ಮೈಸೂರು ನಗರ

ಸ್ಮಾರಕಗಳ ಸಂರಕ್ಷಣೆಯಲ್ಲಿ ಬ್ರಿಟಿಷರು ವಿಶೇಷ ಪಾತ್ರ ವಹಿಸಿದ್ದರು: ಎಸ್‌.ಸುಬ್ಬರಾಮನ್‌

ಮೈಸೂರು: ಬ್ರಿಟಿಷರು ಭಾರತವನ್ನು ಆರ್ಥಿಕವಾಗಿ ಶೋಷಣೆ ಮಾಡಿದರೂ, ಸ್ಮಾರಕಗಳ ಸಂರಕ್ಷಣೆಯಲ್ಲಿ ವಿಶೇಷ ಪಾತ್ರವಹಿಸಿದ್ದರು ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ನಿವೃತ್ತ ವ್ಯವಸ್ಥಾಪಕ ಎಸ್‌.ಸುಬ್ಬರಾಮನ್‌ ತಿಳಿಸಿದರು.

ವಿದ್ಯಾವರ್ಧಕ ಎಂಜಿನಿಯರಿಂಗ್‌ ಕಾಲೇಜಿನ ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ಸ್‌ ಎಂಜಿನಿಯರಿಂಗ್‌ ವಿಭಾಗವು ‘ಇಂಡಿಯನ್ ನಾಲೆಡ್ಜ್‌ ಸಿಸ್ಟಂ (ಐಕೆಎಸ್‌)’ ಕುರಿತು ಸೋಮವಾರ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು.

‘ಬೆಲೆ ಬಾಳುವ ಪುರಾತನ ವರ್ಣಚಿತ್ರ, ಸ್ಮಾರಕ ರಕ್ಷಿಸಲು ಬಣ್ಣಗಳ ಬಗ್ಗೆ ತಿಳಿದಿದ್ದರೆ ಸಾಲದು, ಪುರಾತತ್ವ ವಿಚಾರಗಳ ಬಗ್ಗೆ ಆಸಕ್ತಿಯೂ ಇರಬೇಕು. ಹೈದರಾಬಾದ್‌ನ ನಿಜಾಮರು ಹಾಗೂ ಇನ್ನೂ ಅನೇಕ ರಾಜರು ದೇಶದ ಐತಿಹಾಸಿಕ ಕಲಾ ಸಂಪತ್ತನ್ನು ಉಳಿಸುವಲ್ಲಿ ಶ್ರಮಿಸಿದ್ದರಿಂದ, ಇಂದಿನ ಪೀಳಿಗೆಗೆ ನಮ್ಮ ದೇಶದ ಕಲಾ ಶ್ರೀಮಂತಿಕೆಯ ಬಗ್ಗೆ ಅರಿಯಲು ಸಾಧ್ಯವಾಗಿದೆ’ ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಪಿ. ವಿಶ್ವನಾಥ್, ಕಾಲೇಜಿನ ಉಪಾಧ್ಯಕ್ಷ ಶೋಭಾ ಶಂಕರ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥ ಗೋಪಾಲ್ ರೆಡ್ಡಿ, ಬೆಂಗಳೂರಿನ ಮಾಜಿ ಸಿಇಡಿಟಿ ಅಶೋಕ್ ರಾವ್ ಇದ್ದರು.

ಆಂದೋಲನ ಡೆಸ್ಕ್

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

50 mins ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

56 mins ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

60 mins ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

10 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

10 hours ago