gehlot
ಮೈಸೂರು: ಲಿಫ್ಟ್ ಕೆಟ್ಟು ನಿಂತ ಪರಿಣಾಮ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೆಲಕಾಲ ಪರದಾಟ ನಡೆಸಿದ ಘಟನೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಿ ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದ್ದು, ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ರಾಜ್ಯಪಾಲರು ಲಿಫ್ಟ್ ಮೂಲಕ ತೆರಳಿದ್ದರು. ಈ ವೇಳೆ ಲಿಫ್ಟ್ ಓವರ್ ಲೋಡ್ ಆದ ಪರಿಣಾಮ ಆಫ್ ಆಗಿ ಕೈಕೊಟ್ಟಿತ್ತು.
6 ಮಂದಿ ಹೊರುವ ಸಾಮರ್ಥ್ಯ ಹೊಂದಿದ್ದ ಲಿಫ್ಟ್ನಲ್ಲಿ ರಾಜ್ಯಪಾಲರೊಂದಿಗೆ 10 ಮಂದಿ ತೆರಳಿದ್ದರು. ಓವರ್ ಲೋಡ್ ಆಗಿ ಲಿಫ್ಟ್ ಕೆಟ್ಟು ನಿಂತ ಪರಿಣಾಮ ಲಿಫ್ಟ್ನಲ್ಲೇ ರಾಜ್ಯಪಾಲ ಗೆಹ್ಲೋಟ್ ಕೆಲಕಾಲ ಸಿಲುಕಿಕೊಂಡಿದ್ದರು. ಈ ವೇಳೆ ಭದ್ರತಾ ಸಿಬ್ಬಂದಿ ತೀವ್ರ ಆತಂಕಕ್ಕೊಳಗಾಗಿದ್ದರು.
ತಕ್ಷಣ ಎಚ್ಚೆತ್ತ ಸಿಬ್ಬಂದಿ ಲಿಫ್ಟ್ನಿಂದ ರಾಜ್ಯಪಾಲರನ್ನು ಕೆಳಗಿಳಿಸಿದರು. ಈ ವೇಳೆ ಲಿಫ್ಟ್ ಬೇಡವೆಂದ ರಾಜ್ಯಪಾಲರು ನಡೆದುಕೊಂಡೇ ಕಾರ್ಯಕ್ರಮಕ್ಕೆ ತೆರಳಿದ ಘಟನೆ ನಡೆಯಿತು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…