ ಸಲಹೆ

ಇನ್ನು ಕೇಂದ್ರ ಸರ್ಕಾರ ಎಫ್‌ಆರ್‌ಪಿ ನಿಗದಿಗೆ ೧೦.೨೫ ಇಳುವರಿ ಮಾನದಂಡ ಮಾಡಿರುವುದು ಸರಿಯಲ್ಲ. ಇದನ್ನು ಕೂಡಲೇ ೯.೫ಕ್ಕೆ ಇಳಿಸಬೇಕು. ಎಥೆನಾಲ್ ಉತ್ಪಾದನೆಗೆ ಈಗ ನೀಡಿರುವ ಅವಕಾಶ ಕಡಿಮೆ ಇದ್ದು, ಅದನ್ನು ಹೆಚ್ಚು ಮಾಡಬೇಕು. ಎಥೆನಾಲ್ ಮಾರಾಟಕ್ಕೆ ಮಿತಿ ಹೇರಿರುವುದರಿಂದಾಗಿ ಕಾರ್ಖಾನೆಗಳಿಗೆ ತೊಂದರೆ ಆಗಲಿದೆ. ಸಕ್ಕರೆ ರಫ್ತನ್ನು ರೈತರು ಮತ್ತು ಕಾರ್ಖಾನೆ ಹಿತದೃಷ್ಟಿಯಿಂದ ಹೆಚ್ಚಿಸಬೇಕೆಂದರು.
ಸಕ್ಕರೆ ವಿಷಯ ಕುರಿತಂತೆ ಕೇಂದ್ರದ ನೀತಿಯಲ್ಲಿ ಬದಲಾವಣೆ ಆಗಲೇಬೇಕೆಂದು ಆಗ್ರಹಿಸಿ ಸದ್ಯದಲ್ಲೇ ಕೇಂದ್ರ ಆಹಾರ ಮತ್ತು ನಾಗರಿಕ ಸೇವೆ ಸಚಿವ ಪ್ರಹ್ಲಾದ್ ಜೋಷಿ ಅವರ ಧಾರವಾಡದ ಮನೆಗೆ ಮುತ್ತಿಗೆ ಹಾಕಲು ಸಂಘ ಚಿಂತನೆ ನಡೆಸಿದ್ದು, ಸದ್ಯದಲ್ಲೇ ಈ ತೀರ್ಮಾನವನ್ನು ಪ್ರಕಟಿಸಲಾಗುವುದೆಂದರು.

ಇನ್ನು, ಸರಗೂರು ತಾಲ್ಲೂಕಿನಲ್ಲಿ ಒಂದೇ ತಿಂಗಳಲ್ಲಿ ಮೂವರು ಹುಲಿಗೆ ಬಲಿಯಾಗಿದ್ದಾರೆ. ಈ ಸಂಬಂಧ ಸರ್ಕಾರ ಅಽಕಾರಿಗಳ ಸಭೆ ನಡೆಸಿದ್ದನ್ನು ಬಿಟ್ಟರೆ ಗಂಭೀರ ಕ್ರಮ ಕೈಗೊಂಡಿಲ್ಲ. ಸರ್ಕಾರ ಕಾಡಂಚಿನ ಪ್ರದೇಶದ ವಾಸಿಗಳ ರಕ್ಷಣೆಗಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಬೇಕು. ಹುಲಿ ಮತ್ತು ಆನೆ ಹಾವಳಿಯನ್ನು ತಪ್ಪಿಸಬೇಕು. ಇಲ್ಲದಿದ್ದಲ್ಲಿ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಸಂಘದ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಜಿಲ್ಲಾಧ್ಯಕ್ಷ ಹೊಸೂರು ಕುಮಾರ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ಮರಂಕಯ್ಯ ಸುದ್ದಿಗೋಷ್ಠಿಯಲ್ಲಿ ಇದ್ದರು.

ಆಂದೋಲನ ಡೆಸ್ಕ್

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

56 mins ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

1 hour ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

2 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

5 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

5 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

5 hours ago