ಮೈಸೂರು ನಗರ

ಕುಡಿಯುವ ನೀರಿಗೆ ಕೊರತೆ ಆಗದಂತೆ ಕ್ರಮ ಕೈಗೊಳ್ಳಿ: ಜಿ ಲಕ್ಷ್ಮೀಕಾಂತರೆಡ್ಡಿ ಸೂಚನೆ

ಮೈಸೂರು: ಬೇಸಿಗೆ ಕಾಲ ಆರಂಭವಾಗಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೆ ಆರ್ ಎಸ್, ಕಬಿನಿ ಅಣೆಕಟ್ಟುಗಳಲ್ಲಿ ಇರುವ ನೀರಿನ ಲಭ್ಯತೆಯ ಮಾಹಿತಿಯನ್ನು ಪಡೆದ ಅವರು ಜೂನ್ ಅಂತ್ಯದ ವರೆಗೆ ಅಣೆಕಟ್ಟುಗಳಲ್ಲಿ ಇರುವ ನೀರಿನ ಪ್ರಮಾಣ ಸಾಕಾಗುತ್ತದೆ. ಕಬಿನಿ ಅಣೆಕಟ್ಟಿನಿಂದ ಕುಡಿಯುವ ನೀರಿಗೆ ಅಗತ್ಯವಿದ್ದಾಗ ಕಬಿನಿಯಿಂದ ಚಾನೆಲ್ ಮೂಲಕ ನೀರನ್ನು ಕಾಲ ಕಾಲಕ್ಕೆ ಹರಿಸಿ ಕುಡಿಯುವ ನೀರನ್ನು ಪೂರೈಸುವಂತೆ ಕಬಿನಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಹಶೀಲ್ದಾರ್‌ಗಳು ತಾಲ್ಲೂಕು ಮಟ್ಟದಲ್ಲಿ ಪ್ರತಿ ವಾರ ಕುಡಿಯುವ ನೀರಿನ ನಿರ್ವಹಣೆ ಕುರಿತು ಗ್ರಾಮೀಣ ಕುಡಿಯುವ ನೀರಿನ ಇಲಾಖೆ ಅಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳು ಸೇರಿ ಸಭೆ ನಡೆಸಬೇಕು ಎಂದು ಸೂಚನೆ ನೀಡಿದರು.

ಬೇಸಿಗೆ ಕಾಲ ಆರಂಭವಾಗಿದ್ದು, ಕಾಡ್ಗಿಚ್ಚು ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೈಗೊಳ್ಳಬೇಕು. ಕಳೆದ ವರ್ಷ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಬಾರಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳಾದ ಎಸ್ ಯುಕೇಶ್ ಕುಮಾರ್ ಅವರು ಮಾತನಾಡಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಬರಬಹುದಾದ ಗ್ರಾಮಗಳನ್ನು ಗುರುತಿಸಿಕೊಳ್ಳಿ. ಕುಡಿಯುವ ನೀರಿನ ಸಮಸ್ಯೆ ಉಂಟಾದ ನಂತರ ಕ್ರಮ ವಹಿಸುವ ಬದಲು ಮೊದಲೇ ಕ್ರಮ ವಹಿಸಬೇಕು. ನೀರಿನ ನಲ್ಲಿ ಗಳಿಗೆ ಆಫ್ ಅಂಡ್ ಆನ್ ಕ್ಯಾಪ್ ಗಳನ್ನು ಅಳವಡಿಸಬೇಕು ಎಂದು ಸೂಚನೆ ನೀಡಿದ ಅವರು ಅಗತ್ಯ ವಿದ್ದರೆ ಕೊಳವೆ ಬಾವಿಗಳನ್ನು ಕೊರೆಸಲು ಕ್ರಮ ವಹಿಸಲಾಗುವುದು ಎಂದರು.

ಸಭೆಯಲ್ಲಿ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶೇಕ್ ತನ್ವೀರ್ ಆಸಿಫ್, ಅಪರ ಜಿಲ್ಲಾಧಿಕಾರಿ ಗಳಾದ ಡಾ. ಪಿ ಶಿವರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

1 hour ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

6 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

7 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

7 hours ago