ಮೈಸೂರು: ದೇಶದೊಳಗೆ ಅಕ್ರಮವಾಗಿ ನುಸುಳುವವರ ಸಂಖ್ಯೆ ಹೆಚ್ಚಾಗಿದ್ದು, ಕರ್ನಾಟಕದಲ್ಲಿಯೂ ಬಾಂಗ್ಲಾದೇಶದ ಪ್ರಜೆಗಳು ಉದ್ಧಟತನ ತೋರುತ್ತಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದಿರುವ ಸಂಸದ ಯದುವೀರ್ ಒಡೆಯರ್ ಅವರು, ಇಂತಹ ವಿಷಯಗಳ ಕುರಿತು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಂಸದ ಯದುವೀರ್ ಒಡೆಯರ್ ಅವರು, ಇನ್ಸ್ಟಾಗ್ರಾಮ್ ವಿಡಿಯೋದಲ್ಲಿ ಬಾಂಗ್ಲಾದೇಶದ ಮೂವರು ಅಕ್ರಮ ವಲಸಿಗರು ಕೆಲವು ಹೇಳಿಕೆಗಳನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ವಾಸಿಸುತ್ತಿದ್ದು, ಇಲ್ಲಿ ಯಾವುದೇ ಭಯ ಹಾಗೂ ಆತಂಕವಿಲ್ಲ. ಅಕ್ರಮವಾಗಿ ಇಲ್ಲಿ ನೆಲಸಬಹುದು ಎಂದು ಹೇಳಿಕೊಂಡಿದ್ದಾರೆ. ಇದು ನಿಜಕ್ಕೂ ಆತಂಕಕಾರಿ ಎಂದು ಸಂಸದ ತಿಳಿಸಿದ್ದಾರೆ.
ಇದೇ ರೀತಿ ಎರಡು ವಿಡಿಯೋಗಳಿವೆ. ಎರಡೂ ವಿಡಿಯೋಗಳ ಲಿಂಕ್ಗಳನ್ನು ಗೃಹ ಸಚಿವರಿಗೆ ಕಳುಹಿಸಿಕೊಡಲಾಗಿದೆ. ಇನ್ನಾದರೂ ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…