ಮೈಸೂರು: ಮಹಾನಗರ ಪಾಲಿಕೆಯಲ್ಲಿ ಇ-ಖಾತಾ ಮಾಡಿಸಲು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮಾಜಿ ಮೇಯರ್ ಶಿವಕುಮಾರ್ ಕಿಡಿಕಾರಿದರು.
ಈ ಕುರಿತು ಮಾತನಾಡಿದ ಅವರು, ಕಳೆದ ಎರಡು ತಿಂಗಳಿನಿಂದ ಇ-ಖಾತಾ ಮಾಡಿಸಿಕೊಳ್ಳಲು ಸಾಧ್ಯವಾಗದೇ ಜನರು ಪರದಾಡುವಂತಾಗಿದೆ. ಸ್ವತಃ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲೆಯವರಾಗಿದ್ದರೂ ಸಮಸ್ಯೆ ಬಗೆಹರಿದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇ-ಖಾತಾ ವ್ಯವಸ್ಥೆ ಸಂಪೂರ್ಣ ಗೊಂದಲವಾಗಿದ್ದು, ಇದನ್ನು ಜಾರಿಗೆ ತರುವ ಮೊದಲು ಮನೆ ಮನೆಗೆ ತೆರಳಿ ಸರ್ವೇ ನಡೆಸಬೇಕಿತ್ತು. ಎಲ್ಲಾ ಆಸ್ತಿಗಳ ಡೇಟಾ ಸಂಗ್ರಹಣೆ ಬಳಿಕವೇ ಇ-ಖಾತಾ ಕಡ್ಡಾಯಗೊಳಿಸಬೇಕಾಗಿತ್ತು. ಆದರೆ ಯಾವುದೇ ಪೂರ್ವಸಿದ್ಧತೆ ಇಲ್ಲದೇ ತರಾತುರಿಯಲ್ಲಿ ಇ-ಖಾತಾ ಜಾರಿಗೊಳಿಸಲಾಗಿದೆ ಎಂದು ಟೀಕಿಸಿದರು.
ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…
ಇಸ್ಲಾಮಾಬಾದ್: ಉಗ್ರ ಮಸೂದ್ ಅಜರ್ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…
ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…
ಮಂಡ್ಯ: ಬೈಕ್ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…