ಮೈಸೂರು ನಗರ

ಕೆಪಿಸಿಸಿ ಅಧ್ಯಕ್ಷರ ಸ್ಥಾನ ನಿರ್ಧರಿಸುವುದು ಹೈಕಮಾಂಡ್‌ ವಿವೇಚನೆಗೆ ಬಿಟ್ಟದ್ದು: ತನ್ವೀರ್‌ ಸೇಠ್‌

ಮೈಸೂರು: ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಸ್ಥಾನಕ್ಕೆ ಭಾರೀ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಈ ಮಧ್ಯೆಯೇ ಶಾಸಕ ತನ್ವೀರ್‌ ಸೇಠ್‌ ಪ್ರತಿಕ್ರಿಯೆ ನೀಡಿ, ಕೆಪಿಸಿಸಿ ಅಧ್ಯಕ್ಷರ ಸ್ಥಾನವನ್ನು ನಿರ್ಧರಿಸುವುದು ಹೈಕಮಾಂಡ್‌ ವಿವೇಚನೆ ಬಿಟ್ಟಿದ್ದು ಎಂದು ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನಲ್ಲಿ ಇಂದು(ಜನವರಿ.15) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷದಲ್ಲಿನ ಕೆಲ ಗೊಂದಲಗಳಿಂದ ಸರ್ಕಾರಕ್ಕೆ ಡ್ಯಾಮೇಜ್ ಆಗುತ್ತಿರುವುದು ಸತ್ಯ. ಅಧಿಕಾರ ಹಂಚಿಕೆ ವಿಚಾರ, ಕೆಪಿಸಿಸಿ ಅಧ್ಯಕ್ಷರ ವಿಚಾರ ಸಚಿವ ಸಂಪುಟ ವಿಚಾರ ಈ ಮೂರು ವಿಚಾರದ ಬಗ್ಗೆ ಗೊಂದಲಗಳು ಇರುವುದು ಸತ್ಯವಾಗಿದೆ. ಈ ಗೊಂದಲಗಳನ್ನು ಕಾಂಗ್ರೆಸ್ ಹೈಕಮಾಂಡ್ ಮೊದಲು ಬಗೆಹರಿಸಬೇಕು. ಈ ವಿಚಾರಕ್ಕೆ ನನ್ನ ಸಮ್ಮತಿಯೂ ಇದೆ ಎಂದರು.

ಸಚಿವ ಸತೀಶ್ ಜಾರಕಿಹೊಳಿ ಈ ವಿಚಾರವನ್ನು ನೇರವಾಗಿ ಹೇಳುತ್ತಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷ ಯಾರಗಬೇಕೆಂಬುದು ಹೈಕಮಾಂಡ್‌ ವಿವೇಚನೆಗೆ ಬಿಟ್ಟಿರುವುದಾಗಿದೆ. ಹೈಕಮಾಂಡ್‌ ಅನ್ನು ಹೊರತು ಪಡಿಸಿ ಇಂತಹವರನ್ನು ಆಯ್ಕೆ ಮಾಡಿ ಅಥವಾ ಹೀಗೆ ಮಾಡಿ ಎಂದು ಸೂಚಿಸಲು ಬರುವುದಿಲ್ಲ. ಅಲ್ಲದೇ ಸತೀಶ್ ಜಾರಕಿಹೊಳಿಯವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಮಾಡುವಾಗ ಶಾಸಕರ ಅಭಿಪ್ರಾಯ ಕೇಳಿರಲಿಲ್ಲ. ಹೈಕಮಾಂಡ್ ಒಬ್ಬರನ್ನು ತೀರ್ಮಾನ ಮಾಡಿರುತ್ತದೆ ಅದನ್ನು ನಾವು ಒಪ್ಪಿಕೊಳ್ಳಬೇಕು. ಇದು ಕೂಡ ಅದೇ ರೀತಿಯಾಗಿದ್ದು, ಇದನ್ನು ಆದಷ್ಟು ಬೇಗ ಕಾಂಗ್ರೆಸ್ ಹೈಕಮಾಂಡ್ ಬಗೆಹರಿಸಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಪಕ್ಷದಿಂದ ಸರ್ಕಾರವೇ ಹೊರತು ಸರ್ಕಾರದಿಂದ ಪಕ್ಷ ಅಲ್ಲ. ಚುನಾವಣೆ ವೇಳೆ ಪಕ್ಷದಿಂದ ಸಾರ್ವಜನಿಕರಿಗೆ ಹೇಳಿರುವ ಕೆಲಸವನ್ನು ಇಂದು ನಾವು ಮಾಡಬೇಕಿದೆ. ಆದರೆ ಇಂತಹ ಗೊಂದಲಗಳು ಇದ್ದರೆ ಅದಲ್ಲೇ ಹೇಗೆ ಆಗುತ್ತದೆ ಹೇಳಿ ? ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ. ಆ ಜವಾಬ್ದಾರಿ ನಿಭಾಯಿಸುವ ಶಕ್ತಿ ನನಗೆ ಇಲ್ಲ ಎಂದು ತಿಳಿಸಿದರು.

ಇನ್ನೂ ಇದೇ ಸಂದರ್ಭದಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪಾಪ ಮೂಕ ಪ್ರಾಣಿಯ ಕೆಚ್ಚಲು ಕತ್ತರಿಸುವುದು ತಪ್ಪು. ಇದು ಹೆತ್ತ ತಾಯಿಗೆ ದ್ರೋಹ ಮಾಡಿದಂತೆ ಆಗಿರುವ ಪ್ರಕರಣವಾಗಿದೆ. ಹಾಗಾಗಿ ತಪ್ಪಿತಸ್ಥನಿಗೆ ಕಠಿಣವಾದ ಶಿಕ್ಷೆಯಾಗಬೇಕು ಎಂದರು.

ಹಸುಗಳ ಕೆಚ್ಚಲು ಕೊಯ್ದಿರುವ ಆತನನ್ನು ಹೀಗಾಗಲೇ ಬಂಧಿಸಲಾಗಿದೆ. ಆತನಿಗೆ ಕಠಿಣ ಕಾನೂನು ಶಿಕ್ಷೆಯಾಗಬೇಕು. ನಾನು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಆದರೆ
ಬಿಜೆಪಿಯವರು ಹಸುವಿನ ಸಾವಿನಲ್ಲಿ ರಾಜಕಾರಣ ಮಾಡುವುದು ಸರಿಯಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

 

ಅರ್ಚನ ಎಸ್‌ ಎಸ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

3 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

4 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

5 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

5 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

6 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

7 hours ago