ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿ, ಜಾಮೀನಿನ ಮೇಲೆ ಹೊರ ಬಂದಿರುವ ನಟ ದರ್ಶನ್ ಬೆನ್ನುನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಆಪರೇಷನ್ ಮಾಡಿಸಿಕೊಳ್ಳಲು ದರ್ಶನ್ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಸಂಕ್ರಾಂತಿ ಹಬ್ಬದ ವೇಳೆಗೆ ಶಸ್ತ್ರಚಿಕಿತ್ಸೆ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.
ಮೈಸೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದರ್ಶನ್ಗೆ ಶಸ್ತ್ರಚಿಕಿತ್ಸೆ ನಡೆಯಲಿದ್ದು, ಈ ಬಗ್ಗೆ ವೈದ್ಯರಾದ ಡಾ.ಅಜಯ್ ಹೆಗ್ಡೆ ಎಂಬುವವರು ಮಾಹಿತಿ ನೀಡಿದ್ದಾರೆ.
ದರ್ಶನ್ ಆಪರೇಷನ್ ಮಾಡಿದ ಒಂದೂವರೆ ತಿಂಗಳುಗಳ ಕಾಲ ಸಿನಿಮಾದ ಶೂಟಿಂಗ್ನಲ್ಲಿ ಫೈಟ್ ದೃಶ್ಯದಲ್ಲಿ ಭಾಗಿಯಾಗುವಂತಿಲ್ಲ. ಕೇವಲ ಚಿತ್ರೀಕರಣದಲ್ಲಿ ಮಾತ್ರ ಭಾಗಿಯಾಗಬಹುದು ಎಂದು ಹೇಳಲಾಗುತ್ತಿದೆ.
ಇನ್ನು ಮುಂದಿನ ಫೆಬ್ರವರಿ ತಿಂಗಳಿನಲ್ಲಿ ದರ್ಶನ್ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಶೂಟಿಂಗ್ಗೂ ಮುನ್ನವೇ ಆಪರೇಷನ್ ಮಾಡಿಸಿಕೊಳ್ಳಲು ನಿರ್ಧಾರ ಮಾಡಿದ್ದಾರೆ. ಇನ್ನು ಆಪರೇಷನ್ ಬಳಿಕ ಮೂರು ದಿನ ಸಂಪೂರ್ಣ ವಿಶ್ರಾಂತಿಯಲ್ಲಿರಬೇಕು ಎಂದು ವೈದ್ಯರು ತಿಳಿಸಿದ್ದಾರೆ.
ಇನ್ನು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಐದು ತಿಂಗಳಿಗೂ ಹೆಚ್ಚು ಕಾಲಿ ಜೈಲು ವಾಸ ಅನುಭವಿಸಿದ್ದ ನಟ ದರ್ಶನ್ ತೀವ್ರ ಬೆನ್ನನೋವಿನಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವಂತೆ ಮಧ್ಯಂತರ ಜಾಮೀನು ನೀಡಿತ್ತು. ಬಳಿಕ ಒಂದೂವರೆ ತಿಂಗಳ ಕಾಲ ಆಸ್ಪತ್ರೆ ಹಾಗೂ ಮನೆಯಲ್ಲಿ ವಿಶ್ರಾಂತಿಯಲ್ಲಿದ್ದ ದರ್ಶನ್, ರೆಗ್ಯುಲರ್ ಜಾಮೀನು ನೀಡುವಂತೆ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಬಳಿಕ ಹೈಕೋರ್ಟ್ ನಟ ದರ್ಶನ್ಗೆ ರೆಗ್ಯುಲರ್ ಜಾಮೀನು ನೀಡಿತ್ತು. ಈಗ ದರ್ಶನ್ ಶೂಟಿಂಗ್ನಲ್ಲಿ ಭಾಗಿಯಾಗಬೇಕಿರುವ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…