gehlot
ಮೈಸೂರು: ಲಿಫ್ಟ್ ಕೆಟ್ಟು ನಿಂತ ಪರಿಣಾಮ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೆಲಕಾಲ ಪರದಾಟ ನಡೆಸಿದ ಘಟನೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಿ ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದ್ದು, ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ರಾಜ್ಯಪಾಲರು ಲಿಫ್ಟ್ ಮೂಲಕ ತೆರಳಿದ್ದರು. ಈ ವೇಳೆ ಲಿಫ್ಟ್ ಓವರ್ ಲೋಡ್ ಆದ ಪರಿಣಾಮ ಆಫ್ ಆಗಿ ಕೈಕೊಟ್ಟಿತ್ತು.
6 ಮಂದಿ ಹೊರುವ ಸಾಮರ್ಥ್ಯ ಹೊಂದಿದ್ದ ಲಿಫ್ಟ್ನಲ್ಲಿ ರಾಜ್ಯಪಾಲರೊಂದಿಗೆ 10 ಮಂದಿ ತೆರಳಿದ್ದರು. ಓವರ್ ಲೋಡ್ ಆಗಿ ಲಿಫ್ಟ್ ಕೆಟ್ಟು ನಿಂತ ಪರಿಣಾಮ ಲಿಫ್ಟ್ನಲ್ಲೇ ರಾಜ್ಯಪಾಲ ಗೆಹ್ಲೋಟ್ ಕೆಲಕಾಲ ಸಿಲುಕಿಕೊಂಡಿದ್ದರು. ಈ ವೇಳೆ ಭದ್ರತಾ ಸಿಬ್ಬಂದಿ ತೀವ್ರ ಆತಂಕಕ್ಕೊಳಗಾಗಿದ್ದರು.
ತಕ್ಷಣ ಎಚ್ಚೆತ್ತ ಸಿಬ್ಬಂದಿ ಲಿಫ್ಟ್ನಿಂದ ರಾಜ್ಯಪಾಲರನ್ನು ಕೆಳಗಿಳಿಸಿದರು. ಈ ವೇಳೆ ಲಿಫ್ಟ್ ಬೇಡವೆಂದ ರಾಜ್ಯಪಾಲರು ನಡೆದುಕೊಂಡೇ ಕಾರ್ಯಕ್ರಮಕ್ಕೆ ತೆರಳಿದ ಘಟನೆ ನಡೆಯಿತು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…