bike thift
ಮೈಸೂರು: ಇಬ್ಬರು ಹೆಂಡತಿಯರ ಮುದ್ದಿನ ಗಂಡನೊಬ್ಬ ಬೈಕ್ ಕಳ್ಳತನಕ್ಕೆ ಇಳಿದು ಈಗ ಪೊಲೀಸರ ಅತಿಥಿಯಾಗಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಚಾಮರಾಜನಗರದ ನಿವಾಸಿ ಅಜ್ಮತ್ ಉಲ್ಲಾ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.
ಅಜ್ಮತ್ ಉಲ್ಲಾಗೆ ಇಬ್ಬರು ಹೆಂಡತಿಯರು ಹಾಗೂ 8 ಜನ ಮಕ್ಕಳಿದ್ದರು. ಇವರೆಲ್ಲರನ್ನೂ ಸಾಕಲೆಂದೇ ಅಜ್ಮತ್ ಉಲ್ಲಾ ಬೈಕ್ ಕಳ್ಳತನ ಮಾಡಲು ಶುರು ಮಾಡಿದ್ದ ಎಂದು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ.
ಗಡಿ ಜಿಲ್ಲೆ ಚಾಮರಾಜನಗರದಿಂದ ಬಸ್ನಲ್ಲಿ ಬರುತ್ತಿದ್ದ ಅಜ್ಮತ್ ಉಲ್ಲಾ, ಮೈಸೂರಿನ ವಿವಿಧೆಡೆ ಪಾರ್ಕಿಂಗ್ ಮಾಡಿ ನಿಲ್ಲಿಸಿದ್ದ ಬೈಕ್ಗಳನ್ನು ಮಾಸ್ಟರ್ ಕೀ ಬಳಸಿ ಕಳ್ಳತನ ಮಾಡುತ್ತಿದ್ದ. ಕದ್ದ ಬೈಕ್ಗಳನ್ನು ಮಾರಾಟ ಮಾಡಿ ಹಣ ಸಂಪಾದಿಸುತ್ತಿದ್ದ. ಹೀಗೆ ಕಳೆದ 7 ತಿಂಗಳಿನಲ್ಲಿ ಬರೋಬ್ಬರಿ 24 ಬೈಕ್ಗಳನ್ನು ಈತ ಕಳ್ಳತನ ಮಾಡಿದ್ದಾನೆ.
ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ಬೈಕ್ ಕದಿಯುತ್ತಿದ್ದಾಗಲೇ ಅಜ್ಮತ್ ಉಲ್ಲಾ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಅಜ್ಮತ್ ಉಲ್ಲಾ ಪಾರ್ಕಿಂಗ್ ಮಾಡಿದ್ದ ಬೈಕ್ ಮೇಲೆ ಬಹಳ ಸಮಯ ಕುಳಿತುಕೊಂಡಿದ್ದ. ಈ ವೇಳೆ ಅನುಮಾನಗೊಂಡ ಪೊಲೀಸರು ಆತನನ್ನೇ ಗಮನಿಸುತ್ತಿದ್ದರು. ಬೈಕ್ ಕದ್ದು ಎಸ್ಕೇಪ್ ಆಗಲು ಯತ್ನಿಸುತ್ತಿದ್ದ ವೇಳೆಯೇ ಅಜ್ಮತ್ ಉಲ್ಲಾನನ್ನು ಪೊಲೀಸರು ಬಂಧಿಸಿದ್ದಾರೆ.
ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…
ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ…