ಮೈಸೂರು ನಗರ

ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿ ವಿಚಾರಕ್ಕೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ಹೈಕಮಾಂಡ್ ಪಕ್ಷ. ಹೈಕಮಾಂಡ್ ಹೇಳಿದರೆ ಇನ್ನೂ ಎರಡು ಬಜೆಟ್ ಮಂಡಿಸುತ್ತೇನೆ ಎಂದು ಅಧಿವೇಶನದಲ್ಲೇ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತೇನೆ. ಉಪಚುನಾವಣೆ ಫಲಿತಾಂಶಕ್ಕೂ ಅದಕ್ಕೂ ಸಂಬಂಧ ಇಲ್ಲ. ಎರಡು ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ‌. ದಾವಣಗೆರೆಯಲ್ಲಿ ಯಾವ ಗೊಂದಲವೂ ಇಲ್ಲ. ಕಳೆದ ಮೂರು ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ನಾವೇ ಗೆದ್ದಿದ್ದೇವೆ‌. ಅದು ಜನರು ಸರ್ಕಾರಕ್ಕೆ ಮಾಡಿದ ಆಶೀರ್ವಾದ. ಈ ಫಲಿತಾಂಶವೂ ಕೂಡ ಜನರ ಸರ್ಕಾರ ಮಾಡುವ ಆಶೀರ್ವಾದ. ಇದನ್ನ ದಿಕ್ಸೂಚಿ ಅದು ಇದು ಎಂದು ಹೇಳುವುದಿಲ್ಲ. ನಾನು ಏಪ್ರಿಲ್ ಒಂದರಿಂದ ಚುನಾವಣೆ ಪ್ರಚಾರದಲ್ಲಿ ಭಾಗವಹಿಸುತ್ತೇನೆ. ಏಪ್ರಿಲ್.5ರಂದು ಕೇರಳಕ್ಕೆ ಪ್ರಚಾರಕ್ಕೆ ಹೋಗುತ್ತೇನೆ. ತಮಿಳುನಾಡು ಚುನಾವಣೆ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಹೇಳಿದರು.

ಇನ್ನು ಶಿಕ್ಷಣದಲ್ಲಿ ದ್ವಿಭಾಷಾ ನೀತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸರ್ಕಾರದ ಈ ನಿರ್ಧಾರವನ್ನ ಎಲ್ಲರೂ ಒಪ್ಪಿಕೊಳ್ಳಬೇಕು. ಯಾರೋ ಕೆಲವರು ವಿರೋಧ ಮಾಡಿದರು ಎಂದು ನಾವು ಹಿಂದೆ ಸರಿಯುವುದಿಲ್ಲ. ಎಲ್ಲಾ ದೃಷ್ಟಿಕೋನ ಪರಾಮರ್ಶಿಸಿ ಸರ್ಕಾರ ಈ ನಿರ್ಧಾರ ಮಾಡಿದೆ. ಎಲ್ಲರೂ ಈ ನಿರ್ಧಾರವನ್ನು ಒಪ್ಪಿಕೊಳ್ಳಬೇಕು. ಈ ವರ್ಷದಿಂದಲೇ ಪರೀಕ್ಷೆಯಲ್ಲಿ ಇದು ಜಾರಿ. ನಾನು ಹಿಂದಿ ಕಲಿಯಬಾರದು ಎಂದು ಹೇಳುತ್ತಿಲ್ಲ. ಕಡ್ಡಾಯ ಬೇಡ ಎಂದು ಹೇಳುತ್ತಿದ್ದೇನೆ‌‌. ನಾನು ಓದುವಾಗ ಕಡ್ಡಾಯ ಇರಲಿಲ್ಲ. ಹೀಗಾಗಿ ನಾನು ಹಿಂದಿ ಓದಲೇ ಇಲ್ಲ. ಸುಮ್ಮನೆ ಹೇರಿಕೆಯಾಗಬಾರದು ಎಂದರು.

ಇನ್ನು ಇಂದಿನಿಂದ ಐಪಿಎಲ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಏನು ಕೆಲಸ ಇಲ್ಲ ಅಂದರೇ ಮಾತ್ರ ಕ್ರಿಕೆಟ್ ನೋಡಲು ಹೋಗುತ್ತೇನೆ. ಇಲ್ಲ ಅಂದ್ರೆ ಹೋಗುವುದಿಲ್ಲ. ನನಗೆ ಕ್ರಿಕೆಟ್ ಅಂದರೆ ಇಷ್ಟ. ಆದರೆ ಕೆಲಸ ಇದ್ದಾಗ ನೋಡುವುದಿಲ್ಲ. ನನಗೆ 9 ತಾರೀಖಿನವರೆಗೂ ಚುನಾವಣಾ ಕೆಲಸಗಳು ಇದೆ. ಅಲ್ಲಿವರೆಗೆ ಯಾವ ಮ್ಯಾಚ್ ಗಳನ್ನ ನೋಡಲು ಹೋಗುವುದಿಲ್ಲ. ಆಮೇಲೆ ಬೇಕಾದ್ರೆ ನೋಡೊಣಾ. ಶಾಸಕರು ಎರಡು ಟಿಕೆಟ್ ಕೇಳಿದ್ರು ಮೊದಲು ಒಂದು ಕೊಡುತ್ತಿದ್ದರು, ಈಗ ಎರಡು ಟಿಕೆಟ್ ಕೊಟ್ಟಿದ್ದಾರೆ. ಇಷ್ಟ ಇದ್ದವರು ಹೋಗಬಹುದು, ಬೇಡ ಎಂದರೆ ಬಿಡಬಹುದು.
ಇದರಲ್ಲಿ ತಪ್ಪು ಸರಿ ಪ್ರಶ್ನೆ ಬರುವುದಿಲ್ಲ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

33 mins ago

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

3 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

3 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

3 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

6 hours ago