ಮೈಸೂರು ನಗರ

ಕಾರ್ಯಕರ್ತರ ಆಸೆ ಶೀಘ್ರವೇ ನೆರವೇರಲಿದೆ: ತನ್ವೀರ್‌ಸೇಠ್

ಮೈಸೂರು: ಕಾರ್ಯಕರ್ತರಿಗೆ ಅವರ ನಾಯಕರಿಗೆ ಅಧಿಕಾರ ಸಿಗಬೇಕೆಂಬ ಆಸೆಯಂತೂ ಇದ್ದೇ ಇರುತ್ತದೆ. ಶೀಘ್ರವೇ ಅವರ ಆಸೆ ಈಡೇರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಶಾಸಕ ತನ್ವೀರ್ ಸೇಠ್ ಹೇಳಿ ಹೇಳಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ವರ್ಷದಲ್ಲಿ ನಮ್ಮ ನಾಯಕರಿಗೆ ಅಧಿಕಾರ ಸಿಕ್ಕಿಲ್ಲ ಎಂಬ ಬೇಸರ ಕಾರ್ಯಕರ್ತರಲ್ಲಿ ಇದೆ. ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಕಾರ್ಯಕರ್ತರ ಪರಿಶ್ರಮ ಸಾಕಷ್ಟಿದೆ. ಅವರಿಗೆ ಅವಕಾಶ ಸಿಗದಿರುವ ಬಗ್ಗೆ ಪಕ್ಷದಲ್ಲಿ ಬೇಸರ ಇರುವುದು ನಿಜ. ಆದರೆ, ಈ ಬಗ್ಗೆ ಸೂಕ್ತ ಸಂಧರ್ಭದಲ್ಲಿ ನಿರ್ಧಾರ ಆಗಲಿದೆ ಎಂದರು.

ಶಾಸಕರಿಗೆ ಸಚಿವರಾಗುವ ಆಸೆ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ಕಾರ್ಯಕರ್ತರಿಗಂತೂ ಆ ಆಸೆ ಇದೆ. ನಮ್ಮ ನಾಯಕರು ಮಂತ್ರಿ ಆಗಬೇಕು ಎಂಬ ಆಸೆ ಇರುತ್ತದೆ. ಶೀಘ್ರದಲ್ಲೇ ಪಕ್ಷದ ಕಾರ್ಯಕರ್ತರ ಆಸೆ ನೆರವೇರಲಿದೆ ಎಂದು ಹೇಳಿದರು.

ಹೊಸಕೋಟೆಯಲ್ಲಿ ಸಾವಿರಾರು ಮಂದಿಗೆ ಹಕ್ಕುಪತ್ರ ನೀಡುವ ಮೂಲಕ ಅರ್ಥಪೂರ್ಣವಾಗಿ ಯಶಸ್ವಿ ಸಮಾವೇಶ ನಡೆಸಲು ವ್ಯವಸ್ಥೆ ಮಾಡಲಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

1 hour ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

1 hour ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

1 hour ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

1 hour ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

1 hour ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

1 hour ago