ಮೈಸೂರು ನಗರ

ಇಬ್ಬರು ಹೆಂಡ್ತೀರ ಮುದ್ದಿನ ಗಂಡ ಈಗ ಪೊಲೀಸರ ಅತಿಥಿ: ಕಾರಣ ಇಷ್ಟೇ.!

ಮೈಸೂರು: ಇಬ್ಬರು ಹೆಂಡತಿಯರ ಮುದ್ದಿನ ಗಂಡನೊಬ್ಬ ಬೈಕ್‌ ಕಳ್ಳತನಕ್ಕೆ ಇಳಿದು ಈಗ ಪೊಲೀಸರ ಅತಿಥಿಯಾಗಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಚಾಮರಾಜನಗರದ ನಿವಾಸಿ ಅಜ್ಮತ್‌ ಉಲ್ಲಾ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.

ಅಜ್ಮತ್‌ ಉಲ್ಲಾಗೆ ಇಬ್ಬರು ಹೆಂಡತಿಯರು ಹಾಗೂ 8 ಜನ ಮಕ್ಕಳಿದ್ದರು. ಇವರೆಲ್ಲರನ್ನೂ ಸಾಕಲೆಂದೇ ಅಜ್ಮತ್‌ ಉಲ್ಲಾ ಬೈಕ್‌ ಕಳ್ಳತನ ಮಾಡಲು ಶುರು ಮಾಡಿದ್ದ ಎಂದು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ.

ಗಡಿ ಜಿಲ್ಲೆ ಚಾಮರಾಜನಗರದಿಂದ ಬಸ್‌ನಲ್ಲಿ ಬರುತ್ತಿದ್ದ ಅಜ್ಮತ್‌ ಉಲ್ಲಾ, ಮೈಸೂರಿನ ವಿವಿಧೆಡೆ ಪಾರ್ಕಿಂಗ್‌ ಮಾಡಿ ನಿಲ್ಲಿಸಿದ್ದ ಬೈಕ್‌ಗಳನ್ನು ಮಾಸ್ಟರ್‌ ಕೀ ಬಳಸಿ ಕಳ್ಳತನ ಮಾಡುತ್ತಿದ್ದ. ಕದ್ದ ಬೈಕ್‌ಗಳನ್ನು ಮಾರಾಟ ಮಾಡಿ ಹಣ ಸಂಪಾದಿಸುತ್ತಿದ್ದ. ಹೀಗೆ ಕಳೆದ 7 ತಿಂಗಳಿನಲ್ಲಿ ಬರೋಬ್ಬರಿ 24 ಬೈಕ್‌ಗಳನ್ನು ಈತ ಕಳ್ಳತನ ಮಾಡಿದ್ದಾನೆ.

ಮೈಸೂರಿನ ಸಯ್ಯಾಜಿರಾವ್‌ ರಸ್ತೆಯಲ್ಲಿ ಬೈಕ್‌ ಕದಿಯುತ್ತಿದ್ದಾಗಲೇ ಅಜ್ಮತ್‌ ಉಲ್ಲಾ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಅಜ್ಮತ್‌ ಉಲ್ಲಾ ಪಾರ್ಕಿಂಗ್‌ ಮಾಡಿದ್ದ ಬೈಕ್‌ ಮೇಲೆ ಬಹಳ ಸಮಯ ಕುಳಿತುಕೊಂಡಿದ್ದ. ಈ ವೇಳೆ ಅನುಮಾನಗೊಂಡ ಪೊಲೀಸರು ಆತನನ್ನೇ ಗಮನಿಸುತ್ತಿದ್ದರು. ಬೈಕ್‌ ಕದ್ದು ಎಸ್ಕೇಪ್‌ ಆಗಲು ಯತ್ನಿಸುತ್ತಿದ್ದ ವೇಳೆಯೇ ಅಜ್ಮತ್‌ ಉಲ್ಲಾನನ್ನು ಪೊಲೀಸರು ಬಂಧಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

7 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

7 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

7 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

7 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

7 hours ago