ಮೈಸೂರು: ಬೇಸಿಗೆ ಕಾಲ ಆರಂಭವಾಗಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೆ ಆರ್ ಎಸ್, ಕಬಿನಿ ಅಣೆಕಟ್ಟುಗಳಲ್ಲಿ ಇರುವ ನೀರಿನ ಲಭ್ಯತೆಯ ಮಾಹಿತಿಯನ್ನು ಪಡೆದ ಅವರು ಜೂನ್ ಅಂತ್ಯದ ವರೆಗೆ ಅಣೆಕಟ್ಟುಗಳಲ್ಲಿ ಇರುವ ನೀರಿನ ಪ್ರಮಾಣ ಸಾಕಾಗುತ್ತದೆ. ಕಬಿನಿ ಅಣೆಕಟ್ಟಿನಿಂದ ಕುಡಿಯುವ ನೀರಿಗೆ ಅಗತ್ಯವಿದ್ದಾಗ ಕಬಿನಿಯಿಂದ ಚಾನೆಲ್ ಮೂಲಕ ನೀರನ್ನು ಕಾಲ ಕಾಲಕ್ಕೆ ಹರಿಸಿ ಕುಡಿಯುವ ನೀರನ್ನು ಪೂರೈಸುವಂತೆ ಕಬಿನಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಹಶೀಲ್ದಾರ್ಗಳು ತಾಲ್ಲೂಕು ಮಟ್ಟದಲ್ಲಿ ಪ್ರತಿ ವಾರ ಕುಡಿಯುವ ನೀರಿನ ನಿರ್ವಹಣೆ ಕುರಿತು ಗ್ರಾಮೀಣ ಕುಡಿಯುವ ನೀರಿನ ಇಲಾಖೆ ಅಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳು ಸೇರಿ ಸಭೆ ನಡೆಸಬೇಕು ಎಂದು ಸೂಚನೆ ನೀಡಿದರು.
ಬೇಸಿಗೆ ಕಾಲ ಆರಂಭವಾಗಿದ್ದು, ಕಾಡ್ಗಿಚ್ಚು ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೈಗೊಳ್ಳಬೇಕು. ಕಳೆದ ವರ್ಷ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಬಾರಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳಾದ ಎಸ್ ಯುಕೇಶ್ ಕುಮಾರ್ ಅವರು ಮಾತನಾಡಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಬರಬಹುದಾದ ಗ್ರಾಮಗಳನ್ನು ಗುರುತಿಸಿಕೊಳ್ಳಿ. ಕುಡಿಯುವ ನೀರಿನ ಸಮಸ್ಯೆ ಉಂಟಾದ ನಂತರ ಕ್ರಮ ವಹಿಸುವ ಬದಲು ಮೊದಲೇ ಕ್ರಮ ವಹಿಸಬೇಕು. ನೀರಿನ ನಲ್ಲಿ ಗಳಿಗೆ ಆಫ್ ಅಂಡ್ ಆನ್ ಕ್ಯಾಪ್ ಗಳನ್ನು ಅಳವಡಿಸಬೇಕು ಎಂದು ಸೂಚನೆ ನೀಡಿದ ಅವರು ಅಗತ್ಯ ವಿದ್ದರೆ ಕೊಳವೆ ಬಾವಿಗಳನ್ನು ಕೊರೆಸಲು ಕ್ರಮ ವಹಿಸಲಾಗುವುದು ಎಂದರು.
ಸಭೆಯಲ್ಲಿ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶೇಕ್ ತನ್ವೀರ್ ಆಸಿಫ್, ಅಪರ ಜಿಲ್ಲಾಧಿಕಾರಿ ಗಳಾದ ಡಾ. ಪಿ ಶಿವರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…