ಮೈಸೂರು ನಗರ

ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿ ವಿಚಾರಕ್ಕೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ಹೈಕಮಾಂಡ್ ಪಕ್ಷ. ಹೈಕಮಾಂಡ್ ಹೇಳಿದರೆ ಇನ್ನೂ ಎರಡು ಬಜೆಟ್ ಮಂಡಿಸುತ್ತೇನೆ ಎಂದು ಅಧಿವೇಶನದಲ್ಲೇ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತೇನೆ. ಉಪಚುನಾವಣೆ ಫಲಿತಾಂಶಕ್ಕೂ ಅದಕ್ಕೂ ಸಂಬಂಧ ಇಲ್ಲ. ಎರಡು ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ‌. ದಾವಣಗೆರೆಯಲ್ಲಿ ಯಾವ ಗೊಂದಲವೂ ಇಲ್ಲ. ಕಳೆದ ಮೂರು ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ನಾವೇ ಗೆದ್ದಿದ್ದೇವೆ‌. ಅದು ಜನರು ಸರ್ಕಾರಕ್ಕೆ ಮಾಡಿದ ಆಶೀರ್ವಾದ. ಈ ಫಲಿತಾಂಶವೂ ಕೂಡ ಜನರ ಸರ್ಕಾರ ಮಾಡುವ ಆಶೀರ್ವಾದ. ಇದನ್ನ ದಿಕ್ಸೂಚಿ ಅದು ಇದು ಎಂದು ಹೇಳುವುದಿಲ್ಲ. ನಾನು ಏಪ್ರಿಲ್ ಒಂದರಿಂದ ಚುನಾವಣೆ ಪ್ರಚಾರದಲ್ಲಿ ಭಾಗವಹಿಸುತ್ತೇನೆ. ಏಪ್ರಿಲ್.5ರಂದು ಕೇರಳಕ್ಕೆ ಪ್ರಚಾರಕ್ಕೆ ಹೋಗುತ್ತೇನೆ. ತಮಿಳುನಾಡು ಚುನಾವಣೆ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಹೇಳಿದರು.

ಇನ್ನು ಶಿಕ್ಷಣದಲ್ಲಿ ದ್ವಿಭಾಷಾ ನೀತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸರ್ಕಾರದ ಈ ನಿರ್ಧಾರವನ್ನ ಎಲ್ಲರೂ ಒಪ್ಪಿಕೊಳ್ಳಬೇಕು. ಯಾರೋ ಕೆಲವರು ವಿರೋಧ ಮಾಡಿದರು ಎಂದು ನಾವು ಹಿಂದೆ ಸರಿಯುವುದಿಲ್ಲ. ಎಲ್ಲಾ ದೃಷ್ಟಿಕೋನ ಪರಾಮರ್ಶಿಸಿ ಸರ್ಕಾರ ಈ ನಿರ್ಧಾರ ಮಾಡಿದೆ. ಎಲ್ಲರೂ ಈ ನಿರ್ಧಾರವನ್ನು ಒಪ್ಪಿಕೊಳ್ಳಬೇಕು. ಈ ವರ್ಷದಿಂದಲೇ ಪರೀಕ್ಷೆಯಲ್ಲಿ ಇದು ಜಾರಿ. ನಾನು ಹಿಂದಿ ಕಲಿಯಬಾರದು ಎಂದು ಹೇಳುತ್ತಿಲ್ಲ. ಕಡ್ಡಾಯ ಬೇಡ ಎಂದು ಹೇಳುತ್ತಿದ್ದೇನೆ‌‌. ನಾನು ಓದುವಾಗ ಕಡ್ಡಾಯ ಇರಲಿಲ್ಲ. ಹೀಗಾಗಿ ನಾನು ಹಿಂದಿ ಓದಲೇ ಇಲ್ಲ. ಸುಮ್ಮನೆ ಹೇರಿಕೆಯಾಗಬಾರದು ಎಂದರು.

ಇನ್ನು ಇಂದಿನಿಂದ ಐಪಿಎಲ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಏನು ಕೆಲಸ ಇಲ್ಲ ಅಂದರೇ ಮಾತ್ರ ಕ್ರಿಕೆಟ್ ನೋಡಲು ಹೋಗುತ್ತೇನೆ. ಇಲ್ಲ ಅಂದ್ರೆ ಹೋಗುವುದಿಲ್ಲ. ನನಗೆ ಕ್ರಿಕೆಟ್ ಅಂದರೆ ಇಷ್ಟ. ಆದರೆ ಕೆಲಸ ಇದ್ದಾಗ ನೋಡುವುದಿಲ್ಲ. ನನಗೆ 9 ತಾರೀಖಿನವರೆಗೂ ಚುನಾವಣಾ ಕೆಲಸಗಳು ಇದೆ. ಅಲ್ಲಿವರೆಗೆ ಯಾವ ಮ್ಯಾಚ್ ಗಳನ್ನ ನೋಡಲು ಹೋಗುವುದಿಲ್ಲ. ಆಮೇಲೆ ಬೇಕಾದ್ರೆ ನೋಡೊಣಾ. ಶಾಸಕರು ಎರಡು ಟಿಕೆಟ್ ಕೇಳಿದ್ರು ಮೊದಲು ಒಂದು ಕೊಡುತ್ತಿದ್ದರು, ಈಗ ಎರಡು ಟಿಕೆಟ್ ಕೊಟ್ಟಿದ್ದಾರೆ. ಇಷ್ಟ ಇದ್ದವರು ಹೋಗಬಹುದು, ಬೇಡ ಎಂದರೆ ಬಿಡಬಹುದು.
ಇದರಲ್ಲಿ ತಪ್ಪು ಸರಿ ಪ್ರಶ್ನೆ ಬರುವುದಿಲ್ಲ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

54 mins ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

3 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

5 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

11 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

11 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

12 hours ago