ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ ಬಹುರೂಪಿ ನಾಟಕೋತ್ಸವ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಮೈಸೂರಿನ ರಂಗಾಯಣದ ಆವರಣದಲ್ಲಿ ರಂಗೋತ್ಸವ ನಡೆಯುತ್ತಿದ್ದು, ಎರಡನೇ ದಿನವಾದ ಇಂದು ಜನರಲ್ಲಿ ನಿರಾಸಕ್ತಿ ಮೂಡಿದೆ ಎನ್ನಲಾಗುತ್ತಿದೆ. ಬೆಳಿಗ್ಗೆ ಹಾಗೂ ಮಧ್ಯಾಹ್ನ ನಡೆಯುವ ಚಲನಚಿತ್ರೋತ್ಸವಕ್ಕೆ ಜನರು ಬಾರದ ಹಿನ್ನೆಲೆಯಲ್ಲಿ ರಂಗಾಯಣದ ಆವರಣ ಬಿಕೋ ಎನ್ನುತ್ತಿದೆ. ಬೆಳಗ್ಗೆ 10.30 ರಿಂದ 12, 12 ರಿಂದ 1.30 ಮತ್ತು 2 ರಿಂದ 4.30ರವರೆಗೆ ಚಲನಚಿತ್ರೋತ್ಸವ ನಡೆಯಲಿದ್ದು, ಶ್ರೀರಂಗದಲ್ಲಿ ನಡೆಯುತ್ತಿರುವ ಪ್ರೀಡಂ ಈಸ್ ಬ್ಯೂಟಿಫುಲ್ ಚಲನಚಿತ್ರ ಪ್ರದರ್ಶನ ನಡೆಯಲಿದೆ. ಬೆರಳೆಣಿಕೆಯಷ್ಟು ಮಂದಿ ಮಾತ್ರ ಚಲನಚಿತ್ರ ವೀಕ್ಷಣೆ ಮಾಡುತ್ತಿದ್ದು, ಸಂಜೆ ನಡೆಯುವ ನಾಟಕಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ನಾಟಕಾಸಕ್ತರು ಬರುವ ನಿರೀಕ್ಷೆಯಿದೆ.
ಇನ್ನು ಈ ಬಗ್ಗೆ ಮಾತನಾಡಿರುವ ವೀಕ್ಷಕರು, ನಿನ್ನೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ರಜೆಯಿದ್ದ ಹಿನ್ನೆಲೆಯಲ್ಲಿ ನಾಟಕೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದಿದ್ರು. ಇಂದು ಬದ್ದತೆ ಇರುವವರು ಮಾತ್ರ ಬಂದಿದ್ದಾರೆ. ಆಮೇಲೆ ಪ್ರಚಾರದ ಕೊರತೆನೂ ಇರಬಹುದು. ಇವತ್ತು ದರ್ಶನ್ ಸಂಕ್ರಾಂತಿ ಹಬ್ಬ ಆಚರಿಸಿದ್ರು ಎಂದು ಹೆಡ್ಲೈನ್ ಸುದ್ದಿ ಮಾಡುತ್ತಾರೆ. ಾದರೆ ನಾಟಕೋತ್ಸವದಂತಹ ಉಪಯುಕ್ತ ಮಾಹಿತಿಗಳನ್ನು ಮಾಧ್ಯಮಗಳು ಜನರಿಗೆ ತಿಳಿಸುವ ಕೆಲಸ ಮಾಡಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…