ಮೈಸೂರು ನಗರ

ಶೇ.20ರಷ್ಟಾದರೂ ಕಮರ್ಷಿಯಲ್ ಸಿಲಿಂಡರ್ ಒದಗಿಸಲು ಕ್ರಮವಹಿಸಿ: ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ

ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್‌ ರೂಂ ಬುಕ್ಕಿಂಗ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದಾರೆ ಎಂದು ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಬೇಸರ ಹೊರಹಾಕಿದ್ದಾರೆ.

ಇರಾನ್‌-ಇಸ್ರೇಲ್‌ ಸಂಘರ್ಷದ ಕಾರಣದಿಂದ ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್‌ ಅಭಾವ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರವಾಸೋದ್ಯಮ ನಗರ ಮೈಸೂರಿಗೆ ಬರೋಕೆ ಯೋಚನೆ ಮಾಡುವಂತಾಗಿದೆ. ಈಗಾಗಲೇ ಕೇಳಿ ಕೇಳಿ ರೂಂ ಬುಕ್ ಮಾಡಿದ್ದಾರೆ. ಕೆಲವು ಕಡೆ ಊಟದ ವಿಚಾರಕ್ಕೆ ರೂಂ ಬುಕ್ಕಿಂಗ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಸಚಿವ ಮುನಿಯಪ್ಪ ಅವರು ಒಂದು ವಾರ ತಡೆದುಕೊಳ್ಳಬೇಕು ಎಂದಿದ್ದಾರೆ. ನಾವು ತಡೆದುಕೊಂಡರೆ ಪ್ರವಾಸಿಗರಿಗೆ ಊಟ ಕೊಡುವುದು ಹೇಗೆ. ಈಗಾಗಲೇ 10% ಹೋಟೆಲ್ ಮುಚ್ಚಿವೆ. ಖಾಸಗಿಯಾಗಿ ಹೆಚ್ಚು ಹಣ ಕೊಟ್ಟು ಸಿಲಿಂಡರ್ ಪಡೆದುಕೊಂಡಿರುವುದರಿಂದ ಇಷ್ಟಾಗಿದೆ. ಇಲ್ಲದೇ ಇದ್ದರೆ ಪರಿಸ್ಥಿತಿ ಇನ್ನೂ ಶೋಚನೀಯ ಸ್ಥಿತಿಗೆ ಬರುತ್ತಿತ್ತು. ರಾಜ್ಯ ಸರ್ಕಾರ ತಕ್ಷಣ ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ಮುಖ್ಯಮಂತ್ರಿಗಳು ಶೇಕಡಾ.10 ರಷ್ಟು ಇರುವ ಕಮರ್ಷಿಯಲ್ ಸಿಲಿಂಡರ್ ಅನ್ನು ಶೇಕಡಾ.25ರಷ್ಟು ನೀಡುವಂತೆ ಕ್ರಮ ವಹಿಸಬೇಕು. ಮುಖ್ಯಮಂತ್ರಿಗಳು ಮನಸ್ಸು ಮಾಡಿದರೆ ತಕ್ಷಣ ಈ ಸಮಸ್ಯೆ ಬಗೆಹರಿಸಬಹುದು. ನಿನ್ನೆ ವರಕೋಡು ಹಬ್ಬಕ್ಕೂ ಒಂದು ಲೋಡ್ ಸಿಲಿಂಡರ್ ಅನ್ನು ಸಿಎಂ ಕೊಡಿಸಿದ್ದಾರೆ. ಒಂದು ವಾರ, ಹತ್ತು ದಿನ ಕಾಯೋದು ಬೇಡ. ಸರ್ಕಾರ ತಕ್ಷಣ ಕ್ರಮ ವಹಿಸಬೇಕು. ತೆರಿಗೆ ಕಟ್ಟುವ ಉದ್ದಿಮೆದಾರರ ಹಿತ ಕಾಯಬೇಕು. ದಯವಿಟ್ಟು ಶೇಕಡಾ.20ರಷ್ಟಾದರೂ ಕಮರ್ಷಿಯಲ್ ಸಿಲಿಂಡರ್ ಒದಗಿಸಲು ಕ್ರಮವಹಿಸಿ ಎಂದು ಆಗ್ರಹಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

8 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

8 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

8 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

11 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

11 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

11 hours ago