ಮೈಸೂರು ನಗರ

ಕಾರ್ಯಕರ್ತರ ಆಸೆ ಶೀಘ್ರವೇ ನೆರವೇರಲಿದೆ: ತನ್ವೀರ್‌ಸೇಠ್

ಮೈಸೂರು: ಕಾರ್ಯಕರ್ತರಿಗೆ ಅವರ ನಾಯಕರಿಗೆ ಅಧಿಕಾರ ಸಿಗಬೇಕೆಂಬ ಆಸೆಯಂತೂ ಇದ್ದೇ ಇರುತ್ತದೆ. ಶೀಘ್ರವೇ ಅವರ ಆಸೆ ಈಡೇರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಶಾಸಕ ತನ್ವೀರ್ ಸೇಠ್ ಹೇಳಿ ಹೇಳಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ವರ್ಷದಲ್ಲಿ ನಮ್ಮ ನಾಯಕರಿಗೆ ಅಧಿಕಾರ ಸಿಕ್ಕಿಲ್ಲ ಎಂಬ ಬೇಸರ ಕಾರ್ಯಕರ್ತರಲ್ಲಿ ಇದೆ. ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಕಾರ್ಯಕರ್ತರ ಪರಿಶ್ರಮ ಸಾಕಷ್ಟಿದೆ. ಅವರಿಗೆ ಅವಕಾಶ ಸಿಗದಿರುವ ಬಗ್ಗೆ ಪಕ್ಷದಲ್ಲಿ ಬೇಸರ ಇರುವುದು ನಿಜ. ಆದರೆ, ಈ ಬಗ್ಗೆ ಸೂಕ್ತ ಸಂಧರ್ಭದಲ್ಲಿ ನಿರ್ಧಾರ ಆಗಲಿದೆ ಎಂದರು.

ಶಾಸಕರಿಗೆ ಸಚಿವರಾಗುವ ಆಸೆ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ಕಾರ್ಯಕರ್ತರಿಗಂತೂ ಆ ಆಸೆ ಇದೆ. ನಮ್ಮ ನಾಯಕರು ಮಂತ್ರಿ ಆಗಬೇಕು ಎಂಬ ಆಸೆ ಇರುತ್ತದೆ. ಶೀಘ್ರದಲ್ಲೇ ಪಕ್ಷದ ಕಾರ್ಯಕರ್ತರ ಆಸೆ ನೆರವೇರಲಿದೆ ಎಂದು ಹೇಳಿದರು.

ಹೊಸಕೋಟೆಯಲ್ಲಿ ಸಾವಿರಾರು ಮಂದಿಗೆ ಹಕ್ಕುಪತ್ರ ನೀಡುವ ಮೂಲಕ ಅರ್ಥಪೂರ್ಣವಾಗಿ ಯಶಸ್ವಿ ಸಮಾವೇಶ ನಡೆಸಲು ವ್ಯವಸ್ಥೆ ಮಾಡಲಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಅಚ್ಚರಿಯ ಪ್ರಸಂಗ: ಸ್ಪೀಕರ್‌ ಯು.ಟಿ.ಖಾದರ್‌ ಸಭಾತ್ಯಾಗ

ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್‌ ಯು.ಟಿ.ಖಾದರ್‌ ಅವರು…

3 mins ago

ಮೈಸೂರಿನ ಫುಟ್‌ಪಾತ್‌ನಲ್ಲಿ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ: ಪಾಲಿಕೆ ನಡೆಗೆ ಸಾರ್ವಜನಿಕರ ಆಕ್ರೋಶ

ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…

42 mins ago

ಒಳಮೀಸಲಾತಿ ವಿಚಾರದಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಜಿಲ್ಲಾ ಬಲಗೈ ಸಮುದಾಯದ ಒಕ್ಕೂಟ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…

48 mins ago

ಮಹದೇಶ್ವರ ಬೆಟ್ಟ: ಪಾದಯಾತ್ರಿಕರಿಗೆ ಭಯ ಹುಟ್ಟಿಸಿದ ಕಾಡಾನೆಗಳ ಹಿಂಡು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

1 hour ago

ಆಸಕ್ತಿಗೆ ಅನುಗುಣವಾಗಿ ಉಚಿತ ಕೌಶಲ್ಯ ತರಬೇತಿ ನೀಡಿ: ಡಾ.ಕುಮಾರ

ಮಂಡ್ಯ: ಯುವಕ-ಯುವತಿಯರಿಗೆ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಉಚಿತ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗ ನೀಡಲು ಮಾರ್ಗದರ್ಶನ ನೀಡಲು ಅಗತ್ಯ…

3 hours ago

ಜನರು ಹೆಚ್ಚು ಹೆಚ್ಚು ಗ್ಯಾಸ್‌ ಬುಕ್‌ ಮಾಡಬೇಡಿ: ಸಚಿವ ಕೆ.ಎಚ್.ಮುನಿಯಪ್ಪ ಮನವಿ

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ. ಈ…

3 hours ago