ಮೈಸೂರು ನಗರ

ಬಸವಣ್ಣನವರ ತತ್ವದಲ್ಲಿ ಲಿಂಗಭೇದ, ಜಾತಿಭೇದ, ಅಸಮಾನತೆ ಇರಲಿಲ್ಲ ; ಶಾಸಕ ತನ್ವೀರ್‌ ಸೇಠ್‌

ಮೈಸೂರು : 12ನೇ ಶತಮಾನದಲ್ಲಿ ಮಾನವಕುಲಕ್ಕೆ ಮಾರ್ಗದರ್ಶಕರಾಗಿದ್ದ ಬಸವಣ್ಣನವರ ತತ್ವಗಳು ಇಂದಿಗೂ ಕೂಡ ಪ್ರಸ್ತುತವಾಗಿವೆ. ದೂರ ದೃಷ್ಟಿಯ ಆಲೋಚನೆಗಳು ಮತ್ತು ಸಮಾಜವನ್ನು ಯಾವ ರೀತಿ ಕಟ್ಟಬೇಕು ಎನ್ನುವ ಪರಿಕಲ್ಪನೆಯನ್ನು ಹೊಂದುವಂತಹ ಬಸವಣ್ಣನವರ ತತ್ವದಲ್ಲಿ ಲಿಂಗಭೇದ ಜಾತಿಭೇದ ಅಸಮಾನತೆ ಇರಲಿಲ್ಲ. ಎಲ್ಲರನ್ನೂ ಸಮಾನವಾಗಿ ಕಾಣುವ ಒಂದು ಪ್ರವೃತ್ತಿ ಬಸವಣ್ಣವರಲ್ಲಿ ಇತ್ತು ಎಂದು ನರಸಿಂಹ ರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ಅವರು ತಿಳಿಸಿದರು.

ಕರ್ನಾಟಕ ಕಲಾಮಂದಿರದಲ್ಲಿ ಬುಧವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣನವರ ತತ್ವ ಆದರ್ಶಗಳನ್ನು ನಾವು ಕೂಡ ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ಯಾವ ಜಾತಿ ಯಾವ ಅಂತಸ್ತು ಎನ್ನುವ ಭೇದವಿಲ್ಲದೆ ಅವರು ಜೀವಿಸಿದರು ಎಂದು ತಿಳಿಸಿದರು.

ದಾಸರು ಮತ್ತು ಶರಣರು ನಮಗೆ ನೀಡಿರುವ ಒಳ್ಳೆಯ ಉಪಯುಕ್ತವಾದಂತಹ ಮಾತುಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಬಸವಣ್ಣನವರು ಹೇಳಿರುವಂತಹ ವಚನಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಕೇವಲ ಇವ ಯಾರವಾ ಇವ ಯಾರವ ಇವ ನಮ್ಮವ ನಮ್ಮವ ಎನ್ನುವ ವಚನಗಳಿಗೆ ಸೀಮಿತವಾಗದೆ, ಎಲ್ಲರನ್ನೂ ಅಪ್ಪಿಕೊಂಡು ಎಲ್ಲರನ್ನೂ ಜೊತೆಗೂಡಿಸಿ ಮೇಲು-ಕೀಳು ಎಂಬ ಭಾವನೆಯನ್ನು ತೊಡೆದು ಹಾಕಬೇಕು ಎಂದು ತಿಳಿಸಿದರು.

ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ.ಎಸ್ ಶ್ರೀವತ್ಸ ಮಾತನಾಡಿ, ಬಸವಣ್ಣನವರು ಮಾಡಿದಂತಹ ಅನೇಕ ಹೋರಾಟಗಳು, ಶ್ರಮಗಳು ಕಾರಣಕ್ಕೆ ಲಿಂಗ ಸಮಾಜ ಬಹಳ ಹಿಂದೆಯೇ ಸಮಾಜದಲ್ಲಿ ಇದ್ದ ಶೋಷಣೆಯ ವಿರುದ್ಧ ಧ್ವನಿಯನ್ನು ಎತ್ತಿತು. ಈಗಾಗಲೇ ಅವರೇ ಹೇಳಿರುವಂತೆ ಸ್ವಂತ ಸಹೋದರಿಗೆ ಲಿಂಗಧಾರಣೆಯನ್ನು ಮಾಡುವುದರ ಮುಖಾಂತರ ಸಮಾಜದಲ್ಲಿ ಸಮಾನತೆಯನ್ನು ತರಬೇಕು ಎಂಬುವ ನಿಟ್ಟಿನಲ್ಲಿ ಬಸವಣ್ಣನವರ ಪ್ರಯತ್ನ ಸಾಕಷ್ಟು ಇದೆ ಎಂದು ಹೇಳಿದರು.

ಇವತ್ತು ವಚನಗಳು ಎಂದರೆ ಸಮಾಜದಲ್ಲಿ ಅಂಕುಡೊಂಕನ್ನು ತುಂಬಾ ಸರಳ ಭಾಷೆಯಲ್ಲಿ ಸರಳವಾದ ಕನ್ನಡದಲ್ಲಿ ನಮ್ಮೆಲ್ಲರಿಗೂ ಅರ್ಥವಾಗುವಂತ ರೀತಿಯಲ್ಲಿ ಬಸವಣ್ಣನವರು ವಚನಗಳು ತಿಳಿಸುತ್ತವೆ. ಇವರ ವಚನಗಳು ನಮಗೆ ಅನೇಕ ಸಂದರ್ಭದಲ್ಲಿ ಪ್ರೇರಣೆ ನೀಡುತ್ತವೆ ಎಂದರು.

ವಿಧಾನ ಪರಿಷತ್ತಿನ ಶಾಸಕರಾದ ಡಿ. ತಿಮ್ಮಯ್ಯ ಮಾತನಾಡಿ, ಬಸವಣ್ಣನವರು ಈ ರಾಷ್ಟ್ರಕ್ಕೆ ಅಲ್ಲ ಇಡೀ ಪ್ರಪಂಚಕ್ಕೆ ಒಬ್ಬ ಮಹಾನ್ ಚೇತನ ಮತ್ತು ಮಾನವೀಯ ಮೌಲ್ಯಗಳನ್ನು ಸಮಾಜಕ್ಕೆ ನೀಡಿದ ವ್ಯಕ್ತಿ. ಸಮಾನತೆ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂದು ತಿಳಿಸಿಕೊಟ್ಟರು. ಸುಮಾರು 800 ವರ್ಷಗಳ ಹಿಂದೆ ಇದ್ದಂತಹ ಜಾತಿ ಪದ್ಧತಿಯನ್ನು ತೊಲಗಿಸಲು ಪಣತೊಟ್ಟು ಹೋರಾಡಿದವರು ಬಸವಣ್ಣನವರು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಲೈಕ್‌,ಫಾಲೋವರ್ಸ್‌ ಕ್ರೇಜ್‌ಗೆ ಬೈಕ್‌ ವೀಲಿಂಗ್‌ : ಓರ್ವ ಅಪ್ರಾಪ್ತ ಬಂಧನ

ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…

1 min ago

ಇಂದು ರಾಷ್ಟ್ರೀಯ ಮತದಾರರ ದಿನ : ನನ್ನ ಭಾರತ, ನನ್ನ ಮತ.. ಏನಿದರ ವಿಶೇಷತೆ?

ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…

44 mins ago

ಓದುಗರ ಪತ್ರ: ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ

ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…

5 hours ago

ಓದುಗರ ಪತ್ರ: ಪರೀಕ್ಷೆ ವೇಳೆ ಆರೋಗ್ಯ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಿ

ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…

5 hours ago

ಓದುಗರ ಪತ್ರ: ಅಂಚೆ ಕಚೇರಿ ಚಲನ್‌ಗಳು ಕನ್ನಡದಲ್ಲಿರಲಿ

ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…

5 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರ ಸವಾರಿಗೆ ಬೇಕಿದೆ ಕಡಿವಾಣ

ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…

5 hours ago