ಮೈಸೂರು ನಗರ

ಏಕರೂಪ ದರ ನಿಗದಿಗೆ ಕಬ್ಬು ಬೆಳೆಗಾರರ ಆಗ್ರಹ

ಮೈಸೂರು : ಕಬ್ಬು ಬೆಳೆಗಾರರ ನಡುವೆ ತಾರತಮ್ಯ ನಿಲ್ಲಿಸಿ, ಕಟಾವು ಮತ್ತು ಸಾಗಾಣಿಕೆ ವೆಚ್ಚ ಕಳೆದು ಟನ್ ಕಬ್ಬಿಗೆ ೩,೨೦೦ ರೂ. ಅಥವಾ ಕಟಾವು ಮತ್ತು ಸಾಗಾಣಿಕೆ ವೆಚ್ಚ ಸೇರಿಸಿ ಟನ್ ಕಬ್ಬಿಗೆ ೪,೦೦೦ ರೂ. ಸರ್ಕಾರ ನಿಗದಿಪಡಿಸಬೇಕು ಎಂದು ಕರ್ನಾಟಕ ಕಬ್ಬು ಬೆಳೆಗಾರರ ಸಂಘ ಒತ್ತಾಯಿಸಿದೆ.

ರಾಜ್ಯಾದ್ಯಂತ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕದ ಕಬ್ಬು ಬೆಳೆಗಳಿಗೆ ಸರ್ಕಾರ ಏಕರೂಪ ದರ ನಿಗದಿಗೊಳಿಸಬೇಕು ಎಂದು ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಎಲ್.ಭರತ್ ರಾಜ್ ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಕಬ್ಬು ಬೆಳೆಗಾರರ ಹೋರಾಟ ತೀವ್ರವಾದಾಗ ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಿ ಟನ್ ಕಬ್ಬಿಗೆ ಕಟಾವು ಮತ್ತು ಸಾಗಾಣಿಕೆ ವೆಚ್ಚ ಕಳೆದು ೩,೨೦೦ ರೂ. ಹಾಗೂ ೩,೩೦೦ ರೂ. ನಿಗದಿಪಡಿಸಿದೆ. ಆದರೆ, ಈ ದರ ವನ್ನು ದಕ್ಷಿಣ ಕರ್ನಾಟಕ ಜಿಲ್ಲೆಗಳ ಬೆಳೆಗಾರರಿಗೆ ನೀಡದೇ ತಾರತಮ್ಯ ಮಾಡಲಾಗುತ್ತಿದೆ. ಈ ರೀತಿ ಕಬ್ಬು ಬೆಳೆಗಾರರನ್ನು ಒಡೆದಾಳುವ ನೀತಿ ಸರಿಯಲ್ಲ. ಉತ್ತರ ಕನಾಟಕದ ಕಬ್ಬು ಬೆಳೆಗಾರರಿಗೆ ಹೋಲಿಸಿದರೆ ದಕ್ಷಿಣ ಕರ್ನಾಟಕದ ಕಬ್ಬು ಬೆಳೆಗಾರರಿಗೆ ಸುಮಾರು ೧ ಸಾವಿರ ರೂ. ನಷ್ಟವುಂಟಾಗುತ್ತಿದೆ. ಆದರೆ, ರಾಜ್ಯದ ಎಲ್ಲೆಡೆ ಕಬ್ಬು ಬೆಳೆಯಲು ತಗಲುವ ವೆಚ್ಚ ಒಂದೇ ಆಗಿರುತ್ತದೆ ಎಂದು ತಿಳಿಸಿದರು.

ಇದನ್ನು ಓದಿ: ರೈತರ ಸಂಜೀವಿನಿಯಾದ ಹಾಲು ಉತ್ಪಾದನಾ ಕ್ಷೇತ್ರ : ಶಾಸಕ ಜಿ.ಟಿ.ದೇವೇಗೌಡ 

ಕರ್ನಾಟಕ ಪ್ರಾಂತ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ, ಜಿಲ್ಲಾಧ್ಯಕ್ಷ ಚಿಕ್ಕಣ್ಣೇಗೌಡ, ಸದಸ್ಯರಾದ ಸತೀಶ್, ಸಣ್ಣ ನಾಯಕ, ಮಾದಪ್ಪ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಕಬ್ಬು ಬೆಳೆಗಾರರ ಪ್ರಮುಖ ಹಕ್ಕೊತ್ತಾಯಗಳು 

* ಹರಿಯಾಣ, ಉತ್ತರ ಪ್ರದೇಶ, ತಮಿಳುನಾಡು ಮಾದರಿಯಲ್ಲಿ ಪ್ರತಿ ಟನ್ ಕಬ್ಬಿಗೆ ಸರ್ಕಾರ ೫೦೦ ರೂ. ಎಸ್‌ಎಪಿ ನಿಗದಿಗೊಳಿಸಬೇಕು

* ಈ ಹಿಂದೆ ನಿಗದಿಪಡಿಸಿದ್ದ ಟನ್ ಕಬ್ಬಿಗೆ ೧೫೦ ರೂ.ಗಳ ಬಾಕಿಯನ್ನು ಕೂಡಲೇ ಪಾವತಿಸಬೇಕು

* ಕಬ್ಬಿನ ಉಪ ಉತ್ಪನ್ನಗಳಾದ ಮೊಲಾಸಸ್, ಕಾಕಂಬಿ, ಬಗಾಸ್, ಡಿಸ್ಟಿಲರಿ, ಕೋಜೆನ್ ಮೊದಲಾದವುಗಳ ಲಾಭಾಂಶದಲ್ಲಿ ಶೇ.೫೦ ಪಾಲು ರೈತರಿಗೆ ನೀಡಬೇಕು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

8 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

8 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

8 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

8 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

8 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

8 hours ago