ಮೈಸೂರು : ಕಬ್ಬು ಬೆಳೆಗಾರರ ನಡುವೆ ತಾರತಮ್ಯ ನಿಲ್ಲಿಸಿ, ಕಟಾವು ಮತ್ತು ಸಾಗಾಣಿಕೆ ವೆಚ್ಚ ಕಳೆದು ಟನ್ ಕಬ್ಬಿಗೆ ೩,೨೦೦ ರೂ. ಅಥವಾ ಕಟಾವು ಮತ್ತು ಸಾಗಾಣಿಕೆ ವೆಚ್ಚ ಸೇರಿಸಿ ಟನ್ ಕಬ್ಬಿಗೆ ೪,೦೦೦ ರೂ. ಸರ್ಕಾರ ನಿಗದಿಪಡಿಸಬೇಕು ಎಂದು ಕರ್ನಾಟಕ ಕಬ್ಬು ಬೆಳೆಗಾರರ ಸಂಘ ಒತ್ತಾಯಿಸಿದೆ.
ರಾಜ್ಯಾದ್ಯಂತ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕದ ಕಬ್ಬು ಬೆಳೆಗಳಿಗೆ ಸರ್ಕಾರ ಏಕರೂಪ ದರ ನಿಗದಿಗೊಳಿಸಬೇಕು ಎಂದು ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಎಲ್.ಭರತ್ ರಾಜ್ ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಕಬ್ಬು ಬೆಳೆಗಾರರ ಹೋರಾಟ ತೀವ್ರವಾದಾಗ ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಿ ಟನ್ ಕಬ್ಬಿಗೆ ಕಟಾವು ಮತ್ತು ಸಾಗಾಣಿಕೆ ವೆಚ್ಚ ಕಳೆದು ೩,೨೦೦ ರೂ. ಹಾಗೂ ೩,೩೦೦ ರೂ. ನಿಗದಿಪಡಿಸಿದೆ. ಆದರೆ, ಈ ದರ ವನ್ನು ದಕ್ಷಿಣ ಕರ್ನಾಟಕ ಜಿಲ್ಲೆಗಳ ಬೆಳೆಗಾರರಿಗೆ ನೀಡದೇ ತಾರತಮ್ಯ ಮಾಡಲಾಗುತ್ತಿದೆ. ಈ ರೀತಿ ಕಬ್ಬು ಬೆಳೆಗಾರರನ್ನು ಒಡೆದಾಳುವ ನೀತಿ ಸರಿಯಲ್ಲ. ಉತ್ತರ ಕನಾಟಕದ ಕಬ್ಬು ಬೆಳೆಗಾರರಿಗೆ ಹೋಲಿಸಿದರೆ ದಕ್ಷಿಣ ಕರ್ನಾಟಕದ ಕಬ್ಬು ಬೆಳೆಗಾರರಿಗೆ ಸುಮಾರು ೧ ಸಾವಿರ ರೂ. ನಷ್ಟವುಂಟಾಗುತ್ತಿದೆ. ಆದರೆ, ರಾಜ್ಯದ ಎಲ್ಲೆಡೆ ಕಬ್ಬು ಬೆಳೆಯಲು ತಗಲುವ ವೆಚ್ಚ ಒಂದೇ ಆಗಿರುತ್ತದೆ ಎಂದು ತಿಳಿಸಿದರು.
ಇದನ್ನು ಓದಿ: ರೈತರ ಸಂಜೀವಿನಿಯಾದ ಹಾಲು ಉತ್ಪಾದನಾ ಕ್ಷೇತ್ರ : ಶಾಸಕ ಜಿ.ಟಿ.ದೇವೇಗೌಡ
ಕರ್ನಾಟಕ ಪ್ರಾಂತ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ, ಜಿಲ್ಲಾಧ್ಯಕ್ಷ ಚಿಕ್ಕಣ್ಣೇಗೌಡ, ಸದಸ್ಯರಾದ ಸತೀಶ್, ಸಣ್ಣ ನಾಯಕ, ಮಾದಪ್ಪ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಕಬ್ಬು ಬೆಳೆಗಾರರ ಪ್ರಮುಖ ಹಕ್ಕೊತ್ತಾಯಗಳು
* ಹರಿಯಾಣ, ಉತ್ತರ ಪ್ರದೇಶ, ತಮಿಳುನಾಡು ಮಾದರಿಯಲ್ಲಿ ಪ್ರತಿ ಟನ್ ಕಬ್ಬಿಗೆ ಸರ್ಕಾರ ೫೦೦ ರೂ. ಎಸ್ಎಪಿ ನಿಗದಿಗೊಳಿಸಬೇಕು
* ಈ ಹಿಂದೆ ನಿಗದಿಪಡಿಸಿದ್ದ ಟನ್ ಕಬ್ಬಿಗೆ ೧೫೦ ರೂ.ಗಳ ಬಾಕಿಯನ್ನು ಕೂಡಲೇ ಪಾವತಿಸಬೇಕು
* ಕಬ್ಬಿನ ಉಪ ಉತ್ಪನ್ನಗಳಾದ ಮೊಲಾಸಸ್, ಕಾಕಂಬಿ, ಬಗಾಸ್, ಡಿಸ್ಟಿಲರಿ, ಕೋಜೆನ್ ಮೊದಲಾದವುಗಳ ಲಾಭಾಂಶದಲ್ಲಿ ಶೇ.೫೦ ಪಾಲು ರೈತರಿಗೆ ನೀಡಬೇಕು.
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…