ಮೈಸೂರು ನಗರ

ಮೈಸೂರು| ಕೆಟ್ಟು ನಿಂತ ಲಿಫ್ಟ್‌: ಕೆಲಕಾಲ ರಾಜ್ಯಪಾಲರ ಪರದಾಟ

ಮೈಸೂರು: ಲಿಫ್ಟ್‌ ಕೆಟ್ಟು ನಿಂತ ಪರಿಣಾಮ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೆಲಕಾಲ ಪರದಾಟ ನಡೆಸಿದ ಘಟನೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದಿದೆ.

ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ದಿ ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದ್ದು, ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ರಾಜ್ಯಪಾಲರು ಲಿಫ್ಟ್ ಮೂಲಕ ತೆರಳಿದ್ದರು. ಈ ವೇಳೆ ಲಿಫ್ಟ್‌ ಓವರ್ ಲೋಡ್ ಆದ ಪರಿಣಾಮ ಆಫ್‌ ಆಗಿ ಕೈಕೊಟ್ಟಿತ್ತು.

6 ಮಂದಿ ಹೊರುವ ಸಾಮರ್ಥ್ಯ ಹೊಂದಿದ್ದ ಲಿಫ್ಟ್‌ನಲ್ಲಿ ರಾಜ್ಯಪಾಲರೊಂದಿಗೆ 10 ಮಂದಿ ತೆರಳಿದ್ದರು. ಓವರ್‌ ಲೋಡ್‌ ಆಗಿ ಲಿಫ್ಟ್‌ ಕೆಟ್ಟು ನಿಂತ ಪರಿಣಾಮ ಲಿಫ್ಟ್‌ನಲ್ಲೇ ರಾಜ್ಯಪಾಲ ಗೆಹ್ಲೋಟ್‌ ಕೆಲಕಾಲ ಸಿಲುಕಿಕೊಂಡಿದ್ದರು. ಈ ವೇಳೆ ಭದ್ರತಾ ಸಿಬ್ಬಂದಿ ತೀವ್ರ ಆತಂಕಕ್ಕೊಳಗಾಗಿದ್ದರು.

ತಕ್ಷಣ ಎಚ್ಚೆತ್ತ ಸಿಬ್ಬಂದಿ ಲಿಫ್ಟ್‌ನಿಂದ ರಾಜ್ಯಪಾಲರನ್ನು ಕೆಳಗಿಳಿಸಿದರು. ಈ ವೇಳೆ ಲಿಫ್ಟ್ ಬೇಡವೆಂದ ರಾಜ್ಯಪಾಲರು ನಡೆದುಕೊಂಡೇ ಕಾರ್ಯಕ್ರಮಕ್ಕೆ ತೆರಳಿದ ಘಟನೆ ನಡೆಯಿತು.

ಆಂದೋಲನ ಡೆಸ್ಕ್

Recent Posts

ಶಿಥಿಲ ಶಾಲಾ ಕಟ್ಟಡಗಳ ತೆರವು ಯಾವಾಗ?

ಮಹಾದೇಶ್ ಎಂ.ಗೌಡ ಮಳೆ ಹಿನ್ನೆಲೆಯಲ್ಲಿ ಹನೂರು ಶೈಕ್ಷಣಿಕ ವಲಯದ ಹಲವು ಶಾಲೆಗಳ ಪೋಷಕರು, ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತಂಕ  ಹನೂರು: ಹನೂರು…

2 mins ago

ಇಲ್ಲಿ ಒಂದಾ ಮಾಡಲು ಹೋದ್ರೆ ಇನ್ನೊಂದಾದೀತು!

ಕೆ.ಎಂ.ಅನುಚೇತನ್ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಗೆ ಕನ್ನಡಿ ನಿರ್ಬಂಧ ಮೈಸೂರು: ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡಿ ನಗರದ ಸ್ವಚ್ಛತೆಗೆ ಸವಾಲಾಗಿದ್ದವರಿಗೆ…

8 mins ago

ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ದುರ್ಬಲ

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ನಗರದ ಶೈಕ್ಷಣಿಕ ಪರಂಪರೆಯ ಭಾಗವಾಗಿರುವ ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ಕಟ್ಟಡ ಈಗ ಆತಂಕದ ಕೇಂದ್ರವಾಗಿದೆ.…

15 mins ago

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

10 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

11 hours ago