ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ ಬಹುರೂಪಿ ನಾಟಕೋತ್ಸವ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಮೈಸೂರಿನ ರಂಗಾಯಣದ ಆವರಣದಲ್ಲಿ ರಂಗೋತ್ಸವ ನಡೆಯುತ್ತಿದ್ದು, ಎರಡನೇ ದಿನವಾದ ಇಂದು ಜನರಲ್ಲಿ ನಿರಾಸಕ್ತಿ ಮೂಡಿದೆ ಎನ್ನಲಾಗುತ್ತಿದೆ. ಬೆಳಿಗ್ಗೆ ಹಾಗೂ ಮಧ್ಯಾಹ್ನ ನಡೆಯುವ ಚಲನಚಿತ್ರೋತ್ಸವಕ್ಕೆ ಜನರು ಬಾರದ ಹಿನ್ನೆಲೆಯಲ್ಲಿ ರಂಗಾಯಣದ ಆವರಣ ಬಿಕೋ ಎನ್ನುತ್ತಿದೆ. ಬೆಳಗ್ಗೆ 10.30 ರಿಂದ 12, 12 ರಿಂದ 1.30 ಮತ್ತು 2 ರಿಂದ 4.30ರವರೆಗೆ ಚಲನಚಿತ್ರೋತ್ಸವ ನಡೆಯಲಿದ್ದು, ಶ್ರೀರಂಗದಲ್ಲಿ ನಡೆಯುತ್ತಿರುವ ಪ್ರೀಡಂ ಈಸ್ ಬ್ಯೂಟಿಫುಲ್ ಚಲನಚಿತ್ರ ಪ್ರದರ್ಶನ ನಡೆಯಲಿದೆ. ಬೆರಳೆಣಿಕೆಯಷ್ಟು ಮಂದಿ ಮಾತ್ರ ಚಲನಚಿತ್ರ ವೀಕ್ಷಣೆ ಮಾಡುತ್ತಿದ್ದು, ಸಂಜೆ ನಡೆಯುವ ನಾಟಕಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ನಾಟಕಾಸಕ್ತರು ಬರುವ ನಿರೀಕ್ಷೆಯಿದೆ.
ಇನ್ನು ಈ ಬಗ್ಗೆ ಮಾತನಾಡಿರುವ ವೀಕ್ಷಕರು, ನಿನ್ನೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ರಜೆಯಿದ್ದ ಹಿನ್ನೆಲೆಯಲ್ಲಿ ನಾಟಕೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದಿದ್ರು. ಇಂದು ಬದ್ದತೆ ಇರುವವರು ಮಾತ್ರ ಬಂದಿದ್ದಾರೆ. ಆಮೇಲೆ ಪ್ರಚಾರದ ಕೊರತೆನೂ ಇರಬಹುದು. ಇವತ್ತು ದರ್ಶನ್ ಸಂಕ್ರಾಂತಿ ಹಬ್ಬ ಆಚರಿಸಿದ್ರು ಎಂದು ಹೆಡ್ಲೈನ್ ಸುದ್ದಿ ಮಾಡುತ್ತಾರೆ. ಾದರೆ ನಾಟಕೋತ್ಸವದಂತಹ ಉಪಯುಕ್ತ ಮಾಹಿತಿಗಳನ್ನು ಮಾಧ್ಯಮಗಳು ಜನರಿಗೆ ತಿಳಿಸುವ ಕೆಲಸ ಮಾಡಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…