ಮೈಸೂರು ನಗರ

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ ತಾಲ್ಲೂಕಿನ ಆಲನಹಳ್ಳಿ ನಿವಾಸಿ ಗಣಪತ್ ಲಾಲ್ ಎಂಬವರನ್ನು ಗುರುವಾರ ಬಂಧಿಸಿದೆ.

ರಾಜಸ್ಥಾನದಲ್ಲಿ ಈಗಾಗಲೇ ಬಂಧನಕ್ಕೆ ಒಳಗಾಗಿರುವ ನಾಲ್ವರಲ್ಲಿ ಮನೋಹರ್ ಬಿಷ್ಣೋಯಿ ಎಂಬಾತನ ಸಂಬಂಧಿಕನಾಗಿರುವುದರಿಂದ, ಗಣಪತಲಾಲ್‌ನನ್ನು ಅಲ್ಲಿಗೆ ಕರೆದೊಯ್ಯಲು ಅಧಿಕಾರಿಗಳು ಮೂರನೇ ಜೆಎಂಎಫ್‌ಸಿ ನ್ಯಾಯಾಲಯದಿಂದ ಟ್ರಾವೆಲ್ ವಾರಂಟ್ ಪಡೆದಿದ್ದಾರೆ.

ನಗರದ ಹೆಬ್ಬಾಳ್ ಕೈಗಾರಿಕಾ ಪ್ರದೇಶದಲ್ಲಿ ಗಣಪತ್‌ಲಾಲ್ ಮಾಲೀಕತ್ವದ ‘ಟುಕ್ ಟುಕ್ ಹೌಸ್ ಹೋಲ್ಡ್ ಕೆಮಿಕಲ್ಸ್ ಪ್ರೊಡಕ್ಷನ್ ಸಲ್ಯೂಷನ್ ಮ್ಯಾನಿಫ್ಯಾಕ್ಚರಿಂಗ್ ಘಟಕದಲ್ಲಿ ಮಾದಕ ವಸ್ತು ತಯಾರಿಸಿ, ರಾಜಸ್ಥಾನ ದಲ್ಲಿ ಮಾರಲಾಗುತ್ತಿತ್ತು ಎಂಬ ಮಾಹಿತಿ ಎನ್‌ಸಿಬಿ ಪೊಲೀಸರಿಗೆ ಲಭ್ಯವಾಗಿದೆ ಎನ್ನಲಾಗಿದೆ.

ಇನ್ನು ಸ್ಥಳೀಯ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೆ, ಆರೋಪಿಯ ಮನೆ ಹಾಗೂ ಘಟಕಕ್ಕೆ ದೆಹಲಿ ಹಾಗೂ ಬೆಂಗಳೂರಿನ ಎನ್‌ಸಿಬಿ ಅಧಿಕಾರಿಗಳು ಬುಧವಾರ ಬೆಳಿಗ್ಗೆ ದಾಳಿ ಮಾಡಿ ಕಾರ್ಯಾಚರಣೆ ನಡೆಸಿ, ತೀವ್ರ ವಿಚಾರಣೆಗೊಳಪಡಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

1 hour ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

2 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

3 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

4 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

4 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

5 hours ago