ಮೈಸೂರು ನಗರ

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ, ಹಿರಿಯ ಹೋರಾಟಗಾರ ಬಿ.ಗೋಪಾಲ್ ಹೇಳಿದರು.

ನಗರದ ಮಾನಸಗಂಗೋತ್ರಿಯ ಇಎಂಆರ್‌ಸಿ ಸಭಾಂಗಣದಲ್ಲಿ ಮೈಸೂರು ವಿವಿ ಬುದ್ಧ ಬಳಗದ ವತಿಯಿಂದ ಶನಿವಾರ ನಡೆದ ‘ಬೋದ್ ಗಯಾ ಬುದ್ಧವಿಹಾರ: ಬಿಕ್ಕಟ್ಟು ಮತ್ತು ಪರಿಹಾರ’ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೌದ್ಧ ಅನುಯಾಯಿಗಳು ದಿಲ್ಲಿ ಚಲೋ ಚಳವಳಿಗೆ ಕೊಡುಗೆ ನೀಡಬೇಕು. ದಿಲ್ಲಿಯಲ್ಲಿ ನಡೆಯುವ ಶಕ್ತಿ ಪ್ರದರ್ಶನವನ್ನು ಬೆಂಬಲಿಸಬೇಕು. ಆ ಮೂಲಕ ದೇಶದ ಸಂದೇಶ ರವಾನಿಸಬೇಕು ಎಂದು ಹೇಳಿದರು.

ಸಾಮಾಜಿಕ ಹೋರಾಟಗಾರ ಅಹಿಂದ ಜವರಪ್ಪ ಮಾತನಾಡಿ, ಬಾಬರಿ ಮಸೀದಿಯನ್ನು ರಾಮಮಂದಿರವಾಗಿ ಪರಿವರ್ತಿಸಿದವರ ಜನಸಂಖ್ಯೆ ಎಷ್ಟಿದೆ. ಬುದ್ಧನನ್ನು ಅನುಸರಿಸುವವರ ಸಂಖ್ಯೆ ಎಷ್ಟಿದೆ? ಹಾಗಂತ ಅಕ್ರಮಣ ಮಾಡುವುದು ಬೇಡ. ಕಾನೂನು ಮೂಲಕ ಸುರ್ಪದಿಗೆ ಪಡೆಯಲು ಮುಂದಾಗಬೇಕು ಎಂದು ಹೇಳಿದರು.

ಕೊಳ್ಳೇಗಾಲ ಜೇತವನದ ಮನೋರಖ್ಖಿತ ಬಂತೇಜಿ ಮಾತನಾಡಿ, ಮೀಸಲಾತಿ ಕ್ಷೇತ್ರದಿಂದ ಆಯ್ಕೆಯಾಗಿರುವ ತಮ್ಮ ಜನಗಳ ಕಷ್ಟ ಕೇಳದವರನ್ನು ಕೆಳಕ್ಕೆ ಇಳಿಸಬೇಕು. ಮೈಸೂರು ವಿವಿಗೆ ಪ್ರಾಧ್ಯಾಪಕರನ್ನು ನೇಮಕವಾಗದೇ ನಿಸ್ತೇಜವಾಗಿದೆ. ಪ್ರಾಥಮಿಕ ಶಾಲೆಗೆ ಶಿಕ್ಷಕರನ್ನು ನೇಮಕ ಮಾಡುತ್ತಿಲ್ಲ. ಅತಿಥಿ ಉಪನ್ಯಾಸಕರು ಅರೆಹೊಟ್ಟೆಯಲ್ಲಿ ಪಾಠ ಮಾಡಬೇಕಾದ ಸ್ಥಿತಿ ಇದೆ ಎಂದರು.

ಮೈಸೂರು ವಿವಿ ಡೀನ್ ಪ್ರೊ.ಗುರುಸಿದ್ದಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬುದ್ಧಗಯಾದಿಂದ ಬಿಹಾರ ಸರ್ಕಾರಕ್ಕೆ ವಾರ್ಷಿಕ 450 ಕೋಟಿ ರೂ. ಆದಾಯ ಇದೆ. ಬುದ್ಧಗಯಾದಲ್ಲಿ ನಾಲ್ವರು ಹಿಂದುಗಳು, ನಾಲ್ವರು ಬೌದ್ಧ ಬಿಕ್ಕುಗಳ ಸಮಿತಿ ಇದೆ. ಸಮಿತಿ ಅಧ್ಯಕ್ಷ ಜಿಲ್ಲಾಧಿಕಾರಿಯಾದರೆ ಹಿಂದುಗಳ ಕೈ ಮೇಲಾಗುತ್ತದೆ ಎಂಬ ಕಾರಣಕ್ಕೆ ಸಮಸ್ಯೆ ಉದ್ಭವವಾಗಿದೆ ಎಂದರು.

ಮುಸ್ಲಿಮರಿಗೆ ಮೆಕ್ಕಾ, ಕ್ರಿಶ್ಚಿಯನ್ನರಿಗೆ ವ್ಯಾಟಿಕನ್, ಹಿಂದೂಗಳಿಗೆ ಕಾಶಿ, ವಾರಣಾಸಿ ಇರುವಂತೆ ಬುದ್ಧ ಅನುಯಾಯಿಗಳಿಗೆ ಬುದ್ಧಗಯಾ ಪವಿತ್ರ ಸ್ಥಳವಾಗಿದೆ. ಬುದ್ಧಗಯಾದ ಸಂಪೂರ್ಣ ನಿರ್ವಹಣೆ ಬಿಕ್ಕುಗಳಿಗೆ ದೊರೆಯಬೇಕು ಎಂದು ಪ್ರತಿಪಾದಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

1 hour ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

3 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

4 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

6 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

12 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

18 hours ago