ಮೈಸೂರು ನಗರ

ಕೇಂದ್ರ ಸರ್ಕಾರ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್ ಮಂಡಿಸಿದೆ: ರೈತ ಹಳ್ಳಿಕೆರೆಹುಂಡಿ ಭಾಗ್ಯರಾಜ್

ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಬಜೆಟ್‌ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್‌ ಆಗಿದೆ ಎಂದು ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಇದು ರೈತರ ಅಭಿವೃದ್ಧಿಗೆ ಪೂರಕವಲ್ಲದ ಬಜೆಟ್ ಆಗಿದೆ. ರೈತ ಬೆಳೆದ ಬೆಳೆಗಳಿಗೆ ಎಂಎಸ್‌ಪಿ ಖಾತ್ರಿ ಕಾಯ್ದೆಯ ಜಾರಿ ಬಗ್ಗೆ ಕ್ರಮ ಕೈಗೊಂಡಿಲ್ಲ. ಬಜೆಟ್‌ನಲ್ಲಿ ಸ್ವಾಮಿನಾಥನ್‌ ವರದಿ ಜಾರಿಯ ಬಗ್ಗೆ ಕ್ರಮ ಕೈಗೊಂಡಿಲ್ಲ. ರೈತರ ಸಾಲ ಮನ್ನದ ಪ್ರಸ್ತಾಪವಿಲ್ಲ. ಕೃಷಿ ಸಾಲದ ನೀತಿ ರೈತನ ಹೊಲದಲ್ಲಿನ ಕಬ್ಬಿನ ದರದ ಬಗ್ಗೆ ಪ್ರಸ್ತಾಪವಿಲ್ಲ. ರೈತರ ಬೆಳೆ ವಿಮೆ ನೀತಿಯನ್ನು ವೈಯಕ್ತಿಕ ವಿಮೆ ರೀತಿ ಜಾರಿಗೆ ತರಬೇಕಾಗಿತ್ತು. ರೈತರ ಕೃಷಿ ಉತ್ಪನ್ನಗಳನ್ನು. ವರ್ಷಪೂರ್ತಿ ಖರೀದಿ ಕೇಂದ್ರಗಳ ಆರಂಭಕ್ಕೆ ಕ್ರಮ ಕೈಗೊಂಡಿಲ್ಲ. ಎಲ್ಲಾ ಕೃಷಿ ಬೆಳೆಗಳಿಗೆ ಬೆಂಬಲ ಬೆಲೆ ನೀಡಿ. ಬೆಲೆ ಕುಸಿತವಾದಾಗ ಖರೀದಿ ಮಾಡುವ ಯೋಜನೆಯನ್ನು ಪ್ರಕಟಣೆ ಮಾಡಿಲ್ಲ. ಕೇವಲ ತೆಂಗು ಗೋಡಂಬಿ ಶ್ರೀಗಂಧ ಬೆಳೆಗೆ ಮಾತ್ರ ವಿಶೇಷ ಗಮನಹರಿಸಿ ರೈತರ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬೆಂಗಳೂರಿನಲ್ಲಿ 11.86 ಕೋಟಿ ರೂ ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು 11.86 ಕೋಟಿ ರೂ ಮೌಲ್ಯದ ಮಾದಕವಸ್ತು ಜಪ್ತಿ ಮಾಡಿ ಇಬ್ಬರು ವಿದೇಶಿ ಮಹಿಳೆಯರು…

8 mins ago

ಸಂಸತ್‌ ವಿಶೇಷ ಅಧಿವೇಶನ: ಮೂರು ಮಹತ್ವದ ಮಸೂದೆ ಮಂಡನೆ

ನವದೆಹಲಿ: ಇಂದಿನಿಂದ ಆರಂಭವಾಗಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಿದೆ. ಸಂವಿಧಾನದ ತಿದ್ದುಪಡಿ ಮಸೂದೆ-2026,…

38 mins ago

ಪಶ್ಚಿಮಘಟ್ಟಗಳನ್ನು ಭವಿಷ್ಯದ ಪೀಳಿಗೆಯ ಜೀವನಾಡಿಯಾಗಿ ನೋಡಬೇಕು: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಪ್ರಕೃತಿ, ಪರಿಸರ ಸಂರಕ್ಷಣೆ ಹಾಗೂ ಹಸಿರು ಹೊದಿಕೆ ಹೆಚ್ಚಳದಲ್ಲಿ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದಾಗಿದೆ ಎಂದು…

1 hour ago

ಲೋಕಸಭೆಯಲ್ಲಿ ಮಹತ್ವದ ಕ್ಷೇತ್ರ ಮರುವಿಂಗಡಣೆ ಮಸೂದೆ ಮಂಡನೆ

ನವದೆಹಲಿ: ಕೇಂದ್ರ ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅವರು ಇಂದು ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ 2026ನ್ನು ಮಂಡಿಸಿದರು. ಈ…

2 hours ago

ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ತೀವ್ರ ವಿರೋಧ: ತಮಿಳುನಾಡು ಸಿಎಂ ಸ್ಟಾಲಿನ್‌ ಪ್ರತಿಭಟನೆ

ಚೆನ್ನೈ: ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,…

2 hours ago

ತಾಪಮಾನ ಏರಿಕೆ ಬೆನ್ನಲ್ಲೇ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…

2 hours ago