ಮೈಸೂರು: ದೇಶದೊಳಗೆ ಅಕ್ರಮವಾಗಿ ನುಸುಳುವವರ ಸಂಖ್ಯೆ ಹೆಚ್ಚಾಗಿದ್ದು, ಕರ್ನಾಟಕದಲ್ಲಿಯೂ ಬಾಂಗ್ಲಾದೇಶದ ಪ್ರಜೆಗಳು ಉದ್ಧಟತನ ತೋರುತ್ತಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದಿರುವ ಸಂಸದ ಯದುವೀರ್ ಒಡೆಯರ್ ಅವರು, ಇಂತಹ ವಿಷಯಗಳ ಕುರಿತು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಂಸದ ಯದುವೀರ್ ಒಡೆಯರ್ ಅವರು, ಇನ್ಸ್ಟಾಗ್ರಾಮ್ ವಿಡಿಯೋದಲ್ಲಿ ಬಾಂಗ್ಲಾದೇಶದ ಮೂವರು ಅಕ್ರಮ ವಲಸಿಗರು ಕೆಲವು ಹೇಳಿಕೆಗಳನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ವಾಸಿಸುತ್ತಿದ್ದು, ಇಲ್ಲಿ ಯಾವುದೇ ಭಯ ಹಾಗೂ ಆತಂಕವಿಲ್ಲ. ಅಕ್ರಮವಾಗಿ ಇಲ್ಲಿ ನೆಲಸಬಹುದು ಎಂದು ಹೇಳಿಕೊಂಡಿದ್ದಾರೆ. ಇದು ನಿಜಕ್ಕೂ ಆತಂಕಕಾರಿ ಎಂದು ಸಂಸದ ತಿಳಿಸಿದ್ದಾರೆ.
ಇದೇ ರೀತಿ ಎರಡು ವಿಡಿಯೋಗಳಿವೆ. ಎರಡೂ ವಿಡಿಯೋಗಳ ಲಿಂಕ್ಗಳನ್ನು ಗೃಹ ಸಚಿವರಿಗೆ ಕಳುಹಿಸಿಕೊಡಲಾಗಿದೆ. ಇನ್ನಾದರೂ ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…