ಮೈಸೂರು: ಬ್ರಿಟಿಷರು ಭಾರತವನ್ನು ಆರ್ಥಿಕವಾಗಿ ಶೋಷಣೆ ಮಾಡಿದರೂ, ಸ್ಮಾರಕಗಳ ಸಂರಕ್ಷಣೆಯಲ್ಲಿ ವಿಶೇಷ ಪಾತ್ರವಹಿಸಿದ್ದರು ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ನಿವೃತ್ತ ವ್ಯವಸ್ಥಾಪಕ ಎಸ್.ಸುಬ್ಬರಾಮನ್ ತಿಳಿಸಿದರು.
ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗವು ‘ಇಂಡಿಯನ್ ನಾಲೆಡ್ಜ್ ಸಿಸ್ಟಂ (ಐಕೆಎಸ್)’ ಕುರಿತು ಸೋಮವಾರ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು.
‘ಬೆಲೆ ಬಾಳುವ ಪುರಾತನ ವರ್ಣಚಿತ್ರ, ಸ್ಮಾರಕ ರಕ್ಷಿಸಲು ಬಣ್ಣಗಳ ಬಗ್ಗೆ ತಿಳಿದಿದ್ದರೆ ಸಾಲದು, ಪುರಾತತ್ವ ವಿಚಾರಗಳ ಬಗ್ಗೆ ಆಸಕ್ತಿಯೂ ಇರಬೇಕು. ಹೈದರಾಬಾದ್ನ ನಿಜಾಮರು ಹಾಗೂ ಇನ್ನೂ ಅನೇಕ ರಾಜರು ದೇಶದ ಐತಿಹಾಸಿಕ ಕಲಾ ಸಂಪತ್ತನ್ನು ಉಳಿಸುವಲ್ಲಿ ಶ್ರಮಿಸಿದ್ದರಿಂದ, ಇಂದಿನ ಪೀಳಿಗೆಗೆ ನಮ್ಮ ದೇಶದ ಕಲಾ ಶ್ರೀಮಂತಿಕೆಯ ಬಗ್ಗೆ ಅರಿಯಲು ಸಾಧ್ಯವಾಗಿದೆ’ ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಪಿ. ವಿಶ್ವನಾಥ್, ಕಾಲೇಜಿನ ಉಪಾಧ್ಯಕ್ಷ ಶೋಭಾ ಶಂಕರ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥ ಗೋಪಾಲ್ ರೆಡ್ಡಿ, ಬೆಂಗಳೂರಿನ ಮಾಜಿ ಸಿಇಡಿಟಿ ಅಶೋಕ್ ರಾವ್ ಇದ್ದರು.
ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…
ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್ಕಾಂಗ್ಗೆ ಬಂದಾಗ…
ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …
ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ ಮಡಿಕೇರಿ:…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…
ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…