ಮೈಸೂರು ನಗರ

ಸಂವಿಧಾನವೇ ಭಾರತೀಯರ ಧರ್ಮಗ್ರಂಥ: ಪುರುಷೋತ್ತಮ್‌

ಮೈಸೂರು: ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬರೆದಿರುವ ಭಾರತದ ಸಂವಿಧಾನವೇ ಭಾರತೀಯರ ನಿಜವಾದ ಧರ್ಮಗ್ರಂಥ ಎಂದು ಮಾಜಿ ಮಹಾಪೌರ ಪುರುಷೋತ್ತಮ್‌ ಹೇಳಿದರು.

ಸಂವಿಧಾನ ದಿನಾಚರಣೆಯ ಅಂಗವಾಗಿ ಪುರಭವನದಲ್ಲಿ ಏರ್ಪಡಿಸಿದ್ದ ʼಭೀಮ್‌ ರತ್ನ ಪ್ರಶಸ್ತಿʼ ಪ್ರಧಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಸಂವಿಧಾನದ ಬಗ್ಗೆ ನಮಗೆ ಗೊತ್ತಿಲ್ಲ ಎಂದು ಹೇಳಿದರೆ ಅಂತಹವರು ಭಾರತೀಯರಾಗಲು ಸಾಧ್ಯವಿಲ್ಲ. ಸಂವಿಧಾನವನ್ನು ಪ್ರತಿಯೊಬ್ಬರು ಓದಿಕೊಳ್ಳಬೇಕು. ಎಲ್ಲರೂ ಸಂವಿಧಾನದ ಆಶಯಗಳನ್ನು ಗೌರವಿಸುವುದರ ಜೊತೆಗೆ, ಪಾಲೀಸಬೇಕು ಎಂದು ಸಲಹೆ ನೀಡಿದರು.

ಪ್ರಸ್ತುತ ಕಾಲಘಟ್ಟದಲ್ಲಿ ಮೂಲಭೂತವಾದಿಗಳು ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದು, ಡಾ.ಬಿ.ಆರ್‌.ಅಂಬೇಡ್ಕರ್‌ ರಚಿಸಿದ ಸಂವಿಧಾನವನ್ನು ಬದಲಾಯಿಸಿ ಜಾತಿ ಆಧಾರಿತ ಸಂವಿಧಾನ ಜಾರಿ ಮಾಡಲು ಸಂಚು ರೂಪಿಸುತ್ತಿದ್ದಾರೆ. ನಮ್ಮ ಸಂವಿಧಾನವನ್ನು ಯಾವುದೋ ಅರಮನೆಯಲ್ಲಿ, ಮಠದ ಮೂಲೆಯಲ್ಲಿ ಕುಳಿತು ಬರೆದ ಕೃತಿಯಲ್ಲ. ಆದ್ದರಿಂದ ಸಂವಿಧಾನ ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶದ ಸರ್ವತೋಮುಖ ಪ್ರಗತಿ ಮತ್ತು ಸರ್ವಜನರ ಏಳಿಗೆಯನ್ನು ಸಾಧಿಸುವ ಸದುದ್ದೇಶದಿಂದ ಸಮಾನತೆ, ಸಹೋದರತೆ, ಸಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಆಧಾರವಾಗಿಟ್ಟುಕೊಂಡು ಸಂವಿಧಾನವನ್ನು ರಚಿಸಿದ್ದಾರೆ. ಆದ್ದರಿಂದ ನಮ್ಮ ಸಂವಿಧಾನ ವಿಶ್ವಶ್ರೇಷ್ಠ ಸಂವಿಧಾನವಾಗಿದೆ ಎಂದು ತಿಳಿಸಿದರು.

ಹಿರಿಯ ಸಾಹಿತಿ ಬನ್ನೂರು ಕೆ.ರಾಜು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಬದುಕಿದ್ದಾಗ ಮಾತ್ರವಲ್ಲದೆ ಕಾಲವಾದಗಲೂ ಶೋಷಣೆಗೆ ಒಳಗಾಗುತ್ತಿದ್ದಾರೆ. ಅಂಬೇಡ್ಕರ್ ಮತ್ತು ಅವರ ಆಶಯಗಳ ವಿರುದ್ಧ ಕೆಲವು ಜಾತಿವಾದಿ ಮನಸ್ಥಿತಿಗಳು, ಪಟ್ಟಭದ್ರ ಹಿತಾಸಕ್ತಿಗಳು ಇಂದಿಗೂ ಶೋಷಣೆಯ ಅಸ್ತ್ರಗಳನ್ನು ಝಳಪಿಸುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಭೀಮ್ ಸೇನೆಯ ರಾಜ್ಯಾಧ್ಯಕ್ಷ ಎಸ್.ಸರ್ವೇಶ್, ಗೌರವಾಧ್ಯಕ್ಷ ಶಿವಕುಮಾರ್, ಉಸ್ತುವಾರಿ ಜಿ.ಎನ್.ದೇವದತ್ತ, ಯುವ ಘಟಕದ ಅಧ್ಯಕ್ಷ ಸಿ.ಮೋಹನ್‌ಕುಮಾರ್, ಉಪಾಧ್ಯಕ್ಷ ರಾದ ಎಂ.ಎಸ್.ವೈರಮುಡಿ, ಎಸ್.ಅಶೋಕ್ ಮತ್ತಿರರು ಕಾರ್ಯಕ್ರಮದಲ್ಲಿ ಉಪಸ್ಥತರಿದ್ದರು.

ಆಂದೋಲನ ಡೆಸ್ಕ್

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

43 mins ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

3 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

6 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

6 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

6 hours ago