ಮೈಸೂರು ನಗರ

ಇಬ್ಬರು ಹೆಂಡ್ತೀರ ಮುದ್ದಿನ ಗಂಡ ಈಗ ಪೊಲೀಸರ ಅತಿಥಿ: ಕಾರಣ ಇಷ್ಟೇ.!

ಮೈಸೂರು: ಇಬ್ಬರು ಹೆಂಡತಿಯರ ಮುದ್ದಿನ ಗಂಡನೊಬ್ಬ ಬೈಕ್‌ ಕಳ್ಳತನಕ್ಕೆ ಇಳಿದು ಈಗ ಪೊಲೀಸರ ಅತಿಥಿಯಾಗಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಚಾಮರಾಜನಗರದ ನಿವಾಸಿ ಅಜ್ಮತ್‌ ಉಲ್ಲಾ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.

ಅಜ್ಮತ್‌ ಉಲ್ಲಾಗೆ ಇಬ್ಬರು ಹೆಂಡತಿಯರು ಹಾಗೂ 8 ಜನ ಮಕ್ಕಳಿದ್ದರು. ಇವರೆಲ್ಲರನ್ನೂ ಸಾಕಲೆಂದೇ ಅಜ್ಮತ್‌ ಉಲ್ಲಾ ಬೈಕ್‌ ಕಳ್ಳತನ ಮಾಡಲು ಶುರು ಮಾಡಿದ್ದ ಎಂದು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ.

ಗಡಿ ಜಿಲ್ಲೆ ಚಾಮರಾಜನಗರದಿಂದ ಬಸ್‌ನಲ್ಲಿ ಬರುತ್ತಿದ್ದ ಅಜ್ಮತ್‌ ಉಲ್ಲಾ, ಮೈಸೂರಿನ ವಿವಿಧೆಡೆ ಪಾರ್ಕಿಂಗ್‌ ಮಾಡಿ ನಿಲ್ಲಿಸಿದ್ದ ಬೈಕ್‌ಗಳನ್ನು ಮಾಸ್ಟರ್‌ ಕೀ ಬಳಸಿ ಕಳ್ಳತನ ಮಾಡುತ್ತಿದ್ದ. ಕದ್ದ ಬೈಕ್‌ಗಳನ್ನು ಮಾರಾಟ ಮಾಡಿ ಹಣ ಸಂಪಾದಿಸುತ್ತಿದ್ದ. ಹೀಗೆ ಕಳೆದ 7 ತಿಂಗಳಿನಲ್ಲಿ ಬರೋಬ್ಬರಿ 24 ಬೈಕ್‌ಗಳನ್ನು ಈತ ಕಳ್ಳತನ ಮಾಡಿದ್ದಾನೆ.

ಮೈಸೂರಿನ ಸಯ್ಯಾಜಿರಾವ್‌ ರಸ್ತೆಯಲ್ಲಿ ಬೈಕ್‌ ಕದಿಯುತ್ತಿದ್ದಾಗಲೇ ಅಜ್ಮತ್‌ ಉಲ್ಲಾ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಅಜ್ಮತ್‌ ಉಲ್ಲಾ ಪಾರ್ಕಿಂಗ್‌ ಮಾಡಿದ್ದ ಬೈಕ್‌ ಮೇಲೆ ಬಹಳ ಸಮಯ ಕುಳಿತುಕೊಂಡಿದ್ದ. ಈ ವೇಳೆ ಅನುಮಾನಗೊಂಡ ಪೊಲೀಸರು ಆತನನ್ನೇ ಗಮನಿಸುತ್ತಿದ್ದರು. ಬೈಕ್‌ ಕದ್ದು ಎಸ್ಕೇಪ್‌ ಆಗಲು ಯತ್ನಿಸುತ್ತಿದ್ದ ವೇಳೆಯೇ ಅಜ್ಮತ್‌ ಉಲ್ಲಾನನ್ನು ಪೊಲೀಸರು ಬಂಧಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

2 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

2 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

3 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

13 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

14 hours ago