bike thift
ಮೈಸೂರು: ಇಬ್ಬರು ಹೆಂಡತಿಯರ ಮುದ್ದಿನ ಗಂಡನೊಬ್ಬ ಬೈಕ್ ಕಳ್ಳತನಕ್ಕೆ ಇಳಿದು ಈಗ ಪೊಲೀಸರ ಅತಿಥಿಯಾಗಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಚಾಮರಾಜನಗರದ ನಿವಾಸಿ ಅಜ್ಮತ್ ಉಲ್ಲಾ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.
ಅಜ್ಮತ್ ಉಲ್ಲಾಗೆ ಇಬ್ಬರು ಹೆಂಡತಿಯರು ಹಾಗೂ 8 ಜನ ಮಕ್ಕಳಿದ್ದರು. ಇವರೆಲ್ಲರನ್ನೂ ಸಾಕಲೆಂದೇ ಅಜ್ಮತ್ ಉಲ್ಲಾ ಬೈಕ್ ಕಳ್ಳತನ ಮಾಡಲು ಶುರು ಮಾಡಿದ್ದ ಎಂದು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ.
ಗಡಿ ಜಿಲ್ಲೆ ಚಾಮರಾಜನಗರದಿಂದ ಬಸ್ನಲ್ಲಿ ಬರುತ್ತಿದ್ದ ಅಜ್ಮತ್ ಉಲ್ಲಾ, ಮೈಸೂರಿನ ವಿವಿಧೆಡೆ ಪಾರ್ಕಿಂಗ್ ಮಾಡಿ ನಿಲ್ಲಿಸಿದ್ದ ಬೈಕ್ಗಳನ್ನು ಮಾಸ್ಟರ್ ಕೀ ಬಳಸಿ ಕಳ್ಳತನ ಮಾಡುತ್ತಿದ್ದ. ಕದ್ದ ಬೈಕ್ಗಳನ್ನು ಮಾರಾಟ ಮಾಡಿ ಹಣ ಸಂಪಾದಿಸುತ್ತಿದ್ದ. ಹೀಗೆ ಕಳೆದ 7 ತಿಂಗಳಿನಲ್ಲಿ ಬರೋಬ್ಬರಿ 24 ಬೈಕ್ಗಳನ್ನು ಈತ ಕಳ್ಳತನ ಮಾಡಿದ್ದಾನೆ.
ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ಬೈಕ್ ಕದಿಯುತ್ತಿದ್ದಾಗಲೇ ಅಜ್ಮತ್ ಉಲ್ಲಾ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಅಜ್ಮತ್ ಉಲ್ಲಾ ಪಾರ್ಕಿಂಗ್ ಮಾಡಿದ್ದ ಬೈಕ್ ಮೇಲೆ ಬಹಳ ಸಮಯ ಕುಳಿತುಕೊಂಡಿದ್ದ. ಈ ವೇಳೆ ಅನುಮಾನಗೊಂಡ ಪೊಲೀಸರು ಆತನನ್ನೇ ಗಮನಿಸುತ್ತಿದ್ದರು. ಬೈಕ್ ಕದ್ದು ಎಸ್ಕೇಪ್ ಆಗಲು ಯತ್ನಿಸುತ್ತಿದ್ದ ವೇಳೆಯೇ ಅಜ್ಮತ್ ಉಲ್ಲಾನನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…
ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…